ರಾಂಪುರ: ಬಿಸಿಲಿನ ತಾಪ ಹೆಚ್ಚುತ್ತಿದ್ದು, ಜನರು ನೀರನ್ನು ಮಿತವಾಗಿ ಬಳಸಬೇಕು. ಪೋಲಾಗದಂತೆ ಎಚ್ಚರ ವಹಿಸಬೇಕು ಎಂದು ಸಮೀಪದ ಶಿರೂರ ಪಟ್ಟಣದ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎನ್.ಎಂ.ಮೇಸ್ತಾ ಸೂಚಿಸಿದ್ದಾರೆ.
ಜನರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಪಟ್ಟಣದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ತೊಂದರೆ ಇಲ್ಲ. ನೀರು ಪ್ರತಿಯೊಬ್ಬರಿಗೂ ಅತ್ಯವಶ್ಯವಾಗಿದ್ದು, ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.