<p><strong>ರಾಂಪುರ</strong>: ‘ಜಂತುಹುಳು ಸೋಂಕು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಅವರ ಬೆಳವಣಿಗೆ ಕುಂಠಿತಗೊಳ್ಳುತ್ತದೆ’ ಎಂದು ಶಿರೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎಫ್.ಮಾಯಾಚಾರಿ ಹೇಳಿದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿರೂರ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಮಲ್ಲಾಪೂರದಲ್ಲಿ ಮಂಗಳವಾರ ಹಮ್ಮಿಕೊಂಡ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಂತುಹುಳು ಸೋಂಕು ಮಕ್ಕಳನ್ನು ರಕ್ತಹೀನರನ್ನಾಗಿಸುವುದಲ್ಲದೇ ದೇಹದಲ್ಲಿ ಪೌಷ್ಟಿಕಾಂಶ ದೊರೆಯದಂತೆ ಮಾಡುತ್ತದೆ. ಇದನ್ನು ಹೋಗಲಾಡಿಸಲು ಅಲ್ಬೆಂಡಾಝೋಲ್ ಮಾತ್ರೆಯನ್ನು ಸೇವಿಸಬೇಕು. ಸ್ವಚ್ಚತೆಗೆ ಪ್ರಾಮುಖ್ಯತೆ ನೀಡಬೇಕು’ ಎಂದು ಹೇಳಿದರು</p>.<p>‘ಈ ಸೊಂಕು ಮಹಿಳೆ ಮತ್ತು ಮಕ್ಕಳಲ್ಲಿ ಅಧಿಕವಾಗಿ ಕಂಡುಬರುತ್ತಿದ್ದು, 1 ರಿಂದ 19 ವರ್ಷದೊಳಗಿನ ಪ್ರತಿಯೊಬ್ಬರು 6 ತಿಂಗಳಿಗೊಮ್ಮೆ ಆರೋಗ್ಯ ಇಲಾಖೆ ನೀಡುವ ಈ ಮಾತ್ರೆಯನ್ನು ಸೇವಿಸಬೇಕು’ ಎಂದರು.</p>.<p>ಆರೋಗ್ಯ ಸುರಕ್ಷಾಧಿಕಾರಿ ಎಸ್. ಎಸ್.ಮೆಣಸಗಿ, ಮಕ್ಕಳಿಗೆ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ತೋರಿಸಿದರು.</p>.<p>ಶಾಲೆಯ ಮುಖ್ಯಶಿಕ್ಷಕ ಬಿ.ಎ.ಹೂಗಾರ ಹಾಗೂ ವೈ.ಡಿ. ಕಿರಸೂರ ವಿದ್ಯಾರ್ಥಿಗಳಿಗೆ ಮಾತ್ರೆ ನೀಡಿದರು.</p>.<p>ಶಿಕ್ಷಕರಾದ ವಿ.ಕೆ.ಬಾಗಲಕೋಟ, ಕೆ.ಡಬ್ಲ್ಯೂ.ಲಮಾಣಿ, ಎಚ್. ಎಲ್.ಲಮಾಣಿ, ಎಸ್.ಕೆ.ಅಂಬೇಕರ, ಎಸ್.ಎನ್.ಹಾವರಗಿ, ಎಸ್.ಎಸ್.ಪಾಟೀಲ, ಬಿ.ಕೆ.ದಾಸರ, ಎಸ್.ಜಿ.ಜೋಶಿ, ಸವಿತಾ ತಂಬಾಕದ, ಆಶಾ ಕಾರ್ಯಕರ್ತೆ ಅನಿತಾ ರಾಜನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಪುರ</strong>: ‘ಜಂತುಹುಳು ಸೋಂಕು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಅವರ ಬೆಳವಣಿಗೆ ಕುಂಠಿತಗೊಳ್ಳುತ್ತದೆ’ ಎಂದು ಶಿರೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎಫ್.ಮಾಯಾಚಾರಿ ಹೇಳಿದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿರೂರ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಮಲ್ಲಾಪೂರದಲ್ಲಿ ಮಂಗಳವಾರ ಹಮ್ಮಿಕೊಂಡ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಂತುಹುಳು ಸೋಂಕು ಮಕ್ಕಳನ್ನು ರಕ್ತಹೀನರನ್ನಾಗಿಸುವುದಲ್ಲದೇ ದೇಹದಲ್ಲಿ ಪೌಷ್ಟಿಕಾಂಶ ದೊರೆಯದಂತೆ ಮಾಡುತ್ತದೆ. ಇದನ್ನು ಹೋಗಲಾಡಿಸಲು ಅಲ್ಬೆಂಡಾಝೋಲ್ ಮಾತ್ರೆಯನ್ನು ಸೇವಿಸಬೇಕು. ಸ್ವಚ್ಚತೆಗೆ ಪ್ರಾಮುಖ್ಯತೆ ನೀಡಬೇಕು’ ಎಂದು ಹೇಳಿದರು</p>.<p>‘ಈ ಸೊಂಕು ಮಹಿಳೆ ಮತ್ತು ಮಕ್ಕಳಲ್ಲಿ ಅಧಿಕವಾಗಿ ಕಂಡುಬರುತ್ತಿದ್ದು, 1 ರಿಂದ 19 ವರ್ಷದೊಳಗಿನ ಪ್ರತಿಯೊಬ್ಬರು 6 ತಿಂಗಳಿಗೊಮ್ಮೆ ಆರೋಗ್ಯ ಇಲಾಖೆ ನೀಡುವ ಈ ಮಾತ್ರೆಯನ್ನು ಸೇವಿಸಬೇಕು’ ಎಂದರು.</p>.<p>ಆರೋಗ್ಯ ಸುರಕ್ಷಾಧಿಕಾರಿ ಎಸ್. ಎಸ್.ಮೆಣಸಗಿ, ಮಕ್ಕಳಿಗೆ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ತೋರಿಸಿದರು.</p>.<p>ಶಾಲೆಯ ಮುಖ್ಯಶಿಕ್ಷಕ ಬಿ.ಎ.ಹೂಗಾರ ಹಾಗೂ ವೈ.ಡಿ. ಕಿರಸೂರ ವಿದ್ಯಾರ್ಥಿಗಳಿಗೆ ಮಾತ್ರೆ ನೀಡಿದರು.</p>.<p>ಶಿಕ್ಷಕರಾದ ವಿ.ಕೆ.ಬಾಗಲಕೋಟ, ಕೆ.ಡಬ್ಲ್ಯೂ.ಲಮಾಣಿ, ಎಚ್. ಎಲ್.ಲಮಾಣಿ, ಎಸ್.ಕೆ.ಅಂಬೇಕರ, ಎಸ್.ಎನ್.ಹಾವರಗಿ, ಎಸ್.ಎಸ್.ಪಾಟೀಲ, ಬಿ.ಕೆ.ದಾಸರ, ಎಸ್.ಜಿ.ಜೋಶಿ, ಸವಿತಾ ತಂಬಾಕದ, ಆಶಾ ಕಾರ್ಯಕರ್ತೆ ಅನಿತಾ ರಾಜನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>