<p><strong>ಕೆರೂರ:</strong> ‘ಅಬಿವೃದ್ದಿ ಹಾಗೂ ಪ್ರಾಮಾಣಿಕತೆಯ ಮುಂದೆ ಹಣ ಬಲದ ಪ್ರಯೋಗ ನಡೆಯಲ್ಲ ಎಂದು ಬೀಳಗಿ ಮತಕ್ಷೇತ್ರದ ಮತದಾರರು ತೋರಿಸಿಕೊಟ್ಟಿದ್ದಾರೆ’ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.</p>.<p>ಸಮೀಪದ ಅನವಾಲ ಗ್ರಾಮದಲ್ಲಿ ಬುಧವಾರ ನಡೆದ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ಅನವಾಲ ಏತ ನೀರಾವರಿ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು</p>.<p>ಗ್ರಾಮದ ಮೂಲಸೌಕರ್ಯಗಳಾದ ಕುಡಿಯುವ ನೀರಿನ ಯೋಜನೆ, ಪ್ರಾಥಮೀಕ ಆರೋಗ್ಯ ಕೇಂದ್ರ, ಪ್ರೌಢ ಶಾಲೆ, ರಸ್ತೆ ಡಾಂಬರೀಕರಣ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಮುದಾಯ ಭವನಗಳ ಬಗ್ಗೆ ಗ್ರಾಮಸ್ಥರು ಶಾಸಕರ ಮುಂದೆ ಅಹವಾಲು ನೀಡಿದರು.</p>.<p>ಅಹವಾಲು ಸ್ವೀಕರಿಸಿ ಮಾತನಾಡಿದ ಶಾಸಕರು, ಗ್ರಾಮ ಪಂಚಾಯತಿಗೆ ಸಾಕಷ್ಟು ಅನುದಾನ ಬರುತ್ತದೆ, ಕೆಲವು ಮೂಲ ಸೌಕರ್ಯಗಳನ್ನು ನರೇಗಾ ಯೋಜನೆಯಡಿ ಮಾಡುವಂತೆ ಸ್ಥಳದಲ್ಲಿಯೇ ಇದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗೆ ತಿಳಿಸಿದರು. ಉಳಿದ ಯೋಜನೆಗಳನ್ನು ಹಾಗೂ ಸ್ಮಾರ್ಟಕ್ಲಾಸ್ ಶಾಸಕ ಅನುದಾನದಲ್ಲಿ ಮಾಡಿಕೊಡುತ್ತೇನೆ’ ಎಂದರು.</p>.<p>ಬಸವಪ್ರಭು ಸರನಾಡಗೌಡ, ಕಮಲಗೌಡ ಪಾಟೀಲ, ಮಂಜು ಪಮ್ಮಾರ, ರವಿ ಮಠ,ಅ ಶೋಕ ರೂಗಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ:</strong> ‘ಅಬಿವೃದ್ದಿ ಹಾಗೂ ಪ್ರಾಮಾಣಿಕತೆಯ ಮುಂದೆ ಹಣ ಬಲದ ಪ್ರಯೋಗ ನಡೆಯಲ್ಲ ಎಂದು ಬೀಳಗಿ ಮತಕ್ಷೇತ್ರದ ಮತದಾರರು ತೋರಿಸಿಕೊಟ್ಟಿದ್ದಾರೆ’ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.</p>.<p>ಸಮೀಪದ ಅನವಾಲ ಗ್ರಾಮದಲ್ಲಿ ಬುಧವಾರ ನಡೆದ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ಅನವಾಲ ಏತ ನೀರಾವರಿ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು</p>.<p>ಗ್ರಾಮದ ಮೂಲಸೌಕರ್ಯಗಳಾದ ಕುಡಿಯುವ ನೀರಿನ ಯೋಜನೆ, ಪ್ರಾಥಮೀಕ ಆರೋಗ್ಯ ಕೇಂದ್ರ, ಪ್ರೌಢ ಶಾಲೆ, ರಸ್ತೆ ಡಾಂಬರೀಕರಣ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಮುದಾಯ ಭವನಗಳ ಬಗ್ಗೆ ಗ್ರಾಮಸ್ಥರು ಶಾಸಕರ ಮುಂದೆ ಅಹವಾಲು ನೀಡಿದರು.</p>.<p>ಅಹವಾಲು ಸ್ವೀಕರಿಸಿ ಮಾತನಾಡಿದ ಶಾಸಕರು, ಗ್ರಾಮ ಪಂಚಾಯತಿಗೆ ಸಾಕಷ್ಟು ಅನುದಾನ ಬರುತ್ತದೆ, ಕೆಲವು ಮೂಲ ಸೌಕರ್ಯಗಳನ್ನು ನರೇಗಾ ಯೋಜನೆಯಡಿ ಮಾಡುವಂತೆ ಸ್ಥಳದಲ್ಲಿಯೇ ಇದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗೆ ತಿಳಿಸಿದರು. ಉಳಿದ ಯೋಜನೆಗಳನ್ನು ಹಾಗೂ ಸ್ಮಾರ್ಟಕ್ಲಾಸ್ ಶಾಸಕ ಅನುದಾನದಲ್ಲಿ ಮಾಡಿಕೊಡುತ್ತೇನೆ’ ಎಂದರು.</p>.<p>ಬಸವಪ್ರಭು ಸರನಾಡಗೌಡ, ಕಮಲಗೌಡ ಪಾಟೀಲ, ಮಂಜು ಪಮ್ಮಾರ, ರವಿ ಮಠ,ಅ ಶೋಕ ರೂಗಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>