<p>ಕೆರೂರ: ಇತ್ತಿಚಿಗೆ ಹೋಬಳಿಯ ನೀರಬೂದಿಹಾಳ, ಯಂಡಿಗೇರಿ, ಕರಡಿಗುಡ್ಡ ಎಸ್.ಎ ಗ್ರಾಮಗಳಲ್ಲಿ ಆಲಿಕಲ್ಲು ಮಳೆಯಿಂದ ಹಾನಿಯಾದ ರೈತರ ಜಮೀನುಗಳಿಗೆ ಶಾಸಕ ಜೆ.ಟಿ.ಪಾಟೀಲ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಹಾನಿಯಾದ ಜಮೀನುಗಳನ್ನು ವೀಕ್ಷಿಸಿದ ಶಾಸಕ, ‘ಹಾನಿಯಾದ ಜಮೀನುಗಳ ಸರ್ವೆ ಕಾರ್ಯವನ್ನು ಶೀಘವೇ ಪ್ರಾರಂಭಿಸಬೇಕು’ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಸರ್ವೆ ಕಾರ್ಯ ಮುಗಿದ ಬಳಿಕ ಸರ್ಕಾರದಿಂದ ಪರಿಹಾರ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದರು.</p>.<p>ಅಕಾಲಿಕ ಆಲಿಕಲ್ಲು ಮಳೆಗೆ ಹೊಲದ ದಡ್ಡಿಯಲ್ಲಿದ್ದ ಆಡು ಮತ್ತು ಕುರಿಗಳು ಮೃತಪಟ್ಟಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದರು. ‘ಮೃತಪಟ್ಟ ಕುರಿಗಳ ವರದಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು ಪರಿಹಾರಕ್ಕೆ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.</p>.<p>ಗಿರೀಶ ನಾಡಗೌಡರ, ಪ್ರವೀಣ ಚಿಕ್ಕೂರ, ಅಶೋಕ ಕೊಪ್ಪದ, ವೆಂಕಟೇಶ ಜಂಬಗಿ, ಉಪ ತಹಶೀಲ್ದಾರ್ ವಿರೇಶ ಬಡಿಗೇರ, ಕೆರೂರ ವೃತ್ತ ನಿರೀಕ್ಷಕ ಆನಂದ ಭಾವಿಮಠ, ಸಹಾಯಕ ಕೃಷಿ ಅಧಿಕಾರಿ ಪರಶುರಾಮ ಗಣಿ, ಗ್ರಾಮ ಆಡಳಿತ ಅಧಿಕಾರಿ ಸಿ.ಎಫ್.ನಧಾಫ್ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-19-1746753405</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆರೂರ: ಇತ್ತಿಚಿಗೆ ಹೋಬಳಿಯ ನೀರಬೂದಿಹಾಳ, ಯಂಡಿಗೇರಿ, ಕರಡಿಗುಡ್ಡ ಎಸ್.ಎ ಗ್ರಾಮಗಳಲ್ಲಿ ಆಲಿಕಲ್ಲು ಮಳೆಯಿಂದ ಹಾನಿಯಾದ ರೈತರ ಜಮೀನುಗಳಿಗೆ ಶಾಸಕ ಜೆ.ಟಿ.ಪಾಟೀಲ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಹಾನಿಯಾದ ಜಮೀನುಗಳನ್ನು ವೀಕ್ಷಿಸಿದ ಶಾಸಕ, ‘ಹಾನಿಯಾದ ಜಮೀನುಗಳ ಸರ್ವೆ ಕಾರ್ಯವನ್ನು ಶೀಘವೇ ಪ್ರಾರಂಭಿಸಬೇಕು’ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಸರ್ವೆ ಕಾರ್ಯ ಮುಗಿದ ಬಳಿಕ ಸರ್ಕಾರದಿಂದ ಪರಿಹಾರ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದರು.</p>.<p>ಅಕಾಲಿಕ ಆಲಿಕಲ್ಲು ಮಳೆಗೆ ಹೊಲದ ದಡ್ಡಿಯಲ್ಲಿದ್ದ ಆಡು ಮತ್ತು ಕುರಿಗಳು ಮೃತಪಟ್ಟಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದರು. ‘ಮೃತಪಟ್ಟ ಕುರಿಗಳ ವರದಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು ಪರಿಹಾರಕ್ಕೆ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.</p>.<p>ಗಿರೀಶ ನಾಡಗೌಡರ, ಪ್ರವೀಣ ಚಿಕ್ಕೂರ, ಅಶೋಕ ಕೊಪ್ಪದ, ವೆಂಕಟೇಶ ಜಂಬಗಿ, ಉಪ ತಹಶೀಲ್ದಾರ್ ವಿರೇಶ ಬಡಿಗೇರ, ಕೆರೂರ ವೃತ್ತ ನಿರೀಕ್ಷಕ ಆನಂದ ಭಾವಿಮಠ, ಸಹಾಯಕ ಕೃಷಿ ಅಧಿಕಾರಿ ಪರಶುರಾಮ ಗಣಿ, ಗ್ರಾಮ ಆಡಳಿತ ಅಧಿಕಾರಿ ಸಿ.ಎಫ್.ನಧಾಫ್ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-19-1746753405</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>