<p><strong>ಹುನಗುಂದ: ‘</strong>ನಿರಾಣಿ ಸಮೂಹ ಸಂಸ್ಥೆ ಸಾಮಾಜಿಕ ಸೇವೆ ಜೊತೆಗೆ ರೈತರ ಪ್ರಗತಿಗೆ ಸದಾ ಬೆನ್ನಲುಬಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.</p>.<p>ಪಟ್ಟಣದ ಕಡಪಟ್ಟಿ ಸಂಕೀರ್ಣದಲ್ಲಿ ಭಾನುವಾರ ಆರಂಭಗೊಂಡ ವಿಶಾಲ (ಎಂಆರ್ ಎನ್) ಸೌಹಾರ್ದ ಪತ್ತಿನ ಸಹಕಾರ ಸಂಘದ 8ನೇ ಶಾಖೆ ಕಚೇರಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p> ‘ಸಂಘದಲ್ಲಿ 6,077 ಸದಸ್ಯರು, ₹2.38 ಕೋಟಿ ಶೇರು ಬಂಡವಾಳ, ₹109.24 ಕೋಟಿ ಸಾಲ ನೀಡಿದ್ದು, 2024-25ನೇ ಸಾಲಿನಲ್ಲಿ ₹1.26 ಕೋಟಿ ಲಾಭ ಗಳಿಸಿದೆ. ಪಟ್ಟಣದಲ್ಲಿ 8ನೇ ಶಾಖೆ ಆರಂಭಿಸಿದ್ದು, ರೈತರು ಮತ್ತು ವ್ಯಾಪಾರಸ್ಥರು ಸಂಘದ ಸದುಪಯೋಗ ಪಡೆದುಕೊಳ್ಳಿ’ ಎಂದರು.</p>.<p>ಅಮೀನಗಡದ ಶಂಕರ ರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಹಣ ಪಡೆಯುವಾಗಿನ ವಿಶ್ವಾಸ, ಹಣ ಮರಳಿಸುವಾಗಲೂ ಇರಲಿ. ನಿರಾಣಿ ಸಮೂಹ ಸಂಸ್ಥೆ ಹೆಚ್ಚಿನ ಪ್ರಗತಿ ಹೊಂದಲಿ’ ಎಂದು ಹೇಳಿದರು.</p>.<p>ಶಾಸಕ ವಿಜಯಾನಂದ ಕಾಶಪ್ಪನವರ ವಿಶಾಲ ಸೌಹಾರ್ದ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿನ ಗಣಕಯಂತ್ರಕ್ಕೆ ಚಾಲನೆ ನೀಡಿದರು.</p>.<p>ಪುರತಗೇರಿಯ ಕೈಲಾಸಲಿಂಗ ಶಿವಾಚಾರ್ಯ, ಮಾಜಿ ಶಾಸಕ ಎಸ್. ಜಿ.ನಂಜಯ್ಯನಮಠ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷೆ ರಾಜಮ್ಮ ಬದಾಮಿ, ಶಕುಂತಲಾ ಗಂಜಿಹಾಳ, ಮುಖಂಡರಾದ ಜಿ.ಜಿ.ಪಾಟೀಲ, ಎಲ್.ಎಂ.ಪಾಟೀಲ, ಶೇಖರಪ್ಪ ಬಾದವಾಡಗಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ: ‘</strong>ನಿರಾಣಿ ಸಮೂಹ ಸಂಸ್ಥೆ ಸಾಮಾಜಿಕ ಸೇವೆ ಜೊತೆಗೆ ರೈತರ ಪ್ರಗತಿಗೆ ಸದಾ ಬೆನ್ನಲುಬಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.</p>.<p>ಪಟ್ಟಣದ ಕಡಪಟ್ಟಿ ಸಂಕೀರ್ಣದಲ್ಲಿ ಭಾನುವಾರ ಆರಂಭಗೊಂಡ ವಿಶಾಲ (ಎಂಆರ್ ಎನ್) ಸೌಹಾರ್ದ ಪತ್ತಿನ ಸಹಕಾರ ಸಂಘದ 8ನೇ ಶಾಖೆ ಕಚೇರಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p> ‘ಸಂಘದಲ್ಲಿ 6,077 ಸದಸ್ಯರು, ₹2.38 ಕೋಟಿ ಶೇರು ಬಂಡವಾಳ, ₹109.24 ಕೋಟಿ ಸಾಲ ನೀಡಿದ್ದು, 2024-25ನೇ ಸಾಲಿನಲ್ಲಿ ₹1.26 ಕೋಟಿ ಲಾಭ ಗಳಿಸಿದೆ. ಪಟ್ಟಣದಲ್ಲಿ 8ನೇ ಶಾಖೆ ಆರಂಭಿಸಿದ್ದು, ರೈತರು ಮತ್ತು ವ್ಯಾಪಾರಸ್ಥರು ಸಂಘದ ಸದುಪಯೋಗ ಪಡೆದುಕೊಳ್ಳಿ’ ಎಂದರು.</p>.<p>ಅಮೀನಗಡದ ಶಂಕರ ರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಹಣ ಪಡೆಯುವಾಗಿನ ವಿಶ್ವಾಸ, ಹಣ ಮರಳಿಸುವಾಗಲೂ ಇರಲಿ. ನಿರಾಣಿ ಸಮೂಹ ಸಂಸ್ಥೆ ಹೆಚ್ಚಿನ ಪ್ರಗತಿ ಹೊಂದಲಿ’ ಎಂದು ಹೇಳಿದರು.</p>.<p>ಶಾಸಕ ವಿಜಯಾನಂದ ಕಾಶಪ್ಪನವರ ವಿಶಾಲ ಸೌಹಾರ್ದ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿನ ಗಣಕಯಂತ್ರಕ್ಕೆ ಚಾಲನೆ ನೀಡಿದರು.</p>.<p>ಪುರತಗೇರಿಯ ಕೈಲಾಸಲಿಂಗ ಶಿವಾಚಾರ್ಯ, ಮಾಜಿ ಶಾಸಕ ಎಸ್. ಜಿ.ನಂಜಯ್ಯನಮಠ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷೆ ರಾಜಮ್ಮ ಬದಾಮಿ, ಶಕುಂತಲಾ ಗಂಜಿಹಾಳ, ಮುಖಂಡರಾದ ಜಿ.ಜಿ.ಪಾಟೀಲ, ಎಲ್.ಎಂ.ಪಾಟೀಲ, ಶೇಖರಪ್ಪ ಬಾದವಾಡಗಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>