<p>ಹುನಗುಂದ: ತಾಲ್ಲೂಕಿನ ಚಿತ್ತವಾಡಗಿ ಗ್ರಾಮದಲ್ಲಿ ಶನಿವಾರ ಟ್ರ್ಯಾಕ್ಟರ್ ಟ್ರೈಲರ್ಗೆ ತುಂಬಿದ್ದ ಜೋಳದ ಮೇವಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೇವು ಸಂಪೂರ್ಣ ಸುಟ್ಟ ಕರಕಲಾಗಿದೆ.</p>.<p>ತಾಲ್ಲೂಕಿನ ಚಿಕ್ಕಬಾದವಾಡಗಿ ಗ್ರಾಮದ ರೈತರೊಬ್ಬರು ಯಡಹಳ್ಳಿ ಗ್ರಾಮದಿಂದ ಜಾನುವಾರುಗಳಿಗೆ ಜೋಳದ ಮೇವು ತಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.</p>.<p>ಸಾವಿರಾರೂ ರೂಪಾಯಿ ಕೊಟ್ಟು ರೈತರಿಂದ ಖರೀದಿ ಮಾಡಿದ್ದ ಮೇವು ಬೆಂಕಿಗೆ ಆಹುತಿಯಾಗಿರುವುದು ನೋವು ತೊಂದಿದೆ ಎಂದು ರೈತರು ಹೇಳಿದರು.</p>.<p>ಕೆಲವು ದಿನಗಳ ಹಿಂದೆ ಚಿತ್ತವಾಡಗಿ ಗ್ರಾಮದ ಮುಖ್ಯ ರಸ್ತೆಯನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಸಿಸಿ (ರಸ್ತೆ ) ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ ಮುಖ್ಯ ರಸ್ತೆ ಎತ್ತರವಾದ ಪರಿಣಾಮ ವಾಹನದ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳು ಹಾದುಹೋಗಿದ್ದು, ವಾಹನಗಳಿಗೆ ತಾಕುತ್ತಿವೆ. ಹೀಗಾಗಿ ಟ್ರ್ಯಾಕ್ಟರ್ ಗೆ ಬೆಂಕಿ ತಗುಲಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.</p>.<p>ಗ್ರಾಮದಲ್ಲಿ ಹತ್ತು ದಿನಗಳ ಹಿಂದೆ ಕಾಂಕ್ರಿಟ್ ತುಂಬಿಕೊಂಡು ಹೋಗುತ್ತಿದ್ದ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ತಂತಿ ತುಂಡಾಗಿ ಬಿದ್ದಿತ್ತು. ಅದೃಷ್ಟವಶಾತ್ ಯಾರಿಗೂ ಅಪಾಯವಾಗಲಿಲ್ಲ. ಈ ರೀತಿ ಘಟನೆಗಳು ನಡೆಯುತ್ತಿದ್ದರೂ ಸಂಬಂಧಪಟ್ಟವರು ನಿರ್ಲಕ್ಷ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ಗುತ್ತಿಗೆ ಪಡೆದವರು ವಿದ್ಯುತ್ ಇಲಾಖೆ ಸಂಪರ್ಕಿಸಿ ಮುಖ್ಯ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವುದರ ಬಗ್ಗೆ ಮಾಹಿತಿ ನೀಡಬೇಕು. ಆದರೆ ಗುತ್ತಿಗೆದಾರರು ನಮ್ಮ ಇಲಾಖೆಯನ್ನು ಸಂಪರ್ಕಿಸದೆ ಕಾಮಗಾರಿ ಕೈಗೊಂಡಿರುವುದು ಈ ರೀತಿ ಘಟನೆಗೆ ಕಾರಣವಾಗುತ್ತಿದೆ. ಎಂದು ಹೆಸ್ಕಾಂ ಉಪ ವಿಭಾಗದ ಶಾಖಾ ವ್ಯವಸ್ಥಾಪಕ ದತ್ತು ದಾಯಿಗುಡಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-19-1043649453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುನಗುಂದ: ತಾಲ್ಲೂಕಿನ ಚಿತ್ತವಾಡಗಿ ಗ್ರಾಮದಲ್ಲಿ ಶನಿವಾರ ಟ್ರ್ಯಾಕ್ಟರ್ ಟ್ರೈಲರ್ಗೆ ತುಂಬಿದ್ದ ಜೋಳದ ಮೇವಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೇವು ಸಂಪೂರ್ಣ ಸುಟ್ಟ ಕರಕಲಾಗಿದೆ.</p>.<p>ತಾಲ್ಲೂಕಿನ ಚಿಕ್ಕಬಾದವಾಡಗಿ ಗ್ರಾಮದ ರೈತರೊಬ್ಬರು ಯಡಹಳ್ಳಿ ಗ್ರಾಮದಿಂದ ಜಾನುವಾರುಗಳಿಗೆ ಜೋಳದ ಮೇವು ತಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.</p>.<p>ಸಾವಿರಾರೂ ರೂಪಾಯಿ ಕೊಟ್ಟು ರೈತರಿಂದ ಖರೀದಿ ಮಾಡಿದ್ದ ಮೇವು ಬೆಂಕಿಗೆ ಆಹುತಿಯಾಗಿರುವುದು ನೋವು ತೊಂದಿದೆ ಎಂದು ರೈತರು ಹೇಳಿದರು.</p>.<p>ಕೆಲವು ದಿನಗಳ ಹಿಂದೆ ಚಿತ್ತವಾಡಗಿ ಗ್ರಾಮದ ಮುಖ್ಯ ರಸ್ತೆಯನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಸಿಸಿ (ರಸ್ತೆ ) ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ ಮುಖ್ಯ ರಸ್ತೆ ಎತ್ತರವಾದ ಪರಿಣಾಮ ವಾಹನದ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳು ಹಾದುಹೋಗಿದ್ದು, ವಾಹನಗಳಿಗೆ ತಾಕುತ್ತಿವೆ. ಹೀಗಾಗಿ ಟ್ರ್ಯಾಕ್ಟರ್ ಗೆ ಬೆಂಕಿ ತಗುಲಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.</p>.<p>ಗ್ರಾಮದಲ್ಲಿ ಹತ್ತು ದಿನಗಳ ಹಿಂದೆ ಕಾಂಕ್ರಿಟ್ ತುಂಬಿಕೊಂಡು ಹೋಗುತ್ತಿದ್ದ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ತಂತಿ ತುಂಡಾಗಿ ಬಿದ್ದಿತ್ತು. ಅದೃಷ್ಟವಶಾತ್ ಯಾರಿಗೂ ಅಪಾಯವಾಗಲಿಲ್ಲ. ಈ ರೀತಿ ಘಟನೆಗಳು ನಡೆಯುತ್ತಿದ್ದರೂ ಸಂಬಂಧಪಟ್ಟವರು ನಿರ್ಲಕ್ಷ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ಗುತ್ತಿಗೆ ಪಡೆದವರು ವಿದ್ಯುತ್ ಇಲಾಖೆ ಸಂಪರ್ಕಿಸಿ ಮುಖ್ಯ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವುದರ ಬಗ್ಗೆ ಮಾಹಿತಿ ನೀಡಬೇಕು. ಆದರೆ ಗುತ್ತಿಗೆದಾರರು ನಮ್ಮ ಇಲಾಖೆಯನ್ನು ಸಂಪರ್ಕಿಸದೆ ಕಾಮಗಾರಿ ಕೈಗೊಂಡಿರುವುದು ಈ ರೀತಿ ಘಟನೆಗೆ ಕಾರಣವಾಗುತ್ತಿದೆ. ಎಂದು ಹೆಸ್ಕಾಂ ಉಪ ವಿಭಾಗದ ಶಾಖಾ ವ್ಯವಸ್ಥಾಪಕ ದತ್ತು ದಾಯಿಗುಡಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-19-1043649453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>