ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಮಹಿಳಾ ದಿನಕ್ಕೆ ನಳ ಮಹಾರಾಜರಿಂದ ಮುನ್ನುಡಿ!

Last Updated 7 ಮಾರ್ಚ್ 2020, 9:23 IST
ಅಕ್ಷರ ಗಾತ್ರ

ಬಾಗಲಕೋಟೆ: ವಿಶ್ವ ಮಹಿಳಾ ದಿನಕ್ಕೆ ಮುನ್ನುಡಿ ಬರೆಯಲು ಇಲ್ಲಿನ ಜಿಲ್ಲಾ ಪಂಚಾಯ್ತಿ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಪುರುಷರ ಅಡಿಗೆ ಸ್ಪರ್ಧೆಯಲ್ಲಿ ನಳ ಮಹಾರಾಜರು ಗಮ್ಮತ್ತು ಮೆರೆದರು.

ಪಾತ್ರೆ ತೊಳೆದುಕೊಂಡು, ಸ್ಟೋವ್ ಹಚ್ಚಿಕೊಂಡು ಕಣ್ಣಲ್ಲಿ ನೀರು ಸುರಿಸಿಕೊಳ್ಳುತ್ತಾ ಈರುಳ್ಳಿ ಸೇರಿದಂತೆ ಬೇರೆ ಬೇರೆ ತರಕಾರಿ ಹೆಚ್ಚಿಕೊಂಡು ಇಂಗು-ತೆಂಗಿನ ವಗ್ಗರಣೆ ಹಾಕಿದರು. ಹಿಟ್ಟು ಕಲಸಿದರು. ಕುಕ್ಕರ್ ಕೂಗಿಸಿ ವಿವಿಧ ಬಾತ್ ಗಳನ್ನು ಮಾಡಿದರು.

ಅಡುಗೆ ಮಾಡಲು ಒಂದು ತಾಸು ಸಮಯ ನಿಗದಿಗೊಳಿಸಲಾಗಿತ್ತು. ಹೋಳಿಗೆ ಕಡುಬು, ಉಪ್ಪಿಟ್ಟು, ಜಾಮೂನು, ಕಟ್ಲೆಟ್, ಈರುಳ್ಳಿ ಬಜಿ, ಮೈಸೂರು ಬಜಿ, ಫ್ರೈಡ್ ರೈಸ್, ಶಾವಿಗೆ ಪಾಯಸ, ಎಗ್ ಪುಲಾವ್ ಹೀಗೆ ಬಾಯಲ್ಲಿ ನೀರೂರಿಸುವ ವೈವಿಧ್ಯಮಯ ಖಾದ್ಯಗಳನ್ನು ಮಾಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗೂಬಾಯಿ ಮಾನಕರ ಅಡುಗೆ ಸ್ಪರ್ಧೆಗೆ ಚಾಲನೆ ನೀಡಿದರು.

ಮಹಿಳಾ ಮತ್ತು ಮಕ್ಜಳ ಅಭಿವೃದ್ಧಿ ಇಲಾಖೆಯ ಸಿಡಿಪಿಒಗಳಾದ ಅನ್ನಪೂರ್ಣ ಕುಬಕಟ್ಟಿ, ಮೌನೇಶ್ವರಿ ಹಾಗೂ ಹೇಮಾವತಿ ತೀರ್ಪುಗಾರರಾಗಿ ಕೆಲಸ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT