ಈ ಉದ್ಯೋಗ ಮೇಳದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ರೀತಿ ಬಹು ಪ್ರಚಾರಾಂದೋಲನ ಹಮ್ಮಿಕೊಳ್ಳಬೇಕು. ವಿಶೇಷವಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚು ಅರಿವು ಮೂಡಿಸಬೇಕು. ಇದಲ್ಲದೇ, ಕಾಲೇಜುಗಳು, ವಿವಿಧ ಯುವಕ ಮಂಡಲಗಳು, ಸ್ವಸಹಾಯ ಸಂಘಗಳು, ಹಾಲು ಉತ್ಪಾದಕರ ಸಂಘಗಳಿಗೂ ಉದ್ಯೋಗ ಮೇಳದ ಮಾಹಿತಿ ನೀಡುವಂತೆ ತಿಳಿಸಿದರು.