‘ಕಳೆದ ವರ್ಷ ಈ ರಸ್ತೆ ನಿರ್ಮಾಣವಾಗಿದ್ದು, ಈಗ ಸಂಪೂರ್ಣ ಗುಂಡಿ ಬಿದ್ದಿದೆ. ರಸ್ತೆ ನಿರ್ಮಾಣ ಕಾಮಗಾರಿಯೂ ಸಂಪೂರ್ಣ ಕಳಪೆಯಾಗಿದೆ. ರಸ್ತೆಯಲ್ಲಿನ ಹಳೆಯದಾದ ಸೇತುವೆಗಳು ಸಹ ಶಿಥಿಲಗೊಂಡಿದ್ದರಿಂದ ಬೃಹತ್ ಗುಂಡಿಗಳು ಬಿದ್ದಿವೆ, ಇದರಿಂದ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಬಾದಾಮಿ ಶಾಸಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಳಪೆ ಕಾಮಗಾರಿ ಕೈಗೊಂಡ ಗುತ್ತಿಗೆದಾರರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು’ ಎಂದು ಸೋಮನಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಹನಮಂತ ಪೂಜಾರ ಒತ್ತಾಯಿಸಿದ್ದಾರೆ.