<p><strong>ಬಾಗಲಕೋಟೆ:</strong> ವೃತ್ತಿಪರ ನೇಕಾರರಿಗೆ ಸೌಲಭ್ಯಗಳನ್ನು ಒದಗಿಸಲು ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಇಲಾಖೆಗೆ ರಾಜ್ಯ ಬಜೆಟ್ನಲ್ಲಿ ₹1,500 ಕೋಟಿ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಬುಧವಾರ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಕರ್ನಾಟಕ ರಾಜ್ಯ ನೇಕಾರರ ಸೇವಾ ಸಂಘದಿಂದ ಮನವಿ ಸಲ್ಲಿಸಲಾಯಿತು.</p>.<p>ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ನೇಕಾರರಿಗೆ ಸೌಲಭ್ಯಗಳನ್ನು ಒದಗಿಸಬೇಕು. ಗುರುತಿನ ಚೀಟಿ ವಿತರಣೆ ಮಾಡಬೇಕು. ಸಹಕಾರಿ ಸಂಘಗಳು, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಒಂದು ಬಾರಿ ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಅಧ್ಯಕ್ಷ ಶಿವಲಿಂಗ ಟಿರಕಿ ನೇತೃತ್ವದಲ್ಲಿ ಒತ್ತಾಯಿಸಿದರು.</p>.<p>55 ವರ್ಷ ಮೇಲ್ಪಟ್ಟ ನೇಕಾರರಿಗೆ ಪ್ರತಿ ತಿಂಗಳು ₹5 ಸಾವಿರ ಮಾಸಾಶನ ಮಂಜೂರು ಮಾಡಬೇಕು. ಸಾಲಲದ ಹೊರೆಯಿಂದ 55 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬದವರಿಗೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ನೇಕಾರ ಸಮ್ಮಾನ ಯೋಜನೆಯ ಮೊತ್ತವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಬೇಕು. ಎಲ್ಲ ವೃತ್ತಿಪರ ನೇಕಾರರಿಗೆ ಸೌಲಭ್ಯ ದೊರೆಯುವಂತೆ ಮಾಡಬೇಕು. ಶೂನ್ಯ ಬಡ್ಡಿ ದರದ ಸಾಲದ ಪ್ರಮಾಣವನ್ನು ₹5 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p>ಕೆಎಚ್ಡಿಸಿ ನೇಕಾರರಿಗೆ ಹಕ್ಕುಪತ್ರ ನೀಡುವಲ್ಲಿರುವ ತೊಂದರೆಗಳನ್ನು ಪರಿಹರಿಸಬೇಕು. ವಸತಿ ಇಲ್ಲದವರಿಗೆ ನಿವೇಶನ ನೀಡಬೇಕು. ಎರಡು ವರ್ಷಗಳ ಹಿಂದೆ ಜಾರಿಯಾಗಬೇಕಿದ್ದ ಜವಳಿ ನೀತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.</p>.<p>ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕೈಮಗ್ಗ ನೇಕಾರರ ಉತ್ಪಾದನೆಗಳ ನೇರ ಮಾರಾಟಕ್ಕೆ ಮಳಿಗೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರದ ಇಲಾಖೆಗಳಲ್ಲಿ ನೇಕಾರರಿಂದ ಬಟ್ಟೆ ಖರೀದಿಸಬೇಕು ಎಂದು ಆಗ್ರಹಿಸಿದರು.</p>
<p><strong>ಬಾಗಲಕೋಟೆ:</strong> ವೃತ್ತಿಪರ ನೇಕಾರರಿಗೆ ಸೌಲಭ್ಯಗಳನ್ನು ಒದಗಿಸಲು ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಇಲಾಖೆಗೆ ರಾಜ್ಯ ಬಜೆಟ್ನಲ್ಲಿ ₹1,500 ಕೋಟಿ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಬುಧವಾರ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಕರ್ನಾಟಕ ರಾಜ್ಯ ನೇಕಾರರ ಸೇವಾ ಸಂಘದಿಂದ ಮನವಿ ಸಲ್ಲಿಸಲಾಯಿತು.</p>.<p>ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ನೇಕಾರರಿಗೆ ಸೌಲಭ್ಯಗಳನ್ನು ಒದಗಿಸಬೇಕು. ಗುರುತಿನ ಚೀಟಿ ವಿತರಣೆ ಮಾಡಬೇಕು. ಸಹಕಾರಿ ಸಂಘಗಳು, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಒಂದು ಬಾರಿ ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಅಧ್ಯಕ್ಷ ಶಿವಲಿಂಗ ಟಿರಕಿ ನೇತೃತ್ವದಲ್ಲಿ ಒತ್ತಾಯಿಸಿದರು.</p>.<p>55 ವರ್ಷ ಮೇಲ್ಪಟ್ಟ ನೇಕಾರರಿಗೆ ಪ್ರತಿ ತಿಂಗಳು ₹5 ಸಾವಿರ ಮಾಸಾಶನ ಮಂಜೂರು ಮಾಡಬೇಕು. ಸಾಲಲದ ಹೊರೆಯಿಂದ 55 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬದವರಿಗೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ನೇಕಾರ ಸಮ್ಮಾನ ಯೋಜನೆಯ ಮೊತ್ತವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಬೇಕು. ಎಲ್ಲ ವೃತ್ತಿಪರ ನೇಕಾರರಿಗೆ ಸೌಲಭ್ಯ ದೊರೆಯುವಂತೆ ಮಾಡಬೇಕು. ಶೂನ್ಯ ಬಡ್ಡಿ ದರದ ಸಾಲದ ಪ್ರಮಾಣವನ್ನು ₹5 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p>ಕೆಎಚ್ಡಿಸಿ ನೇಕಾರರಿಗೆ ಹಕ್ಕುಪತ್ರ ನೀಡುವಲ್ಲಿರುವ ತೊಂದರೆಗಳನ್ನು ಪರಿಹರಿಸಬೇಕು. ವಸತಿ ಇಲ್ಲದವರಿಗೆ ನಿವೇಶನ ನೀಡಬೇಕು. ಎರಡು ವರ್ಷಗಳ ಹಿಂದೆ ಜಾರಿಯಾಗಬೇಕಿದ್ದ ಜವಳಿ ನೀತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.</p>.<p>ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕೈಮಗ್ಗ ನೇಕಾರರ ಉತ್ಪಾದನೆಗಳ ನೇರ ಮಾರಾಟಕ್ಕೆ ಮಳಿಗೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರದ ಇಲಾಖೆಗಳಲ್ಲಿ ನೇಕಾರರಿಂದ ಬಟ್ಟೆ ಖರೀದಿಸಬೇಕು ಎಂದು ಆಗ್ರಹಿಸಿದರು.</p>