<p><strong>ರಬಕವಿ ಬನಹಟ್ಟಿ:</strong> ನೇಕಾರರು ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾಕಷ್ಟು ಬಾರಿ ಹೋರಾಟ ಮಾಡಿದರೂ ಸರ್ಕಾರ ಮಾತ್ರ ನೇಕಾರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ತಿಳಿಸಿದರು.</p>.<p>ಸೋಮವಾರ ಮನವಿ ಪತ್ರವನ್ನು ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿಯವರಿಗೆ ಸಲ್ಲಿಸಿ ಮಾತನಾಡಿದರು.</p>.<p>ಈಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಬೇರೆ ಬೇರೆ ಕಡೆಯಿಂದ ಆಗಮಿಸಿದ ನೇಕಾರರ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಆಗಮಿಸಿ ಅಧಿವೇಶನ ಮುಗಿದ 15 ದಿನಗಳ ಒಳಗಾಗಿ ಸಭೆಗೆ ಅವಕಾಶ ನೀಡುವುದಾಗಿ ತಿಳಿಸಿದ್ದರು. ಆದರೆ ಇಲ್ಲಿಯವರೆಗೆ ಯಾವದೇ ಕ್ರಮ ತೆಗೆದುಕೊಂಡಿಲ್ಲ. ಆದ್ದರಿಂದ ಜ 19ರಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿಯನ್ನು ಕೈಗೊಳ್ಳುವುದಾಗಿ ಶಿವಲಿಂಗ ಟಿರಕಿ ತಿಳಿಸಿದರು.</p>.<p>ಕೈಮಗ್ಗ ಮತ್ತು ಜವಳಿ ಇಲಾಖೆಗೆ ₹1500 ಕೋಟಿ ಅನುದಾನ ನೀಡಬೇಕು. ನೇಕಾರರಿಗೂ ಕೂಡಾ ಕಟ್ಟಡ ಕಾರ್ಮಿಕರಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಬೇಕು. ನೇಕಾರರಿಗೆ ನಿವೇಶನ ಹಂಚಿಕೆಯಾಗಬೇಕು ಮತ್ತು ಕೆಎಚ್ಡಿಸಿ ಯನ್ನು ವಿದ್ಯುತ್ ಚಾಲಿತ ಮೂಲಭೂತ ಅಭಿವೃದ್ಧಿ ನಿಗಮದಲ್ಲಿ ವಿಲೀನಗೊಳಿಸುತ್ತಿದ್ದು, ನಾಲ್ಕೈದು ಮಗ್ಗಗಳನ್ನು ಹೊಂದಿದವರಿಗೆ ನಿರಂತರ ಉದ್ಯೋಗವನ್ನು ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಟಿರಕಿ ಅಗ್ರಹಿಸಿದರು.</p>.<p>ಎಸ್.ಎಸ್.ಉದಗಟ್ಟಿ, ಲಕ್ಕಪ್ಪ ಪವಾರ, ರಮೇಶ ಸೋರಗಾವಿ, ಮಲ್ಲಯ್ಯ ಮಠಪತಿ, ಗಂಗಪ್ಪ ಒಂಟಗೂಡಿ, ರಾಜೇಂದ್ರ ಶೇಡಬಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ನೇಕಾರರು ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾಕಷ್ಟು ಬಾರಿ ಹೋರಾಟ ಮಾಡಿದರೂ ಸರ್ಕಾರ ಮಾತ್ರ ನೇಕಾರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ತಿಳಿಸಿದರು.</p>.<p>ಸೋಮವಾರ ಮನವಿ ಪತ್ರವನ್ನು ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿಯವರಿಗೆ ಸಲ್ಲಿಸಿ ಮಾತನಾಡಿದರು.</p>.<p>ಈಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಬೇರೆ ಬೇರೆ ಕಡೆಯಿಂದ ಆಗಮಿಸಿದ ನೇಕಾರರ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಆಗಮಿಸಿ ಅಧಿವೇಶನ ಮುಗಿದ 15 ದಿನಗಳ ಒಳಗಾಗಿ ಸಭೆಗೆ ಅವಕಾಶ ನೀಡುವುದಾಗಿ ತಿಳಿಸಿದ್ದರು. ಆದರೆ ಇಲ್ಲಿಯವರೆಗೆ ಯಾವದೇ ಕ್ರಮ ತೆಗೆದುಕೊಂಡಿಲ್ಲ. ಆದ್ದರಿಂದ ಜ 19ರಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿಯನ್ನು ಕೈಗೊಳ್ಳುವುದಾಗಿ ಶಿವಲಿಂಗ ಟಿರಕಿ ತಿಳಿಸಿದರು.</p>.<p>ಕೈಮಗ್ಗ ಮತ್ತು ಜವಳಿ ಇಲಾಖೆಗೆ ₹1500 ಕೋಟಿ ಅನುದಾನ ನೀಡಬೇಕು. ನೇಕಾರರಿಗೂ ಕೂಡಾ ಕಟ್ಟಡ ಕಾರ್ಮಿಕರಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಬೇಕು. ನೇಕಾರರಿಗೆ ನಿವೇಶನ ಹಂಚಿಕೆಯಾಗಬೇಕು ಮತ್ತು ಕೆಎಚ್ಡಿಸಿ ಯನ್ನು ವಿದ್ಯುತ್ ಚಾಲಿತ ಮೂಲಭೂತ ಅಭಿವೃದ್ಧಿ ನಿಗಮದಲ್ಲಿ ವಿಲೀನಗೊಳಿಸುತ್ತಿದ್ದು, ನಾಲ್ಕೈದು ಮಗ್ಗಗಳನ್ನು ಹೊಂದಿದವರಿಗೆ ನಿರಂತರ ಉದ್ಯೋಗವನ್ನು ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಟಿರಕಿ ಅಗ್ರಹಿಸಿದರು.</p>.<p>ಎಸ್.ಎಸ್.ಉದಗಟ್ಟಿ, ಲಕ್ಕಪ್ಪ ಪವಾರ, ರಮೇಶ ಸೋರಗಾವಿ, ಮಲ್ಲಯ್ಯ ಮಠಪತಿ, ಗಂಗಪ್ಪ ಒಂಟಗೂಡಿ, ರಾಜೇಂದ್ರ ಶೇಡಬಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>