<p><strong>ಹುನಗುಂದ</strong>: ತಾಲ್ಲೂಕಿನ ಚಿತ್ತವಾಡಗಿ ಗ್ರಾಮದ ಆರಾಧ್ಯ ದೈವ ವೀರಭದ್ರೇಶ್ವರ ಕಾರ್ತಿಕೋತ್ಸವ ಮಂಗಳವಾರ ಸಂಭ್ರಮದಿಂದ ನಡೆಯಿತು.</p>.<p>ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಭಕ್ತರು ಆಗಮಿಸಿದ ವೀರಭದ್ರೇಶ್ವರನಿಗೆ ಕಾರ್ತಿಕ ದೀಪ ಹಚ್ಚಿ ಸಂಭ್ರಮಿಸಿದರು.</p>.<p>ವಿಶೇಷ ಅಲಂಕಾರ: ಕಾರ್ತಿಕೋತ್ಸವದ ನಿಮಿತ್ಯ ವೀರಭದ್ರೇಶ್ವರನಿಗೆ ವಿಶೇಷ ಅಲಂಕಾರ ಮಾಡಿದ್ದರು. ಭಕ್ತರು ಪೂಜೆ, ಅಭಿಷೇಕ ಮಾಡಿಸಿದರು. ದೇವಾಲಯದ ಸುತ್ತಮುತ್ತ ವಿದ್ಯುತ್ ದ್ವೀಪಗಳ ಅಲಂಕಾರ ಭಕ್ತರನ್ನು ಆಕರ್ಷಿಸಿತು. ವೀರಭದ್ರೇಶ್ವರನಿಗೆ ಕಾರ್ತಿಕ ದೀಪ ಹಚ್ಚಿದ ನಂತರ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<p>ಕಾರ್ತಿಕೋತ್ಸವದ ನಂತರ ನಡೆದ ಸಮಾರಂಭದಲ್ಲಿ ಅಮೀನಗಡ -ಯರಿಗೋನಾಳ ಪ್ರಭುಶಂಕರೇಶ್ವರ ಮಠದ ಶಂಕರರರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಕ್ಷೇತ್ರದ ಮಹಿಮೆ ಅಪಾರ. ಬದುಕಿನಲ್ಲಿ ಬರುವ ಕಷ್ಟ, ಸುಖಗಳನ್ನು ಸಮನಾಗಿ ಸ್ವೀಕರಿಸಿ’ ಎಂದರು.</p>.<p>ಗುಳೇದಗುಡ್ಡದ ಒಪ್ಪತ್ತೇಶ್ವರ ಸ್ವಾಮೀಜಿ ಮಾತನಾಡಿ, ‘ಜ್ಯೋತಿ ಎಲ್ಲರಿಗೂ ಸಮನಾಗಿ ಬೆಳಕು ಕೊಡುತ್ತದೆ. ಅದೇ ರೀತಿ ಎಲ್ಲರೂ ಅನ್ಯೊನ್ಯತೆಯಿಂದ ಬದುಕುಬೇಕು’ ಎಂದು ಸಲಹೆ ನೀಡಿದರು.</p>.<p>ಹುನಗುಂದ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮಾತನಾಡಿದರು.</p>.<p>ಪುರಗಿರಿ ಕೈಲಾಸಲಿಂಗ ಶಿವಾಚಾರ್ಯ ಸ್ವಾಮೀಜಿ, ಹುನಗುಂದ ಗಚ್ಚಿನಮಠದ ಅಮರೇಶ್ವರ ದೇವರು ಸಿಡಿಪಿಒ ಮುತ್ತಣ್ಣ ಅರಳಿ, ನಿವೃತ್ತ ಇಂಜನೀಯರ್ ಬಾಲಚಂದ್ರಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ತಾಲ್ಲೂಕಿನ ಚಿತ್ತವಾಡಗಿ ಗ್ರಾಮದ ಆರಾಧ್ಯ ದೈವ ವೀರಭದ್ರೇಶ್ವರ ಕಾರ್ತಿಕೋತ್ಸವ ಮಂಗಳವಾರ ಸಂಭ್ರಮದಿಂದ ನಡೆಯಿತು.</p>.<p>ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಭಕ್ತರು ಆಗಮಿಸಿದ ವೀರಭದ್ರೇಶ್ವರನಿಗೆ ಕಾರ್ತಿಕ ದೀಪ ಹಚ್ಚಿ ಸಂಭ್ರಮಿಸಿದರು.</p>.<p>ವಿಶೇಷ ಅಲಂಕಾರ: ಕಾರ್ತಿಕೋತ್ಸವದ ನಿಮಿತ್ಯ ವೀರಭದ್ರೇಶ್ವರನಿಗೆ ವಿಶೇಷ ಅಲಂಕಾರ ಮಾಡಿದ್ದರು. ಭಕ್ತರು ಪೂಜೆ, ಅಭಿಷೇಕ ಮಾಡಿಸಿದರು. ದೇವಾಲಯದ ಸುತ್ತಮುತ್ತ ವಿದ್ಯುತ್ ದ್ವೀಪಗಳ ಅಲಂಕಾರ ಭಕ್ತರನ್ನು ಆಕರ್ಷಿಸಿತು. ವೀರಭದ್ರೇಶ್ವರನಿಗೆ ಕಾರ್ತಿಕ ದೀಪ ಹಚ್ಚಿದ ನಂತರ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<p>ಕಾರ್ತಿಕೋತ್ಸವದ ನಂತರ ನಡೆದ ಸಮಾರಂಭದಲ್ಲಿ ಅಮೀನಗಡ -ಯರಿಗೋನಾಳ ಪ್ರಭುಶಂಕರೇಶ್ವರ ಮಠದ ಶಂಕರರರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಕ್ಷೇತ್ರದ ಮಹಿಮೆ ಅಪಾರ. ಬದುಕಿನಲ್ಲಿ ಬರುವ ಕಷ್ಟ, ಸುಖಗಳನ್ನು ಸಮನಾಗಿ ಸ್ವೀಕರಿಸಿ’ ಎಂದರು.</p>.<p>ಗುಳೇದಗುಡ್ಡದ ಒಪ್ಪತ್ತೇಶ್ವರ ಸ್ವಾಮೀಜಿ ಮಾತನಾಡಿ, ‘ಜ್ಯೋತಿ ಎಲ್ಲರಿಗೂ ಸಮನಾಗಿ ಬೆಳಕು ಕೊಡುತ್ತದೆ. ಅದೇ ರೀತಿ ಎಲ್ಲರೂ ಅನ್ಯೊನ್ಯತೆಯಿಂದ ಬದುಕುಬೇಕು’ ಎಂದು ಸಲಹೆ ನೀಡಿದರು.</p>.<p>ಹುನಗುಂದ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮಾತನಾಡಿದರು.</p>.<p>ಪುರಗಿರಿ ಕೈಲಾಸಲಿಂಗ ಶಿವಾಚಾರ್ಯ ಸ್ವಾಮೀಜಿ, ಹುನಗುಂದ ಗಚ್ಚಿನಮಠದ ಅಮರೇಶ್ವರ ದೇವರು ಸಿಡಿಪಿಒ ಮುತ್ತಣ್ಣ ಅರಳಿ, ನಿವೃತ್ತ ಇಂಜನೀಯರ್ ಬಾಲಚಂದ್ರಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>