<p><strong>ಬಾಗಲಕೋಟೆ</strong>: ‘ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಿದೆ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.</p>.<p>ನಗರದ ಅಂಭಾಭವಾನಿ ದೇವಸ್ಥಾನ, ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗಳಲ್ಲಿ ಭೇಟಿಯಾಗಿ ಧನ ಸಹಾಯ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟೀಕಿಸಿದರು.</p>.<p>ಪ್ರಧಾನಮಂತ್ರಿಗೆ ಮುತ್ತಿಗೆ ಹಾಕಲು ಮುಂದಾಗುವ ಮೂಲಕ ಸಂಸತ್ತಿನಲ್ಲೇ ಅವರಿಗೆ ಅವಮಾನ ಮಾಡಲು ಕಾಂಗ್ರೆಸ್ ಯತ್ನಿಸಿತು. ರಾಹುಲ್ ಗಾಂಧಿ ಪಾಕಿಸ್ತಾನ, ಚೀನಾ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>‘ಹಿಂದೂ ಕಾರ್ಯಕರ್ತರನ್ನು ಹೆದರಿಸುವ ಕೆಲಸ ಮೊದಲು ನಿಲ್ಲಿಸಬೇಕು. ಹಾಗೆ ಮಾಡಿದರೆ ಶಾಂತಿ ಆಗುವುದಿಲ್ಲ. ಐಪಿಎಸ್ ಅಧಿಕಾರಿಗೇ ಕಲ್ಲು ತೂರಿದರೂ ಸುಮ್ಮನೇ ಕೂಡುತ್ತಾರೆ ಎಂದರೆ ಹೇಗೆ? ಮಸೀದಿ ಜಮಾತ್ ಸದಸ್ಯರ ವಿರುದ್ದ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ದೇಶದಲ್ಲಿಯೇ ಗಲಭೆ ಎಬ್ಬಿಸುವ ಸಂಚು ನಡೆದಿದೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿನ್ನಡೆಯುಂಟು ಮಾಡಲು ಯತ್ನಿಸಲಾಗುತ್ತಿದೆ. ಈಗಾಗಲೇ ವಿಶ್ವದ ನಾಲ್ಕನೇ ಆರ್ಥಿಕ ಶಕ್ತಿಯಾಗಿದೆ. ಮುಂದಿನ ದಿನಗಳಲ್ಲಿ ಮೂರನೇ ಸ್ಥಾನಕ್ಕೆ ಏರಲಿದೆ’ ಎಂದರು.</p>.<p>‘ರಾಜಕೀಯದಲ್ಲಿ ಇನ್ನೂ 10 ರಿಂದ 15 ವರ್ಷ ಇರಬಹುದು. ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ನಿಲ್ಲಿಸುತ್ತೇನೆ ಎಂದು ಹೇಳುವುದಿಲ್ಲ. ಆದರೆ, ಕಡಿಮೆ ಮಾಡುತ್ತೇನೆ’ ಎಂದರು.</p>.<p>Quote - ಆಡಳಿತ ಸತ್ಯಾನಾಶವಾಗಿದೆ. ಮುಖ್ಯಮಂತ್ರಿ ಹುದ್ದೆಯ ಕಿತ್ತಾಟದಲ್ಲಿ ಕೆಲವು ವಿದೇಶಕ್ಕೆ ಹೋಗಿದ್ದಾರೆ. ಅಲ್ಲಿ ಅವರು ಭ್ರಷ್ಟಾಚಾರ ಎಷ್ಟಿದೆ ಎಂದು ಅಧ್ಯಯನ ಮಾಡಲಿದ್ದಾರೆಯೇ? ಬಸನಗೌಡ ಪಾಟೀಲ ಯತ್ನಾಳ ಶಾಸಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಿದೆ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.</p>.<p>ನಗರದ ಅಂಭಾಭವಾನಿ ದೇವಸ್ಥಾನ, ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗಳಲ್ಲಿ ಭೇಟಿಯಾಗಿ ಧನ ಸಹಾಯ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟೀಕಿಸಿದರು.</p>.<p>ಪ್ರಧಾನಮಂತ್ರಿಗೆ ಮುತ್ತಿಗೆ ಹಾಕಲು ಮುಂದಾಗುವ ಮೂಲಕ ಸಂಸತ್ತಿನಲ್ಲೇ ಅವರಿಗೆ ಅವಮಾನ ಮಾಡಲು ಕಾಂಗ್ರೆಸ್ ಯತ್ನಿಸಿತು. ರಾಹುಲ್ ಗಾಂಧಿ ಪಾಕಿಸ್ತಾನ, ಚೀನಾ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>‘ಹಿಂದೂ ಕಾರ್ಯಕರ್ತರನ್ನು ಹೆದರಿಸುವ ಕೆಲಸ ಮೊದಲು ನಿಲ್ಲಿಸಬೇಕು. ಹಾಗೆ ಮಾಡಿದರೆ ಶಾಂತಿ ಆಗುವುದಿಲ್ಲ. ಐಪಿಎಸ್ ಅಧಿಕಾರಿಗೇ ಕಲ್ಲು ತೂರಿದರೂ ಸುಮ್ಮನೇ ಕೂಡುತ್ತಾರೆ ಎಂದರೆ ಹೇಗೆ? ಮಸೀದಿ ಜಮಾತ್ ಸದಸ್ಯರ ವಿರುದ್ದ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ದೇಶದಲ್ಲಿಯೇ ಗಲಭೆ ಎಬ್ಬಿಸುವ ಸಂಚು ನಡೆದಿದೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿನ್ನಡೆಯುಂಟು ಮಾಡಲು ಯತ್ನಿಸಲಾಗುತ್ತಿದೆ. ಈಗಾಗಲೇ ವಿಶ್ವದ ನಾಲ್ಕನೇ ಆರ್ಥಿಕ ಶಕ್ತಿಯಾಗಿದೆ. ಮುಂದಿನ ದಿನಗಳಲ್ಲಿ ಮೂರನೇ ಸ್ಥಾನಕ್ಕೆ ಏರಲಿದೆ’ ಎಂದರು.</p>.<p>‘ರಾಜಕೀಯದಲ್ಲಿ ಇನ್ನೂ 10 ರಿಂದ 15 ವರ್ಷ ಇರಬಹುದು. ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ನಿಲ್ಲಿಸುತ್ತೇನೆ ಎಂದು ಹೇಳುವುದಿಲ್ಲ. ಆದರೆ, ಕಡಿಮೆ ಮಾಡುತ್ತೇನೆ’ ಎಂದರು.</p>.<p>Quote - ಆಡಳಿತ ಸತ್ಯಾನಾಶವಾಗಿದೆ. ಮುಖ್ಯಮಂತ್ರಿ ಹುದ್ದೆಯ ಕಿತ್ತಾಟದಲ್ಲಿ ಕೆಲವು ವಿದೇಶಕ್ಕೆ ಹೋಗಿದ್ದಾರೆ. ಅಲ್ಲಿ ಅವರು ಭ್ರಷ್ಟಾಚಾರ ಎಷ್ಟಿದೆ ಎಂದು ಅಧ್ಯಯನ ಮಾಡಲಿದ್ದಾರೆಯೇ? ಬಸನಗೌಡ ಪಾಟೀಲ ಯತ್ನಾಳ ಶಾಸಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>