<p><strong>ರಬಕವಿ ಬನಹಟ್ಟಿ:</strong> ‘63 ಪುರಾತನರನ್ನು ನಮಗೆ ನೀಡಿದ ಡಾ.ಹಳಕಟ್ಟಿಯವರು 64ನೇ ಪುರಾತನರಾಗಿದ್ದಾರೆ. ಅವರ ಜನ್ಮ ದಿನೋತ್ಸವ ನಾಡಿನ ಹಬ್ಬವಾಗಬೇಕು. ಹಳಕಟ್ಟಿಯವರ ತವರೂರು ಬನಹಟ್ಟಿ. ಹಳಕಟ್ಟಿಯವರ ಜನ್ಮ ದಿನೋತ್ಸವ ಬಸವಣ್ಣನವರಿಗೆ ಸಲ್ಲಿಸುವ ಗೌರವವಾಗಿದೆ’ ಎಂದು ಹಾರೂಗೇರಿ ನಿವೃತ್ತ ಪ್ರಾಚಾರ್ಯ ವಿ.ಎಸ್. ಮಾಳಿ ತಿಳಿಸಿದರು.</p>.<p>ಮಂಗಳವಾರ ಇಲ್ಲಿನ ಭದ್ರನವರ ಕಲ್ಯಾಣ ಮಂಟಪದಲ್ಲಿ ಡಾ.ಫ.ಗು.ಹಳಕಟ್ಟಿ ಅಭಿಮಾನಿ ಬಳದವರು ಹಮ್ಮಿಕೊಂಡ ಹಳಕಟ್ಟಿಯವರ ಜಯಂತ್ಯುತ್ಸವ ಮತ್ತು ‘ವಚನ ಪಂಚಾಮೃತ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.</p>.<p>ರಬಕವಿಯ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ ಮಾತನಾಡಿ, ‘ಹಳಕಟ್ಟಿಯವರ ಸಾಧನೆ ಮತ್ತು ಅವರಿಂದ ಸಂಶೋಧನೆ ಮಾಡಲ್ಪಟ್ಟ ವಚನ ಸಾಹಿತ್ಯವನ್ನು ಇಂದಿನ ಯುವಕರಿಗೆ ತಿಳಿಸುವಂತಾಗಬೇಕು. ಹಳಕಟ್ಟಿಯವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುವುದರ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕು’ ಎಂದು ನುಡಿದರು.</p>.<p>ಘೋಡಗೇರಿಯ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ, ಬನಹಟ್ಟಿಯ ಹಿರೇಮಠದ ಶರಣಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.</p>.<p>ಬಸವರಾಜ ಭದ್ರನವರ ಅಧ್ಯಕ್ಷತೆ ವಹಿಸಿದ್ದರು. ಸುರೇಶ ಕೋಲಾರ ಮಾತನಾಡಿದರು. ರಾಜಶೇಖರ ಮಾಲಾಪುರ, ಶ್ರೀಶೈಲ ಧಬಾಡಿ, ಶಂಕರ ಜುಂಜಪ್ಪನವರ, ಭೀಮಶಿ ಮಗದುಮ್, ವೀರೂಪಾಕ್ಷಪ್ಪ ಕೊಕಟನೂರ, ಶೈಲಜಾ ನುಚ್ಚಿ, ವೈ.ಬಿ.ಕೊರಡೂರ, ಮಹಾನಂದ ಕುಳ್ಳಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ‘63 ಪುರಾತನರನ್ನು ನಮಗೆ ನೀಡಿದ ಡಾ.ಹಳಕಟ್ಟಿಯವರು 64ನೇ ಪುರಾತನರಾಗಿದ್ದಾರೆ. ಅವರ ಜನ್ಮ ದಿನೋತ್ಸವ ನಾಡಿನ ಹಬ್ಬವಾಗಬೇಕು. ಹಳಕಟ್ಟಿಯವರ ತವರೂರು ಬನಹಟ್ಟಿ. ಹಳಕಟ್ಟಿಯವರ ಜನ್ಮ ದಿನೋತ್ಸವ ಬಸವಣ್ಣನವರಿಗೆ ಸಲ್ಲಿಸುವ ಗೌರವವಾಗಿದೆ’ ಎಂದು ಹಾರೂಗೇರಿ ನಿವೃತ್ತ ಪ್ರಾಚಾರ್ಯ ವಿ.ಎಸ್. ಮಾಳಿ ತಿಳಿಸಿದರು.</p>.<p>ಮಂಗಳವಾರ ಇಲ್ಲಿನ ಭದ್ರನವರ ಕಲ್ಯಾಣ ಮಂಟಪದಲ್ಲಿ ಡಾ.ಫ.ಗು.ಹಳಕಟ್ಟಿ ಅಭಿಮಾನಿ ಬಳದವರು ಹಮ್ಮಿಕೊಂಡ ಹಳಕಟ್ಟಿಯವರ ಜಯಂತ್ಯುತ್ಸವ ಮತ್ತು ‘ವಚನ ಪಂಚಾಮೃತ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.</p>.<p>ರಬಕವಿಯ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ ಮಾತನಾಡಿ, ‘ಹಳಕಟ್ಟಿಯವರ ಸಾಧನೆ ಮತ್ತು ಅವರಿಂದ ಸಂಶೋಧನೆ ಮಾಡಲ್ಪಟ್ಟ ವಚನ ಸಾಹಿತ್ಯವನ್ನು ಇಂದಿನ ಯುವಕರಿಗೆ ತಿಳಿಸುವಂತಾಗಬೇಕು. ಹಳಕಟ್ಟಿಯವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುವುದರ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕು’ ಎಂದು ನುಡಿದರು.</p>.<p>ಘೋಡಗೇರಿಯ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ, ಬನಹಟ್ಟಿಯ ಹಿರೇಮಠದ ಶರಣಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.</p>.<p>ಬಸವರಾಜ ಭದ್ರನವರ ಅಧ್ಯಕ್ಷತೆ ವಹಿಸಿದ್ದರು. ಸುರೇಶ ಕೋಲಾರ ಮಾತನಾಡಿದರು. ರಾಜಶೇಖರ ಮಾಲಾಪುರ, ಶ್ರೀಶೈಲ ಧಬಾಡಿ, ಶಂಕರ ಜುಂಜಪ್ಪನವರ, ಭೀಮಶಿ ಮಗದುಮ್, ವೀರೂಪಾಕ್ಷಪ್ಪ ಕೊಕಟನೂರ, ಶೈಲಜಾ ನುಚ್ಚಿ, ವೈ.ಬಿ.ಕೊರಡೂರ, ಮಹಾನಂದ ಕುಳ್ಳಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>