<p><strong>ಮಹಾಲಿಂಗಪುರ:</strong> ಉತ್ತಮ ಆಹಾರ ಪದ್ಧತಿಯ ಜತೆಗೆ ಸಾಧ್ಯವಾದಷ್ಟು ದೈಹಿಕ ವ್ಯಾಯಾಮ ಮತ್ತು ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು ದಿ.ಮಹಾಲಿಂಗಪುರ ಅರ್ಬನ್ ಕೋ-ಆಪ್ ಬ್ಯಾಂಕಿನ ಅಧ್ಯಕ್ಷ ಶೇಖರ ಅಂಗಡಿ ಹೇಳಿದರು.</p>.<p>ಪಟ್ಟಣದ ಮಿಲನ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.</p>.<p>ದೇಶದಲ್ಲಿ ಮಧುಮೇಹ, ಕ್ಯಾನ್ಸರ್, ಹೃದಯಾಘಾತದಂತಹ ಕಾಯಿಲೆಗಳ ಸಂಖ್ಯೆ ಹೆಚ್ಚುತ್ತಿವೆ. ಹಾಗಾಗಿ ಆರೋಗ್ಯದತ್ತ ಗಮನಹರಿಸುವುದು ಅವಶ್ಯ ಎಂದು ತಿಳಿಸಿದರು.</p>.<p>ಕೇಂದ್ರದ ಮುಖ್ಯಸ್ಥ ಬಿ.ಎಂ.ಯಾದವಾಡ ಮಾತನಾಡಿ, ನಮ್ಮ ಪೂರ್ವಜರು ಹಾಕಿಕೊಟ್ಟ ಪದ್ಧತಿಗಳನ್ನು ನಿರ್ಲಕ್ಷಿಸುತ್ತಿದ್ದೇವೆ. ಜಗತ್ತಿನಲ್ಲೇ ಭಾರತದ ಆಹಾರ ಪದ್ಧತಿ ಅತ್ಯುತ್ತಮವಾಗಿತ್ತು. ಇಂದಿನ ಯುವಜನಾಂಗ ಇದನ್ನು ಅನುಸರಿಸುತ್ತಿಲ್ಲ ಎಂದರು.</p>.<p>ಸಿ.ಬಿ.ಪಟ್ಟಣಶೆಟ್ಟಿ, ಜಿ.ಎಸ್.ಬರಗಿ, ಡಾ.ಮುನೇರಾ ಯಾದವಾಡ, ಹಣಮಂತ ಜಮಾದಾರ, ಮಾರುತಿ ಕೆಂಚವ್ವಗೋಳ, ಪೈಜಲ ಶಹಾ, ಫಾತೀಮಾ ಯಾದವಾಡ, ಮುತ್ತು ತೋಟಗೇರ, ವಿದ್ಯಾ ಉಪಾಧ್ಯೆ, ಬಂಗಾರೆವ್ವ ಕಂಕಣವಾಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ:</strong> ಉತ್ತಮ ಆಹಾರ ಪದ್ಧತಿಯ ಜತೆಗೆ ಸಾಧ್ಯವಾದಷ್ಟು ದೈಹಿಕ ವ್ಯಾಯಾಮ ಮತ್ತು ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು ದಿ.ಮಹಾಲಿಂಗಪುರ ಅರ್ಬನ್ ಕೋ-ಆಪ್ ಬ್ಯಾಂಕಿನ ಅಧ್ಯಕ್ಷ ಶೇಖರ ಅಂಗಡಿ ಹೇಳಿದರು.</p>.<p>ಪಟ್ಟಣದ ಮಿಲನ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.</p>.<p>ದೇಶದಲ್ಲಿ ಮಧುಮೇಹ, ಕ್ಯಾನ್ಸರ್, ಹೃದಯಾಘಾತದಂತಹ ಕಾಯಿಲೆಗಳ ಸಂಖ್ಯೆ ಹೆಚ್ಚುತ್ತಿವೆ. ಹಾಗಾಗಿ ಆರೋಗ್ಯದತ್ತ ಗಮನಹರಿಸುವುದು ಅವಶ್ಯ ಎಂದು ತಿಳಿಸಿದರು.</p>.<p>ಕೇಂದ್ರದ ಮುಖ್ಯಸ್ಥ ಬಿ.ಎಂ.ಯಾದವಾಡ ಮಾತನಾಡಿ, ನಮ್ಮ ಪೂರ್ವಜರು ಹಾಕಿಕೊಟ್ಟ ಪದ್ಧತಿಗಳನ್ನು ನಿರ್ಲಕ್ಷಿಸುತ್ತಿದ್ದೇವೆ. ಜಗತ್ತಿನಲ್ಲೇ ಭಾರತದ ಆಹಾರ ಪದ್ಧತಿ ಅತ್ಯುತ್ತಮವಾಗಿತ್ತು. ಇಂದಿನ ಯುವಜನಾಂಗ ಇದನ್ನು ಅನುಸರಿಸುತ್ತಿಲ್ಲ ಎಂದರು.</p>.<p>ಸಿ.ಬಿ.ಪಟ್ಟಣಶೆಟ್ಟಿ, ಜಿ.ಎಸ್.ಬರಗಿ, ಡಾ.ಮುನೇರಾ ಯಾದವಾಡ, ಹಣಮಂತ ಜಮಾದಾರ, ಮಾರುತಿ ಕೆಂಚವ್ವಗೋಳ, ಪೈಜಲ ಶಹಾ, ಫಾತೀಮಾ ಯಾದವಾಡ, ಮುತ್ತು ತೋಟಗೇರ, ವಿದ್ಯಾ ಉಪಾಧ್ಯೆ, ಬಂಗಾರೆವ್ವ ಕಂಕಣವಾಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>