<p><strong>ಬಾಗಲಕೋಟೆ:</strong> ’ಬ್ರಿಟಿಷರಿಗೆ ವೀರ ಸಾವರ್ಕರ್ ಕ್ಷಮಾಪಣಾ ಪತ್ರ ಬರೆದುಕೊಟ್ಟದ್ದು ಬಿಟ್ಟರೆ ಈ ದರಿದ್ರ ಆರ್ಎಸ್ಎಸ್, ಸಂಘಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಯಾವ ಹಿನ್ನೆಲೆಯೂ ಇಲ್ಲ. ಹೀಗಿದ್ದ ಮೇಲೆ ದೊರೆಸ್ವಾಮಿ ಅವರನ್ನು ಕೇಳಲು ಇವರ್ಯಾರು’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಪ್ರಶ್ನಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸನಗೌಡ ಯತ್ನಾಳ ಅಂತಹವರ ಉದ್ಧಟತನದ ಹೇಳಿಕೆ ಒಬ್ಬ ಜನಪ್ರತಿನಿಧಿಗೆ ಶೋಭೆ ತರುವುದಿಲ್ಲ. ಯತ್ನಾಳ ಅಷ್ಟೇ ಅಲ್ಲ ಇಂತಹ ನಾಲಿಗೆ ಹರಿಯಬಿಡುವವರು ತಕ್ಷಣ ತಮ್ಮ ಬಾಯಿ ಬಂದ್ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಈ ರೀತಿ ಅತಿ ಬೇಜವಾಬ್ದಾರಿಯಾಗಿನಾಲಿಗೆ ಬಳಸಿ ನಾಚಿಕೆಗೇಡಿನ ಮಾತನಾಡುವವರ ಬಗ್ಗೆ ಕಿಂಚಿತ್ತು ಅನುಕಂಪಪಡುವುದು ಬೇಡ ಎಂದು ಮಾಧ್ಯಮದವರಿಗೆ ಮನವಿ ಮಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ ಅಂತಹವರು ಬಹುಬೇಗ ಜನರ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದರು.</p>.<p class="Subhead"><strong>ಅಮಿತ್ ಶಾ ರಾಜೀನಾಮೆ ಕೊಡಲಿ..</strong></p>.<p>ದೇಶ ವಿಭಜನೆ ಹಾಗೂ 80ರ ದಶಕದ ಸಿಖ್ ಗಲಭೆಯ ನಂತರದೆಹಲಿಯಲ್ಲಿ ಅತಿ ದೊಡ್ಡ ಗಲಭೆ ನಡೆದಿದೆ. ಈ ವೇಳೆಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು. ನಾಚಿಕೆ, ಮಾನ–ಮರ್ಯಾದೆ ಇದ್ದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಕಿತ್ತು ಹಾಕಲಿ ಎಂದು ಒತ್ತಾಯಿಸಿದರು.</p>.<p>’ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯನ್ನು ರಾತ್ರೋರಾತ್ರಿ ವರ್ಗಾವಣೆಗೊಳಿಸಿರುವುದು ನೋಡಿದರೆ 70ರ ದಶಕದ ಮಧ್ಯಭಾಗದ ತುರ್ತು ಪರಿಸ್ಥಿತಿ ಮತ್ತೆ ಜಾರಿಯಾಗಿರುವುದು ವೇದ್ಯವಾಗುತ್ತಿದೆ. ಇದರ ವಿರುದ್ಧ ದೇಶದಲ್ಲಿ ಎರಡನೇ ಸ್ವಾತಂತ್ರ್ಯ ಹೋರಾಟ ಆಗುವ ಎಲ್ಲ ಲಕ್ಷಣವೂ ಕಾಣುತ್ತಿದೆ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ’ಬ್ರಿಟಿಷರಿಗೆ ವೀರ ಸಾವರ್ಕರ್ ಕ್ಷಮಾಪಣಾ ಪತ್ರ ಬರೆದುಕೊಟ್ಟದ್ದು ಬಿಟ್ಟರೆ ಈ ದರಿದ್ರ ಆರ್ಎಸ್ಎಸ್, ಸಂಘಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಯಾವ ಹಿನ್ನೆಲೆಯೂ ಇಲ್ಲ. ಹೀಗಿದ್ದ ಮೇಲೆ ದೊರೆಸ್ವಾಮಿ ಅವರನ್ನು ಕೇಳಲು ಇವರ್ಯಾರು’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಪ್ರಶ್ನಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸನಗೌಡ ಯತ್ನಾಳ ಅಂತಹವರ ಉದ್ಧಟತನದ ಹೇಳಿಕೆ ಒಬ್ಬ ಜನಪ್ರತಿನಿಧಿಗೆ ಶೋಭೆ ತರುವುದಿಲ್ಲ. ಯತ್ನಾಳ ಅಷ್ಟೇ ಅಲ್ಲ ಇಂತಹ ನಾಲಿಗೆ ಹರಿಯಬಿಡುವವರು ತಕ್ಷಣ ತಮ್ಮ ಬಾಯಿ ಬಂದ್ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಈ ರೀತಿ ಅತಿ ಬೇಜವಾಬ್ದಾರಿಯಾಗಿನಾಲಿಗೆ ಬಳಸಿ ನಾಚಿಕೆಗೇಡಿನ ಮಾತನಾಡುವವರ ಬಗ್ಗೆ ಕಿಂಚಿತ್ತು ಅನುಕಂಪಪಡುವುದು ಬೇಡ ಎಂದು ಮಾಧ್ಯಮದವರಿಗೆ ಮನವಿ ಮಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ ಅಂತಹವರು ಬಹುಬೇಗ ಜನರ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದರು.</p>.<p class="Subhead"><strong>ಅಮಿತ್ ಶಾ ರಾಜೀನಾಮೆ ಕೊಡಲಿ..</strong></p>.<p>ದೇಶ ವಿಭಜನೆ ಹಾಗೂ 80ರ ದಶಕದ ಸಿಖ್ ಗಲಭೆಯ ನಂತರದೆಹಲಿಯಲ್ಲಿ ಅತಿ ದೊಡ್ಡ ಗಲಭೆ ನಡೆದಿದೆ. ಈ ವೇಳೆಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು. ನಾಚಿಕೆ, ಮಾನ–ಮರ್ಯಾದೆ ಇದ್ದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಕಿತ್ತು ಹಾಕಲಿ ಎಂದು ಒತ್ತಾಯಿಸಿದರು.</p>.<p>’ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯನ್ನು ರಾತ್ರೋರಾತ್ರಿ ವರ್ಗಾವಣೆಗೊಳಿಸಿರುವುದು ನೋಡಿದರೆ 70ರ ದಶಕದ ಮಧ್ಯಭಾಗದ ತುರ್ತು ಪರಿಸ್ಥಿತಿ ಮತ್ತೆ ಜಾರಿಯಾಗಿರುವುದು ವೇದ್ಯವಾಗುತ್ತಿದೆ. ಇದರ ವಿರುದ್ಧ ದೇಶದಲ್ಲಿ ಎರಡನೇ ಸ್ವಾತಂತ್ರ್ಯ ಹೋರಾಟ ಆಗುವ ಎಲ್ಲ ಲಕ್ಷಣವೂ ಕಾಣುತ್ತಿದೆ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>