ಬನಶಂಕರಿ (ಬಾದಾಮಿ) : ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಬೇಗನೇ ಗುಣಮುಖರಾಗಲಿ ಎಂದು ಹಾರೈಸಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನಿಲ್ಕುಮಾರ ದಡ್ಡಿ ನೇತೃತ್ವದಲ್ಲಿ ಅವರ ಅಭಿಮಾನಿಗಳು ಬನಶಂಕರಿ ದೇವಿಗೆ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.
ಸಿದ್ದರಾಮಯ್ಯ ಅಭಿಮಾನಿ ತಾಲ್ಲೂಕಿನ ಹಿರೇಬೂದಿಹಾಳ ಗ್ರಾಮದ ಗ್ರಾಮ ಪಂಚಾಯ್ತಿ ಸದಸ್ಯ ರಂಗಪ್ಪ ಮೊಕಾಶಿ ಇಲ್ಲಿನ ಹರಿದ್ರಾತೀರ್ಥ ಪುಷ್ಕರಣಿಯಿಂದ ದೇವಾಲಯದವರೆಗೆ ದೀಡ್ನಮಸ್ಕಾರ ಹಾಕಿ ದೇವಿಗೆ ಪೂಜೆ ಸಲ್ಲಿಸಿದರು.
ರಂಗಪ್ಪ ಮೊಕಾಶಿ ದೀಡ್ ನಮಸ್ಕಾರ ಹಾಕುವಾಗ ಹಿಂದೆ ಅಭಿಮಾನಿಗಳು ಕೈಯಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರ ಹಿಡಿದುಕೊಂಡಿದ್ದರು.