<p><strong>ಬಾಗಲಕೋಟೆ </strong>: ಜಿಲ್ಲೆಯ ಹೂಲಗೇರಿ ಕ್ರಾಸ್ ಬಳಿ ಸಿದ್ದರಾಮಯ್ಯ ಅವರ ಜನ್ಮ ದಿನಕ್ಕೆ ಹೊರಟಿದ್ದ ಕ್ರೂಷರ್, ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಮೃತರಾಗಿದ್ದಾರೆ.</p>.<p>ಜಿಲ್ಲೆಯ ಮುಧೋಳ ತಾಲ್ಲೂಕಿನ ಹಿರೇಆಲಗುಂಡಿ ಬಿ.ಕೆ. ಹಾಗೂ ಚಿಕ್ಕ ಆಲಗುಂಡಿ ಗ್ರಾಮದವರು. ಮಂಗಳವಾರ ಸಂಜೆ ವಾಹನ ಗ್ರಾಮದಿಂದ ಹೊರಟಿತ್ತು.</p>.<p>ಚಿಕ್ಕ ಆಲಗುಂಡಿಯ ಪ್ರಕಾಶ ಬಡಿಗೇರ ಎಂಬುವವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಐವರನ್ನು ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.</p>.<p>ಜಿಲ್ಲಾ ಆಸ್ಪತ್ರೆಗೆ ಮಲ್ಲಪ್ಪ ಚಿಚಖಂಡಿ, ಮಂಜುನಾಥ ಚಿಚಖಂಡಿ, ಆನಂದ ಮುತ್ತಪ್ಪನವರ ಅವರನ್ನು ದಾಖಲಿಸಲಾಗಿದ್ದು, ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.</p>.<p><a href="https://www.prajavani.net/karnataka-news/siddaramaiah-comments-on-siddaramotsava-in-hubli-959845.html" itemprop="url">ಸಿದ್ದರಾಮೋತ್ಸವಶಕ್ತಿ ಪ್ರದರ್ಶನವಲ್ಲ,ಅಮೃತೋತ್ಸವ:ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ </strong>: ಜಿಲ್ಲೆಯ ಹೂಲಗೇರಿ ಕ್ರಾಸ್ ಬಳಿ ಸಿದ್ದರಾಮಯ್ಯ ಅವರ ಜನ್ಮ ದಿನಕ್ಕೆ ಹೊರಟಿದ್ದ ಕ್ರೂಷರ್, ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಮೃತರಾಗಿದ್ದಾರೆ.</p>.<p>ಜಿಲ್ಲೆಯ ಮುಧೋಳ ತಾಲ್ಲೂಕಿನ ಹಿರೇಆಲಗುಂಡಿ ಬಿ.ಕೆ. ಹಾಗೂ ಚಿಕ್ಕ ಆಲಗುಂಡಿ ಗ್ರಾಮದವರು. ಮಂಗಳವಾರ ಸಂಜೆ ವಾಹನ ಗ್ರಾಮದಿಂದ ಹೊರಟಿತ್ತು.</p>.<p>ಚಿಕ್ಕ ಆಲಗುಂಡಿಯ ಪ್ರಕಾಶ ಬಡಿಗೇರ ಎಂಬುವವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಐವರನ್ನು ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.</p>.<p>ಜಿಲ್ಲಾ ಆಸ್ಪತ್ರೆಗೆ ಮಲ್ಲಪ್ಪ ಚಿಚಖಂಡಿ, ಮಂಜುನಾಥ ಚಿಚಖಂಡಿ, ಆನಂದ ಮುತ್ತಪ್ಪನವರ ಅವರನ್ನು ದಾಖಲಿಸಲಾಗಿದ್ದು, ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.</p>.<p><a href="https://www.prajavani.net/karnataka-news/siddaramaiah-comments-on-siddaramotsava-in-hubli-959845.html" itemprop="url">ಸಿದ್ದರಾಮೋತ್ಸವಶಕ್ತಿ ಪ್ರದರ್ಶನವಲ್ಲ,ಅಮೃತೋತ್ಸವ:ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>