<p><strong>ಬಾಗಲಕೋಟೆ:</strong> ಪಂಚ ವೃತ್ತಿಗಳ ಉತ್ತೇಜನಕ್ಕೆ ಶಿಘ್ರವೇ ವಿಶ್ವಕರ್ಮ ಸ್ವಾಮೀಜಿಗಳ ನಿಯೋಗದಿಂದ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಧಾರ್ಮಿಕ ಆಚರಣೆಗಳ ಜಾಗೃತಿಗಾಗಿ ವಿಶ್ವಬ್ರಾಹ್ಮಣ ಸಮುದಾಯದ ಸಮಾವೇಶ ಪ್ರತಿ ಜಿಲ್ಲೆಗಳಲ್ಲಿ ನಡೆಸಲಾಗುವುದು ಎಂದು ಕೋರವಾರದ ಮೂರುಜಾವಮಠದ ಪಡದಯ್ಯ ಸ್ವಾಮೀಜಿ ಹೇಳಿದರು.</p>.<p>ಬಾಗಲಕೋಟೆ ಸಮೀಪದ ಗದ್ದನಕೇರಿ ಮಳೆಪಯ್ಯ ಸ್ವಾಮಿಗಳ ಮಠದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಮಾಠಾಧಿಪತಿಗಳ ಅಭಿವೃದ್ಧಿ ಸಂಘದ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯದ ಜಿಲ್ಲೆಗಳಲ್ಲಿ ಧಾರ್ಮಿಕ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಚಿನ್ನ, ಬೆಳ್ಳಿ ಬೇಲೆ ಗಗನಕ್ಕೆ ಏರಿರುವುದರಿಂದ ಚಿನ್ನ ಬೆಳ್ಳಿ ಆಭರಣ ತಯಾರಕರು ಹಾಗೂ ಪತ್ತಾರಿಕೆ ಮಾಡುವ ವೃತ್ತಿಪರರು ಕೆಲಸವಿಲ್ಲದೇ ಪರದಾಡುತ್ತಿದ್ದಾರೆ. ಅದೇ ರೀತಿ ಬಡಿಗತನ, ಕಮ್ಮಾರಿಕೆ, ಕಂಚು, ಶಿಲ್ಪ ವೃತ್ತಿಯ ಕೆಲಸಗಳು ಕೂಡ ಕಡಿಮೆಯಾಗಿ ಜೀವನ ನಡೆಸುವುದು ಕಷ್ಟವಾಗಿದೆ ಎಂದರು.</p>.<p>ಈ ಎಲ್ಲ ವೃತ್ತಿಗಳ ಉತ್ತೇಜನಕ್ಕಾಗಿ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು, ಎಲ್ಲ ಜಿಲ್ಲೆಗಳಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹಕ್ಕು ಪ್ರತಿಪಾದಿಸಬೇಕು ಎಂದು ಹೇಳಿದರು.</p>.<p>ಶಹಾಪುರದ ಏಕದಂಡಿಗಿಮಠದ ಕಾಳಹಸ್ತೇಂದ್ರ ಸ್ವಾಮೀಜಿ ಮಾತನಾಡಿ, ಸಮುದಾಯದಲ್ಲಿ ನಿತ್ಯ ಕರ್ಮಗಳ ಆಚರಣೆಯ ಸಂಸ್ಕಾರ ಅಗತ್ಯವಾಗಿದೆ. ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಆಚರಣೆಗಳನ್ನು ಕಲಿಸಬೇಕಾಗಿದೆ.</p>.<p>ಸಂಘದ ರಾಜ್ಯ ಅಧ್ಯಕ್ಷ ಸಿಂದಗಿ ಮೂರುಜಾವಮಠದ ರಾಮಚಂದ್ರ ಸ್ವಾಮೀಜಿ ಮಾತನಾಡಿ, ವಿಶ್ವಕರ್ಮ ಸಮುದಾಯದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಸಮಾಜ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತಿದೆ. ಸಮಾಜದ ಪ್ರತಿ ವ್ಯಕ್ತಿಯ ಬೆಳವಣಿಗೆಯೇ ನಮ್ಮ ಆಶಯವಾಗಿದೆ ಎಂದರು.</p>.<p>ಮುರನಾಳ ಮಳೆರಾಜೇಂಧ್ರ ಸ್ವಾಮಿಮಠದ ಜಗನ್ನಾಥ ಸ್ವಾಮೀಜಿ. ಮಹೇಂದ್ರ ಸ್ವಾಮೀಜಿ, ಶಾಡಲಗಿರಿ ಏಕದಂಡಿಗಿಮಠದ ನಾಗಲಿಂಗ ಸ್ವಾಮೀಜಿ, ಸವದತ್ತಿಯ ಸೋಮಲಿಂಗಯ್ಯ ಸ್ವಾಮೀಜಿ, ನಾಲತವಾಡದ ಬ್ರಹ್ಮಾಂಡಬೇರಿಮಠದ ಪಂಪಾಪತಿ ಸ್ವಾಮೀಜಿ, ಕಲಬುರಗಿಯ ಏಕದಂಡಿಗಮಠದ ಸುರೇಂದ್ರ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಪಂಚ ವೃತ್ತಿಗಳ ಉತ್ತೇಜನಕ್ಕೆ ಶಿಘ್ರವೇ ವಿಶ್ವಕರ್ಮ ಸ್ವಾಮೀಜಿಗಳ ನಿಯೋಗದಿಂದ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಧಾರ್ಮಿಕ ಆಚರಣೆಗಳ ಜಾಗೃತಿಗಾಗಿ ವಿಶ್ವಬ್ರಾಹ್ಮಣ ಸಮುದಾಯದ ಸಮಾವೇಶ ಪ್ರತಿ ಜಿಲ್ಲೆಗಳಲ್ಲಿ ನಡೆಸಲಾಗುವುದು ಎಂದು ಕೋರವಾರದ ಮೂರುಜಾವಮಠದ ಪಡದಯ್ಯ ಸ್ವಾಮೀಜಿ ಹೇಳಿದರು.</p>.<p>ಬಾಗಲಕೋಟೆ ಸಮೀಪದ ಗದ್ದನಕೇರಿ ಮಳೆಪಯ್ಯ ಸ್ವಾಮಿಗಳ ಮಠದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಮಾಠಾಧಿಪತಿಗಳ ಅಭಿವೃದ್ಧಿ ಸಂಘದ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯದ ಜಿಲ್ಲೆಗಳಲ್ಲಿ ಧಾರ್ಮಿಕ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಚಿನ್ನ, ಬೆಳ್ಳಿ ಬೇಲೆ ಗಗನಕ್ಕೆ ಏರಿರುವುದರಿಂದ ಚಿನ್ನ ಬೆಳ್ಳಿ ಆಭರಣ ತಯಾರಕರು ಹಾಗೂ ಪತ್ತಾರಿಕೆ ಮಾಡುವ ವೃತ್ತಿಪರರು ಕೆಲಸವಿಲ್ಲದೇ ಪರದಾಡುತ್ತಿದ್ದಾರೆ. ಅದೇ ರೀತಿ ಬಡಿಗತನ, ಕಮ್ಮಾರಿಕೆ, ಕಂಚು, ಶಿಲ್ಪ ವೃತ್ತಿಯ ಕೆಲಸಗಳು ಕೂಡ ಕಡಿಮೆಯಾಗಿ ಜೀವನ ನಡೆಸುವುದು ಕಷ್ಟವಾಗಿದೆ ಎಂದರು.</p>.<p>ಈ ಎಲ್ಲ ವೃತ್ತಿಗಳ ಉತ್ತೇಜನಕ್ಕಾಗಿ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು, ಎಲ್ಲ ಜಿಲ್ಲೆಗಳಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹಕ್ಕು ಪ್ರತಿಪಾದಿಸಬೇಕು ಎಂದು ಹೇಳಿದರು.</p>.<p>ಶಹಾಪುರದ ಏಕದಂಡಿಗಿಮಠದ ಕಾಳಹಸ್ತೇಂದ್ರ ಸ್ವಾಮೀಜಿ ಮಾತನಾಡಿ, ಸಮುದಾಯದಲ್ಲಿ ನಿತ್ಯ ಕರ್ಮಗಳ ಆಚರಣೆಯ ಸಂಸ್ಕಾರ ಅಗತ್ಯವಾಗಿದೆ. ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಆಚರಣೆಗಳನ್ನು ಕಲಿಸಬೇಕಾಗಿದೆ.</p>.<p>ಸಂಘದ ರಾಜ್ಯ ಅಧ್ಯಕ್ಷ ಸಿಂದಗಿ ಮೂರುಜಾವಮಠದ ರಾಮಚಂದ್ರ ಸ್ವಾಮೀಜಿ ಮಾತನಾಡಿ, ವಿಶ್ವಕರ್ಮ ಸಮುದಾಯದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಸಮಾಜ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತಿದೆ. ಸಮಾಜದ ಪ್ರತಿ ವ್ಯಕ್ತಿಯ ಬೆಳವಣಿಗೆಯೇ ನಮ್ಮ ಆಶಯವಾಗಿದೆ ಎಂದರು.</p>.<p>ಮುರನಾಳ ಮಳೆರಾಜೇಂಧ್ರ ಸ್ವಾಮಿಮಠದ ಜಗನ್ನಾಥ ಸ್ವಾಮೀಜಿ. ಮಹೇಂದ್ರ ಸ್ವಾಮೀಜಿ, ಶಾಡಲಗಿರಿ ಏಕದಂಡಿಗಿಮಠದ ನಾಗಲಿಂಗ ಸ್ವಾಮೀಜಿ, ಸವದತ್ತಿಯ ಸೋಮಲಿಂಗಯ್ಯ ಸ್ವಾಮೀಜಿ, ನಾಲತವಾಡದ ಬ್ರಹ್ಮಾಂಡಬೇರಿಮಠದ ಪಂಪಾಪತಿ ಸ್ವಾಮೀಜಿ, ಕಲಬುರಗಿಯ ಏಕದಂಡಿಗಮಠದ ಸುರೇಂದ್ರ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>