ಬಾದಾಮಿ: ‘ಕಲಾವಿದ ತನ್ನ ಭಾವನಾ ಲೋಕದಲ್ಲಿ ಸದಾ ಅಂತರ್ಮುಖಿಯಾಗಿ ಶಿಲ್ಪ ಮತ್ತು ಚಿತ್ರಕಲಾ ಕೃತಿಗಳನ್ನು ರಚಿಸುವನು. ಕಲಾಕೃತಿಗಳು ಸಮಾಜಕ್ಕೆ ಕೈಗನ್ನಡಿಯಾಗಬೇಕು’ ಎಂದು ಹಿರಿಯ ಚಿತ್ರ ಕಲಾವಿದ ಮಹಾದೇವ ಜಗತಾಪ ಹೇಳಿದರು.
ಬನಶಂಕರಿ ಸಮೀಪದ ಕನ್ನಡ ಹಂಪಿ ವಿಶ್ವವಿದ್ಯಾಲಯದ ವಾಸ್ತುಶಿಲ್ಪ, ಶಿಲ್ಪಶಾಸ್ತ್ರ, ಮತ್ತು ವರ್ಣಚಿತ್ರಕಲೆ ವಿಭಾಗದ ಕೇಂದ್ರದಲ್ಲಿ ಮಂಗಳವಾರ ನಡೆದ ‘ವಿಶ್ವ ದೃಶ್ಯಕಲಾ ದಿನಾಚರಣೆ’ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಾಧ್ಯಾಪಕ ಯಾದಪ್ಪ ಪರದೇಶಿ ವಿಶ್ವ ವಿಖ್ಯಾತ ಕಲಾವಿದ ಲಿಯೊನಾರ್ಡೊ ಡಾ ವಿಂಚಿ ಕುರಿತು ಉಪನ್ಯಾಸ ನೀಡಿದರು.
ಕನ್ನಡ ಹಂಪಿ ವಿ.ವಿ ಕೇಂದ್ರದ ಮುಖ್ಯಸ್ಥ ಮೋಹನರಾವ್ ಪಂಚಾಳ ಅಧ್ಯಕ್ಷತೆ ವಹಿಸಿದ್ದರು. ಶಿಲ್ಪಕಲಾ ಅಕಾಡೆಮಿ ಸದಸ್ಯರಾದ ಬಸಮ್ಮ ನರಗುಂದ, ಭಾರತಿ ಸರಗಣಾಚಾರಿ, ಕಲಾವಿದರಾದ ಶಿವಾನಂದ ಹಿರೇಮಠ, ಅನ್ನಪೂರ್ಣ ಹೊಸಮನಿ ಇದ್ದರು.