ಗ್ರಾಮದ ದುರ್ಗಾದೇವಿ ಮಂದಿರದ ಕುಮಾರ ಮಹಾರಾಜರ ಸಮ್ಮುಖದಲ್ಲಿ ಸಭೆ ಸೇರಿದ್ದ ಗ್ರಾಮಸ್ಥರು, ಕೆಲವು ವರ್ವಗಳ ಹಿಂದಷ್ಟೇ ನಮ್ಮದು ಪ್ರತ್ಯೇಕ ಗ್ರಾ.ಪಂ ಆಗಿದ್ದು, ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗುತ್ತಿದೆ. ಜೊತೆಗೆ ಪ.ಪಂಗೆ ನಮ್ಮ ಗ್ರಾಮವನ್ನು ಸೇರಿಸುವುದರಿಂದ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೋಟಾದ ಅವಕಾಶ ತಪ್ಪಿ ಭವಿಷ್ಯ ಹಾಳಾಗುತ್ತದೆ ಎಂದು ಪೌರಾಡಳಿತ ಸಚಿವರು, ಪಂಚಾಯತ್ ರಾಜ್ ಸಚಿವರು, ಜಿಲ್ಲಾ ಉಸ್ತುವಾರಿ ಮಂತ್ರಿ, ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿಗಳು, ಬೆಳಗಾವಿ ವಿಭಾಗೀಯ ಆಯುಕ್ತರಿಗೆ ಪತ್ರದ ಮುಖೇನ ತಿಳಿಸಿದ್ದಾರೆ.