ಬಾಗಲಕೋಟೆ: ಎದೆನೋವು ಕಾಣಿಸಿಕೊಂಡಿದ್ದ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಇಲ್ಲಿನ ಹಾನಗಲ್ ಕುಮಾರೇಶ್ಚರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಜಯಪುರದಿಂದ ಬೆಳಗಾವಿಗೆ ಹೋಗುವಾಗ ಬೀಳಗಿ ಬಳಿ ಇದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಬಾಗಲಕೋಟೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಾಯದಿಂದ ಪಾರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿದ್ದು, ಹೆಚ್ಚಿನ ತಪಾಸಣೆ ಮುಂದುವರಿದಿದೆ.
ಮಾಜಿ ಶಾಸಕ ವೀರಣ್ಣ ಚರಂತಿಮಠ ಆಸ್ಪತ್ರಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಕೆಲ ದಿನಗಳ ಹಿಂದೆಯೂ ಆರೋಗ್ಯದಲ್ಲಿ ತೊಂದರೆಯಾಗಿ ಚಿಕಿತ್ಸೆ ಪಡೆದಿದ್ದರು.