<p><strong>ಬಾಗಲಕೋಟೆ:</strong> ಪ್ರಜೆಗಳ ಆತ್ಮಗೌರವ ಹೆಚ್ಚಿಸುವ ವಚನಗಳು ಪರಂಪರೆಯ ಅಪೂರ್ವ ಆಸ್ತಿಯಾಗಿವೆ. ಆತ್ಮ ಕಲ್ಯಾಣದೊಂದಿಗೆ ಸಮಾಜ ಕಲ್ಯಾಣವನ್ನೂ ಕಾರ್ಯಗತಗೊಳಿಸಲು ಹೋರಾಡಿ ಮಡಿದ ಹುತಾತ್ಮರ ಸಾಹಿತ್ಯವೇ ವಚನಗಳು ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.</p>.<p>ನಗರದ ಸಿದ್ಧರಾಮೇಶ್ವರ ಮಹಾಸಂಸ್ಥಾನ, ಶರಣಬಸವಾಶ್ರಮ ಸಹಯೋಗದಲ್ಲಿ ಶ್ರಾವಣ ಸೋಮವಾರದ ಅಡ್ಡಪಲ್ಲಕ್ಕಿ ಉತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ವಚನಗಳು ಚಳವಳಿ ಸಾಹಿತ್ಯ ಪ್ರಕಾರವಾಗಿವೆ. ವಿದ್ವತ್ ಸಾಹಿತ್ಯಕ್ಕಿಂತ ದೈಹಿಕ ಶ್ರಮದ ಸಾಹಿತ್ಯ ಹೇಗೆ ಭಿನ್ನವಾಗಿದೆ ಎಂಬುದನ್ನು ಕಾಣಬೇಕಾದರೆ ವಚನ ಸಾಹಿತ್ಯ ಅರಿತುಕೊಳ್ಳಬೇಕು ಎಂದರು.</p>.<p>ಕೊರಟಗೆರೆಯ ಮಹಾಲಿಂಗ ಸ್ವಾಮೀಜಿ ಮಾತನಾಡಿ, ಭಾರತದಲ್ಲಿ ಆತ್ಮೋದ್ಧಾರದ ಬಗ್ಗೆ ಉದಾತ್ತ ತತ್ವಗಳನ್ನು ಪ್ರತಿಪಾದಿಸುತ್ತ ಬಂದಿದ್ದರೂ ಸಮಾಜೋದ್ದಾರದ ಬಗ್ಗೆ ಉಪೇಕ್ಷೆ ಬೆಳೆದು, ಅಲ್ಲಿ ಶೋಷಣೆ ವರ್ಧಿಸುತ್ತ ಬಂದಿತ್ತು. 12ನೇ ಶತಮಾನದಲ್ಲಿ ಉಲ್ಬಣಗೊಂಡಿದ್ದ ಈ ವಿಷಮ ಪರಿಸ್ಥಿತಿ ನಾಶಗೊಳಿಸಿ. ಸಮಪರಿಸ್ಥಿತಿಯನ್ನು ಸ್ಥಾಪಿಸಲು ಹೋರಾಡಿದವರು ಕಲ್ಯಾಣದ ಶರಣರು. ಈ ಕಾರಣಕ್ಕಾಗಿ ಅವರು ಕೈಕೊಂಡ ಜನಪರ ಆಂದೋಲನ ದೇಶದ ಇತಿಹಾಸದಲ್ಲಿಯೇ ವಿಶಿಷ್ಟ ಘಟನೆಯಾಗಿದೆ ಎಂದು ಹೇಳಿದರು.</p>.<p>ಹಡಪದ ಗುರುಪೀಠದ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ ಮಾತನಾಡಿ, ಶರಣರ ಕಾಲಘಟ್ಟದಲ್ಲಿ ಪುರುಷ-ಸ್ತ್ರೀ, ಪ್ರಭು-ಪ್ರಜೆ, ಬ್ರಾಹ್ಮಣ-ಶೂದ್ರರಲ್ಲಿ ಸಮಾನತೆ ಸಾಧ್ಯವಿಲ್ಲವೆಂಬ ಭೇದ ಸಂಸ್ಕೃತಿ ಇತ್ತು. ಈಗ, ಶೂದ್ರನಿಗೆ ದೇವನಾಗುವ ಅರ್ಹತೆಯಿದೆ. ಸ್ತ್ರೀಗೂ ಪುರುಷನಷ್ಟು, ಪ್ರಜೆಗೂ ಪ್ರಭುವಿನಷ್ಟು, ಶೂದ್ರನಿಗೂ ಬ್ರಾಹ್ಮಣನಷ್ಟು ಅಧಿಕಾರವಿದೆ ಎಂದು ಶರಣರು ವಾದಿಸಿದರು. ಇದರ ಫಲವಾಗಿ, ಹೊಸ ಸಮಾಜವೊಂದು ಸೃಷ್ಟಿಯಾಯಿತು ಎಂದರು.</p>.<p>ಇರಕಲ್ ಮಠದ ಬಸವ ಪ್ರಸಾದ ಸ್ವಾಮೀಜಿ ಮಾತನಾಡಿ, ಮೂಲತಃ ವಚನ ಸಾಹಿತ್ಯ ಜನರಿಂದ ಜನರಿಗಾಗಿ ಹುಟ್ಟಿ, ಜನರ ಮಧ್ಯದಲ್ಲಿ ಬಾಳಿದ ಸಾಹಿತ್ಯವಾಗಿದೆ. ವಚನಗಳು ಆಚಾರ್ಯರ ಸಾಹಿತ್ಯವಲ್ಲ, ಅನುಭಾವಿಗಳ ಸಾಹಿತ್ಯ ಎಂದರು</p>.<p>ರಾಚಯ್ಯ ಶಾಸ್ತ್ರಿ, ಸಂಗನಗೌಡರ, ಕೃಷ್ಣರೆಡ್ಡಿ, ಮಲ್ಲಿಕಾರ್ಜುನ ಕೋಲ್ಹಾರ, ಸಿದ್ದರಾಮಪ್ಪ ಪಾತ್ರೋಟಿ, ಯಲ್ಲಪ್ಪ ಪಾತ್ರೋಟಿ, ಬಸವರಾಜ ಕೊಳ್ಳಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಪ್ರಜೆಗಳ ಆತ್ಮಗೌರವ ಹೆಚ್ಚಿಸುವ ವಚನಗಳು ಪರಂಪರೆಯ ಅಪೂರ್ವ ಆಸ್ತಿಯಾಗಿವೆ. ಆತ್ಮ ಕಲ್ಯಾಣದೊಂದಿಗೆ ಸಮಾಜ ಕಲ್ಯಾಣವನ್ನೂ ಕಾರ್ಯಗತಗೊಳಿಸಲು ಹೋರಾಡಿ ಮಡಿದ ಹುತಾತ್ಮರ ಸಾಹಿತ್ಯವೇ ವಚನಗಳು ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.</p>.<p>ನಗರದ ಸಿದ್ಧರಾಮೇಶ್ವರ ಮಹಾಸಂಸ್ಥಾನ, ಶರಣಬಸವಾಶ್ರಮ ಸಹಯೋಗದಲ್ಲಿ ಶ್ರಾವಣ ಸೋಮವಾರದ ಅಡ್ಡಪಲ್ಲಕ್ಕಿ ಉತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ವಚನಗಳು ಚಳವಳಿ ಸಾಹಿತ್ಯ ಪ್ರಕಾರವಾಗಿವೆ. ವಿದ್ವತ್ ಸಾಹಿತ್ಯಕ್ಕಿಂತ ದೈಹಿಕ ಶ್ರಮದ ಸಾಹಿತ್ಯ ಹೇಗೆ ಭಿನ್ನವಾಗಿದೆ ಎಂಬುದನ್ನು ಕಾಣಬೇಕಾದರೆ ವಚನ ಸಾಹಿತ್ಯ ಅರಿತುಕೊಳ್ಳಬೇಕು ಎಂದರು.</p>.<p>ಕೊರಟಗೆರೆಯ ಮಹಾಲಿಂಗ ಸ್ವಾಮೀಜಿ ಮಾತನಾಡಿ, ಭಾರತದಲ್ಲಿ ಆತ್ಮೋದ್ಧಾರದ ಬಗ್ಗೆ ಉದಾತ್ತ ತತ್ವಗಳನ್ನು ಪ್ರತಿಪಾದಿಸುತ್ತ ಬಂದಿದ್ದರೂ ಸಮಾಜೋದ್ದಾರದ ಬಗ್ಗೆ ಉಪೇಕ್ಷೆ ಬೆಳೆದು, ಅಲ್ಲಿ ಶೋಷಣೆ ವರ್ಧಿಸುತ್ತ ಬಂದಿತ್ತು. 12ನೇ ಶತಮಾನದಲ್ಲಿ ಉಲ್ಬಣಗೊಂಡಿದ್ದ ಈ ವಿಷಮ ಪರಿಸ್ಥಿತಿ ನಾಶಗೊಳಿಸಿ. ಸಮಪರಿಸ್ಥಿತಿಯನ್ನು ಸ್ಥಾಪಿಸಲು ಹೋರಾಡಿದವರು ಕಲ್ಯಾಣದ ಶರಣರು. ಈ ಕಾರಣಕ್ಕಾಗಿ ಅವರು ಕೈಕೊಂಡ ಜನಪರ ಆಂದೋಲನ ದೇಶದ ಇತಿಹಾಸದಲ್ಲಿಯೇ ವಿಶಿಷ್ಟ ಘಟನೆಯಾಗಿದೆ ಎಂದು ಹೇಳಿದರು.</p>.<p>ಹಡಪದ ಗುರುಪೀಠದ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ ಮಾತನಾಡಿ, ಶರಣರ ಕಾಲಘಟ್ಟದಲ್ಲಿ ಪುರುಷ-ಸ್ತ್ರೀ, ಪ್ರಭು-ಪ್ರಜೆ, ಬ್ರಾಹ್ಮಣ-ಶೂದ್ರರಲ್ಲಿ ಸಮಾನತೆ ಸಾಧ್ಯವಿಲ್ಲವೆಂಬ ಭೇದ ಸಂಸ್ಕೃತಿ ಇತ್ತು. ಈಗ, ಶೂದ್ರನಿಗೆ ದೇವನಾಗುವ ಅರ್ಹತೆಯಿದೆ. ಸ್ತ್ರೀಗೂ ಪುರುಷನಷ್ಟು, ಪ್ರಜೆಗೂ ಪ್ರಭುವಿನಷ್ಟು, ಶೂದ್ರನಿಗೂ ಬ್ರಾಹ್ಮಣನಷ್ಟು ಅಧಿಕಾರವಿದೆ ಎಂದು ಶರಣರು ವಾದಿಸಿದರು. ಇದರ ಫಲವಾಗಿ, ಹೊಸ ಸಮಾಜವೊಂದು ಸೃಷ್ಟಿಯಾಯಿತು ಎಂದರು.</p>.<p>ಇರಕಲ್ ಮಠದ ಬಸವ ಪ್ರಸಾದ ಸ್ವಾಮೀಜಿ ಮಾತನಾಡಿ, ಮೂಲತಃ ವಚನ ಸಾಹಿತ್ಯ ಜನರಿಂದ ಜನರಿಗಾಗಿ ಹುಟ್ಟಿ, ಜನರ ಮಧ್ಯದಲ್ಲಿ ಬಾಳಿದ ಸಾಹಿತ್ಯವಾಗಿದೆ. ವಚನಗಳು ಆಚಾರ್ಯರ ಸಾಹಿತ್ಯವಲ್ಲ, ಅನುಭಾವಿಗಳ ಸಾಹಿತ್ಯ ಎಂದರು</p>.<p>ರಾಚಯ್ಯ ಶಾಸ್ತ್ರಿ, ಸಂಗನಗೌಡರ, ಕೃಷ್ಣರೆಡ್ಡಿ, ಮಲ್ಲಿಕಾರ್ಜುನ ಕೋಲ್ಹಾರ, ಸಿದ್ದರಾಮಪ್ಪ ಪಾತ್ರೋಟಿ, ಯಲ್ಲಪ್ಪ ಪಾತ್ರೋಟಿ, ಬಸವರಾಜ ಕೊಳ್ಳಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>