<p><strong>ರಬಕವಿ ಬನಹಟ್ಟಿ:</strong> ‘ರಬಕವಿ ಬನಹಟ್ಟಿ ತಾಲ್ಲೂಕಿನ ಪಶು ವೈದ್ಯಕೀಯ ಆಸ್ಪತ್ರೆಯ ನಿರ್ಮಾಣಕ್ಕೆ ಸೂಕ್ತ ಸ್ಥಳವನ್ನು ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯವನ್ನು ತೋರಿದ್ದು, ಈಗ ಇದ್ದ ಸ್ಥಳದಲ್ಲಿಯೇ ₹50 ಲಕ್ಷ ವೆಚ್ಚದಲ್ಲಿ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು’ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.</p>.<p>ಇಲ್ಲಿನ ಪಶು ಆಸ್ಪತ್ರೆಯ ಆವರಣದಲ್ಲಿಯೇ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.</p>.<p>‘ಬನಹಟ್ಟಿ ಬಸ್ ನಿಲ್ದಾಣದ ಹತ್ತಿರದ ಜಾಗವನ್ನು ನೀಡುವ ನಿಟ್ಟಿನಲ್ಲಿ ಗಮನ ನೀಡಲಾಗಿತ್ತು. ಇದು ಲೋಕೋಪಯೋಗಿ ನಿವೇಶನವಾಗಿತ್ತು. ಈ ಕುರಿತು ಬಾಗಲಕೋಟೆ ಜಿಲ್ಲಾಧಿಕಾರಿಗಳು ಕೂಡಾ ನಮ್ಮ ಗಮನಕ್ಕೆ ತೆಂದಿದ್ದರು. ಆದರೆ ಈಗ ಆ ಸ್ಥಳದ ಕುರಿತು ಸಮಸ್ಯೆಯಾಗಿದೆ. ಜಿಲ್ಲಾಧಿಕಾರಿಗೆ, ಉಪವಿಭಾಗಾಧಿಕಾರಿಗೆ ಮತ್ತು ತಹಶೀಲ್ದಾರ್ಗೆ ಸೂಕ್ತ ದಾಖಲೆಗಳನ್ನು ನೀಡುವಂತೆ ಎರಡು ವರ್ಷಗಳಿಂದ ತಿಳಿಸಲಾಗಿತ್ತು. ಆದರೆ ಯಾವುದೆ ಪ್ರಯೋಜನವಾಗಿಲ್ಲ’ ಎಂದು ಹೇಳಿದರು.</p>.<p>‘ಸುಸಜ್ಜಿತ ಪಶು ಆಸ್ಪತ್ರೆಯಿಂದ ರೈತರಿಗೆ ಅನುಕೂಲವಾಗುತ್ತದೆ. ಆದರೆ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ರೈತರಿಗೆ ಅನುಕೂಲವಾಗುವ ಕಾರ್ಯವನ್ನು ಮಾಡುವುದು ಬೇಡವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇಲಾಖೆಯ ಉಪನಿರ್ದೇಶಕ ಡಾ. ಶಿವಾನಂದ ಕರಡಿಗುಡ್ಡ, ತಾಲ್ಲೂಕು ಪಶು ವೈದ್ಯಾಧಿಕಾರಿ ಡಾ.ಬಸವರಾಜ ಗೌಡರ, ಜಯವಂತ ಮಿಳ್ಳಿ, ಈಶ್ವರ ಬಿರಾದಾರ ಪಾಟೀಲ, ಭೀಮಶಿ ಪಾಟೀಲ, ಗೌರಿ ಮಿಳ್ಳಿ, ಶ್ರೀಶೈಲ ಬೀಳಗಿ, ಪ್ರವೀಣ ಧಬಾಡಿ ಹಾಗೂ ತಾಲ್ಲೂಕಿನ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ‘ರಬಕವಿ ಬನಹಟ್ಟಿ ತಾಲ್ಲೂಕಿನ ಪಶು ವೈದ್ಯಕೀಯ ಆಸ್ಪತ್ರೆಯ ನಿರ್ಮಾಣಕ್ಕೆ ಸೂಕ್ತ ಸ್ಥಳವನ್ನು ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯವನ್ನು ತೋರಿದ್ದು, ಈಗ ಇದ್ದ ಸ್ಥಳದಲ್ಲಿಯೇ ₹50 ಲಕ್ಷ ವೆಚ್ಚದಲ್ಲಿ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು’ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.</p>.<p>ಇಲ್ಲಿನ ಪಶು ಆಸ್ಪತ್ರೆಯ ಆವರಣದಲ್ಲಿಯೇ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.</p>.<p>‘ಬನಹಟ್ಟಿ ಬಸ್ ನಿಲ್ದಾಣದ ಹತ್ತಿರದ ಜಾಗವನ್ನು ನೀಡುವ ನಿಟ್ಟಿನಲ್ಲಿ ಗಮನ ನೀಡಲಾಗಿತ್ತು. ಇದು ಲೋಕೋಪಯೋಗಿ ನಿವೇಶನವಾಗಿತ್ತು. ಈ ಕುರಿತು ಬಾಗಲಕೋಟೆ ಜಿಲ್ಲಾಧಿಕಾರಿಗಳು ಕೂಡಾ ನಮ್ಮ ಗಮನಕ್ಕೆ ತೆಂದಿದ್ದರು. ಆದರೆ ಈಗ ಆ ಸ್ಥಳದ ಕುರಿತು ಸಮಸ್ಯೆಯಾಗಿದೆ. ಜಿಲ್ಲಾಧಿಕಾರಿಗೆ, ಉಪವಿಭಾಗಾಧಿಕಾರಿಗೆ ಮತ್ತು ತಹಶೀಲ್ದಾರ್ಗೆ ಸೂಕ್ತ ದಾಖಲೆಗಳನ್ನು ನೀಡುವಂತೆ ಎರಡು ವರ್ಷಗಳಿಂದ ತಿಳಿಸಲಾಗಿತ್ತು. ಆದರೆ ಯಾವುದೆ ಪ್ರಯೋಜನವಾಗಿಲ್ಲ’ ಎಂದು ಹೇಳಿದರು.</p>.<p>‘ಸುಸಜ್ಜಿತ ಪಶು ಆಸ್ಪತ್ರೆಯಿಂದ ರೈತರಿಗೆ ಅನುಕೂಲವಾಗುತ್ತದೆ. ಆದರೆ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ರೈತರಿಗೆ ಅನುಕೂಲವಾಗುವ ಕಾರ್ಯವನ್ನು ಮಾಡುವುದು ಬೇಡವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇಲಾಖೆಯ ಉಪನಿರ್ದೇಶಕ ಡಾ. ಶಿವಾನಂದ ಕರಡಿಗುಡ್ಡ, ತಾಲ್ಲೂಕು ಪಶು ವೈದ್ಯಾಧಿಕಾರಿ ಡಾ.ಬಸವರಾಜ ಗೌಡರ, ಜಯವಂತ ಮಿಳ್ಳಿ, ಈಶ್ವರ ಬಿರಾದಾರ ಪಾಟೀಲ, ಭೀಮಶಿ ಪಾಟೀಲ, ಗೌರಿ ಮಿಳ್ಳಿ, ಶ್ರೀಶೈಲ ಬೀಳಗಿ, ಪ್ರವೀಣ ಧಬಾಡಿ ಹಾಗೂ ತಾಲ್ಲೂಕಿನ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>