<p>ಕುಳಗೇರಿ ಕ್ರಾಸ್: ಕುಳಗೇರಿ ಹೋಬಳಿಯ ಹಾಗನೂರ ಮತ್ತು ಕಾಕನೂರ, ಚಿಮ್ಮನಕಟ್ಟಿ ಸೇರಿದಂತೆ ಹಲವೂ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಭಾರಿ ಗಾಳಿ, ಮಳೆಗೆ ಸುಮಾರು 100ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ್ದು,ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಹಾಗನೂರ ಗ್ರಾಮಸ್ಥರಿಗೆ ನಾಲ್ಕೈದು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ, ಗ್ರಾಮಸ್ಥರು ಮೊಬೈಲ್ ಚಾರ್ಚ್ ಮಾಡಿಕೊಳ್ಳಲು ತಮ್ಮ ತಮ್ಮ ಸಂಬಂಧಿಕರ ಗ್ರಾಮಗಳಿಗೆ ತೆರಳುತ್ತಿದ್ದಾರೆ.</p>.<p>ಕಾಕನೂರ ಗ್ರಾಮದಲ್ಲಿಯೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ಉಂಟಾಗಿ ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬವಾಗಿದ್ದರಿಂದ ಬಹುತೇಕ ಜನರು ಪಕ್ಕದ ನೀರಲಕಕೇರಿ ಗ್ರಾಮಕ್ಕೆ ತೆರಳಿ ಕುಡಿಯುವ ನೀರು ತರುತ್ತಿದ್ದಾರೆ.</p>.<p>ಕುಳಗೇರಿ ಹೋಬಳಿಯ ಸುತ್ತಮುತ್ತ ಉಂಟಾಗಿರುವ ಸಮಸ್ಯೆ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದ ಸಮಸ್ಯೆಯಿರುವ ಗ್ರಾಮಗಳಿಗೆ ಪರ್ಯಾಯ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಹೆಸ್ಕಾಂ ಶಾಖಾಧಿಕಾರಿ ಬಾಲಚಂದ್ರ ಕೊಳ್ಳಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-19-164324406</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಳಗೇರಿ ಕ್ರಾಸ್: ಕುಳಗೇರಿ ಹೋಬಳಿಯ ಹಾಗನೂರ ಮತ್ತು ಕಾಕನೂರ, ಚಿಮ್ಮನಕಟ್ಟಿ ಸೇರಿದಂತೆ ಹಲವೂ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಭಾರಿ ಗಾಳಿ, ಮಳೆಗೆ ಸುಮಾರು 100ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ್ದು,ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಹಾಗನೂರ ಗ್ರಾಮಸ್ಥರಿಗೆ ನಾಲ್ಕೈದು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ, ಗ್ರಾಮಸ್ಥರು ಮೊಬೈಲ್ ಚಾರ್ಚ್ ಮಾಡಿಕೊಳ್ಳಲು ತಮ್ಮ ತಮ್ಮ ಸಂಬಂಧಿಕರ ಗ್ರಾಮಗಳಿಗೆ ತೆರಳುತ್ತಿದ್ದಾರೆ.</p>.<p>ಕಾಕನೂರ ಗ್ರಾಮದಲ್ಲಿಯೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ಉಂಟಾಗಿ ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬವಾಗಿದ್ದರಿಂದ ಬಹುತೇಕ ಜನರು ಪಕ್ಕದ ನೀರಲಕಕೇರಿ ಗ್ರಾಮಕ್ಕೆ ತೆರಳಿ ಕುಡಿಯುವ ನೀರು ತರುತ್ತಿದ್ದಾರೆ.</p>.<p>ಕುಳಗೇರಿ ಹೋಬಳಿಯ ಸುತ್ತಮುತ್ತ ಉಂಟಾಗಿರುವ ಸಮಸ್ಯೆ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದ ಸಮಸ್ಯೆಯಿರುವ ಗ್ರಾಮಗಳಿಗೆ ಪರ್ಯಾಯ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಹೆಸ್ಕಾಂ ಶಾಖಾಧಿಕಾರಿ ಬಾಲಚಂದ್ರ ಕೊಳ್ಳಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-19-164324406</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>