<p><strong>ಬಾಗಲಕೋಟೆ:</strong> 'ಮುಧೋಳದ ರನ್ನ ಸಹಕಾರ ಸಕ್ಕರೆ ಕಾರ್ಖಾನೆಯ ಭವಿಷ್ಯ ಆಡಳಿತ ಮಂಡಳಿ ಕೈಯಲ್ಲಿದೆಯೇ ಹೊರತು ಸರ್ಕಾರದ ಕೈಯಲ್ಲಿ ಇಲ್ಲ. ಹಣ ಕೊಡುವ ಸ್ಥಿತಿಯಲ್ಲೂ ನಾವು ಇಲ್ಲ'ಎಂದು ಸಕ್ಕರೆ ಸಚಿವ ಅರಬೈಲು ಶಿವರಾಮ ಹೆಬ್ಬಾರ ಸ್ಪಷ್ಟಪಡಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯ ಆಡಳಿತ ಮಂಡಳಿ ನೀಡಿದ್ದ ರಾಜೀನಾಮೆಯನ್ನು ಗುರುವಾರ ವಾಪಸ್ ಪಡೆದಿದೆ. ಬೇರೆ ಬೇರೆ ಬ್ಯಾಂಕ್ಗಳ ಮೂಲಕ ಸಂಪನ್ಮೂಲ ಕ್ರೋಢೀಕರಿಸಿಕೊಂಡು ಅವರು ಕಾರ್ಖಾನೆ ಆರಂಭಿಸಲಿ ಎಂದು ಸಲಹೆ ನೀಡಿದರು.</p>.<p>ಕೋವಿಡ್ 19 ಸಂಕಷ್ಟದ ಕಾರಣ ಸರ್ಕಾರ ಆರ್ಥಿಕವಾಗಿ ಜರ್ಜರಿತವಾಗಿದೆ. ಹೀಗಾಗಿ ಸರ್ಕಾರದಿಂದ ಸಹಾಯ ಕೇಳುವ ಹಂಬಲ ಬೇಡ. ಆ ಶಕ್ತಿಯೂ ನಮಗೆ ಇಲ್ಲ. ಈಗಿನ ಸ್ಥಿತಿಯಲ್ಲಿ ಒಂದು ರೂಪಾಯಿ ಕೊಡುವ ಪರಿಸ್ಥಿತಿಯಲ್ಲಿ ನಾವು ಇಲ್ಲ. ನಿಮ್ಮ ಕಾಲ ಮೇಲೆ ನಿಂತುಕೊಂಡು ಕೆಲಸ ಮಾಡಿ ಎಂದು ಆಡಳಿತ ಮಂಡಳಿಗೆ ಸೂಚಿಸಿದರು.</p>.<p>ಸಿಎಂ ಅಥವಾ ಡಿಸಿಎಂ ಗೋವಿಂದ ಕಾರಜೋಳ ಮನವೊಲಿಸಿ ನೀವು ಹಣ ತಂದರೆ ನನ್ನದೇನೂ ಅಭ್ಯಂತವಿಲ್ಲ ಎಂದು ಹೇಳಿದ ಹೆಬ್ಬಾರ, ರನ್ನ ಶುಗರ್ಸ್ನ ಸಕ್ಕರೆ ಹರಾಜಿನಿಂದ ಸಂಗ್ರಹವಾದ ₹41 ಕೋಟಿ ಜಿಲ್ಲಾಡಳಿತದ ಖಾತೆಯಲ್ಲಿದೆ. ಆದರೆ ಈ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಕಬ್ಬು ಪೂರೈಸಿದ ರೈತರಿಗೆ ಬಾಕಿ ಪಾವತಿಸಲು ಆಗಿಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಬೇಗನೇ ಇತ್ಯರ್ಥಗೊಂಡು ರೈತರಿಗೆ ಬಾಕಿ ಪಾವತಿಸಲು ಹಾಗೂ ಕಾರ್ಖಾನೆಯ ಕಾರ್ಮಿಕರಿಗೆ ಪಾವತಿಸಬೇಕಾದ ವೇತನ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> 'ಮುಧೋಳದ ರನ್ನ ಸಹಕಾರ ಸಕ್ಕರೆ ಕಾರ್ಖಾನೆಯ ಭವಿಷ್ಯ ಆಡಳಿತ ಮಂಡಳಿ ಕೈಯಲ್ಲಿದೆಯೇ ಹೊರತು ಸರ್ಕಾರದ ಕೈಯಲ್ಲಿ ಇಲ್ಲ. ಹಣ ಕೊಡುವ ಸ್ಥಿತಿಯಲ್ಲೂ ನಾವು ಇಲ್ಲ'ಎಂದು ಸಕ್ಕರೆ ಸಚಿವ ಅರಬೈಲು ಶಿವರಾಮ ಹೆಬ್ಬಾರ ಸ್ಪಷ್ಟಪಡಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯ ಆಡಳಿತ ಮಂಡಳಿ ನೀಡಿದ್ದ ರಾಜೀನಾಮೆಯನ್ನು ಗುರುವಾರ ವಾಪಸ್ ಪಡೆದಿದೆ. ಬೇರೆ ಬೇರೆ ಬ್ಯಾಂಕ್ಗಳ ಮೂಲಕ ಸಂಪನ್ಮೂಲ ಕ್ರೋಢೀಕರಿಸಿಕೊಂಡು ಅವರು ಕಾರ್ಖಾನೆ ಆರಂಭಿಸಲಿ ಎಂದು ಸಲಹೆ ನೀಡಿದರು.</p>.<p>ಕೋವಿಡ್ 19 ಸಂಕಷ್ಟದ ಕಾರಣ ಸರ್ಕಾರ ಆರ್ಥಿಕವಾಗಿ ಜರ್ಜರಿತವಾಗಿದೆ. ಹೀಗಾಗಿ ಸರ್ಕಾರದಿಂದ ಸಹಾಯ ಕೇಳುವ ಹಂಬಲ ಬೇಡ. ಆ ಶಕ್ತಿಯೂ ನಮಗೆ ಇಲ್ಲ. ಈಗಿನ ಸ್ಥಿತಿಯಲ್ಲಿ ಒಂದು ರೂಪಾಯಿ ಕೊಡುವ ಪರಿಸ್ಥಿತಿಯಲ್ಲಿ ನಾವು ಇಲ್ಲ. ನಿಮ್ಮ ಕಾಲ ಮೇಲೆ ನಿಂತುಕೊಂಡು ಕೆಲಸ ಮಾಡಿ ಎಂದು ಆಡಳಿತ ಮಂಡಳಿಗೆ ಸೂಚಿಸಿದರು.</p>.<p>ಸಿಎಂ ಅಥವಾ ಡಿಸಿಎಂ ಗೋವಿಂದ ಕಾರಜೋಳ ಮನವೊಲಿಸಿ ನೀವು ಹಣ ತಂದರೆ ನನ್ನದೇನೂ ಅಭ್ಯಂತವಿಲ್ಲ ಎಂದು ಹೇಳಿದ ಹೆಬ್ಬಾರ, ರನ್ನ ಶುಗರ್ಸ್ನ ಸಕ್ಕರೆ ಹರಾಜಿನಿಂದ ಸಂಗ್ರಹವಾದ ₹41 ಕೋಟಿ ಜಿಲ್ಲಾಡಳಿತದ ಖಾತೆಯಲ್ಲಿದೆ. ಆದರೆ ಈ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಕಬ್ಬು ಪೂರೈಸಿದ ರೈತರಿಗೆ ಬಾಕಿ ಪಾವತಿಸಲು ಆಗಿಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಬೇಗನೇ ಇತ್ಯರ್ಥಗೊಂಡು ರೈತರಿಗೆ ಬಾಕಿ ಪಾವತಿಸಲು ಹಾಗೂ ಕಾರ್ಖಾನೆಯ ಕಾರ್ಮಿಕರಿಗೆ ಪಾವತಿಸಬೇಕಾದ ವೇತನ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>