<p><strong>ಬಾದಾಮಿ</strong>: ‘ಕಲಾವಿದ ತನ್ನ ಭಾವನಾ ಲೋಕದಲ್ಲಿ ಸದಾ ಅಂತರ್ಮುಖಿಯಾಗಿ ಶಿಲ್ಪ ಮತ್ತು ಚಿತ್ರಕಲಾ ಕೃತಿಗಳನ್ನು ರಚಿಸುವನು. ಕಲಾಕೃತಿಗಳು ಸಮಾಜಕ್ಕೆ ಕೈಗನ್ನಡಿಯಾಗಬೇಕು’ ಎಂದು ಹಿರಿಯ ಚಿತ್ರ ಕಲಾವಿದ ಮಹಾದೇವ ಜಗತಾಪ ಹೇಳಿದರು.</p>.<p>ಬನಶಂಕರಿ ಸಮೀಪದ ಕನ್ನಡ ಹಂಪಿ ವಿಶ್ವವಿದ್ಯಾಲಯದ ವಾಸ್ತುಶಿಲ್ಪ, ಶಿಲ್ಪಶಾಸ್ತ್ರ, ಮತ್ತು ವರ್ಣಚಿತ್ರಕಲೆ ವಿಭಾಗದ ಕೇಂದ್ರದಲ್ಲಿ ಮಂಗಳವಾರ ನಡೆದ ‘ವಿಶ್ವ ದೃಶ್ಯಕಲಾ ದಿನಾಚರಣೆ’ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪ್ರಾಧ್ಯಾಪಕ ಯಾದಪ್ಪ ಪರದೇಶಿ ವಿಶ್ವ ವಿಖ್ಯಾತ ಕಲಾವಿದ ಲಿಯೊನಾರ್ಡೊ ಡಾ ವಿಂಚಿ ಕುರಿತು ಉಪನ್ಯಾಸ ನೀಡಿದರು.</p>.<p>ಕನ್ನಡ ಹಂಪಿ ವಿ.ವಿ ಕೇಂದ್ರದ ಮುಖ್ಯಸ್ಥ ಮೋಹನರಾವ್ ಪಂಚಾಳ ಅಧ್ಯಕ್ಷತೆ ವಹಿಸಿದ್ದರು. ಶಿಲ್ಪಕಲಾ ಅಕಾಡೆಮಿ ಸದಸ್ಯರಾದ ಬಸಮ್ಮ ನರಗುಂದ, ಭಾರತಿ ಸರಗಣಾಚಾರಿ, ಕಲಾವಿದರಾದ ಶಿವಾನಂದ ಹಿರೇಮಠ, ಅನ್ನಪೂರ್ಣ ಹೊಸಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ</strong>: ‘ಕಲಾವಿದ ತನ್ನ ಭಾವನಾ ಲೋಕದಲ್ಲಿ ಸದಾ ಅಂತರ್ಮುಖಿಯಾಗಿ ಶಿಲ್ಪ ಮತ್ತು ಚಿತ್ರಕಲಾ ಕೃತಿಗಳನ್ನು ರಚಿಸುವನು. ಕಲಾಕೃತಿಗಳು ಸಮಾಜಕ್ಕೆ ಕೈಗನ್ನಡಿಯಾಗಬೇಕು’ ಎಂದು ಹಿರಿಯ ಚಿತ್ರ ಕಲಾವಿದ ಮಹಾದೇವ ಜಗತಾಪ ಹೇಳಿದರು.</p>.<p>ಬನಶಂಕರಿ ಸಮೀಪದ ಕನ್ನಡ ಹಂಪಿ ವಿಶ್ವವಿದ್ಯಾಲಯದ ವಾಸ್ತುಶಿಲ್ಪ, ಶಿಲ್ಪಶಾಸ್ತ್ರ, ಮತ್ತು ವರ್ಣಚಿತ್ರಕಲೆ ವಿಭಾಗದ ಕೇಂದ್ರದಲ್ಲಿ ಮಂಗಳವಾರ ನಡೆದ ‘ವಿಶ್ವ ದೃಶ್ಯಕಲಾ ದಿನಾಚರಣೆ’ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಪ್ರಾಧ್ಯಾಪಕ ಯಾದಪ್ಪ ಪರದೇಶಿ ವಿಶ್ವ ವಿಖ್ಯಾತ ಕಲಾವಿದ ಲಿಯೊನಾರ್ಡೊ ಡಾ ವಿಂಚಿ ಕುರಿತು ಉಪನ್ಯಾಸ ನೀಡಿದರು.</p>.<p>ಕನ್ನಡ ಹಂಪಿ ವಿ.ವಿ ಕೇಂದ್ರದ ಮುಖ್ಯಸ್ಥ ಮೋಹನರಾವ್ ಪಂಚಾಳ ಅಧ್ಯಕ್ಷತೆ ವಹಿಸಿದ್ದರು. ಶಿಲ್ಪಕಲಾ ಅಕಾಡೆಮಿ ಸದಸ್ಯರಾದ ಬಸಮ್ಮ ನರಗುಂದ, ಭಾರತಿ ಸರಗಣಾಚಾರಿ, ಕಲಾವಿದರಾದ ಶಿವಾನಂದ ಹಿರೇಮಠ, ಅನ್ನಪೂರ್ಣ ಹೊಸಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>