<p><strong>ಮಹಾಲಿಂಗಪುರ</strong>: ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದ ಅಂಬೇಡ್ಕರ್ ವೃತ್ತದ ಬಳಿಯ ಮನೆ ಗೋಡೆ ಕುಸಿದು ಬಾಲಕ ದರ್ಶನ್ ನಾಗಪ್ಪ ಲಾತೂರ (11) ಮೃತಪಟ್ಟಿದ್ದಾನೆ. </p><p>ಬಾಲಕನ ಸಹೋದರ ಶ್ರೀಶೈಲ ಗಾಯಗೊಂಡಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>‘ಬಾಲಕನ ಕುಟುಂಬ ಪತ್ರಾಸ್ (ತಗಡಿನ ಶೆಡ್) ಮನೆಯಲ್ಲಿ ವಾಸವಿದ್ದು, ಶನಿವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಇವರ ಬದಿಯ ಮನೆಯ ಗೋಡೆ ಕುಸಿದು ಪತ್ರಾಸ್ ಮೇಲೆ ಬಿದ್ದಿದೆ. ಪತ್ರಾಸ್ ಕೆಳಗೆ ಮಲಗಿದ್ದ ಬಾಲಕ ದರ್ಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಲಕನ ತಾಯಿ ರೂಪಾ, ಸಹೋದರಿ ಅದೃಷ್ಟವಶಾತ್ ಪಾರಾಗಿದ್ದಾರೆ. ಬಾಲಕನ ತಂದೆ ನಾಗಪ್ಪ ಮನೆಯಲ್ಲಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪಿಎಸ್ಐ ಕಿರಣ ಸತ್ತಿಗೇರಿ ಭೇಟಿ ನೀಡಿ ಪರಿಶೀಲಿಸಿದರು.</p>.ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ.ತಾಯಿ–ನವಜಾತ ಶಿಶು ಸಾವಿನ ಪ್ರಮಾಣ ತಗ್ಗಿಸಲು 24x7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ</strong>: ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದ ಅಂಬೇಡ್ಕರ್ ವೃತ್ತದ ಬಳಿಯ ಮನೆ ಗೋಡೆ ಕುಸಿದು ಬಾಲಕ ದರ್ಶನ್ ನಾಗಪ್ಪ ಲಾತೂರ (11) ಮೃತಪಟ್ಟಿದ್ದಾನೆ. </p><p>ಬಾಲಕನ ಸಹೋದರ ಶ್ರೀಶೈಲ ಗಾಯಗೊಂಡಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>‘ಬಾಲಕನ ಕುಟುಂಬ ಪತ್ರಾಸ್ (ತಗಡಿನ ಶೆಡ್) ಮನೆಯಲ್ಲಿ ವಾಸವಿದ್ದು, ಶನಿವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಇವರ ಬದಿಯ ಮನೆಯ ಗೋಡೆ ಕುಸಿದು ಪತ್ರಾಸ್ ಮೇಲೆ ಬಿದ್ದಿದೆ. ಪತ್ರಾಸ್ ಕೆಳಗೆ ಮಲಗಿದ್ದ ಬಾಲಕ ದರ್ಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಲಕನ ತಾಯಿ ರೂಪಾ, ಸಹೋದರಿ ಅದೃಷ್ಟವಶಾತ್ ಪಾರಾಗಿದ್ದಾರೆ. ಬಾಲಕನ ತಂದೆ ನಾಗಪ್ಪ ಮನೆಯಲ್ಲಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪಿಎಸ್ಐ ಕಿರಣ ಸತ್ತಿಗೇರಿ ಭೇಟಿ ನೀಡಿ ಪರಿಶೀಲಿಸಿದರು.</p>.ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ.ತಾಯಿ–ನವಜಾತ ಶಿಶು ಸಾವಿನ ಪ್ರಮಾಣ ತಗ್ಗಿಸಲು 24x7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>