ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಳಕವಾಡ: ಸಾಲ ಬಾಧೆಯಿಂದ ಯುವ ರೈತನ ಆತ್ಮಹತ್ಯೆ

Last Updated 19 ಜೂನ್ 2020, 6:38 IST
ಅಕ್ಷರ ಗಾತ್ರ

ಬಾಗಲಕೋಟೆ: ಸಾಲದ ಬಾಧೆಯಿಂದ ಬಾದಾಮಿ ತಾಲ್ಲೂಕಿನ ತಳಕವಾಡದ ರೈತ ಶಂಕರಪ್ಪ ಬಾದಾಮಿ (28) ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಂಕರಪ್ಪ ತಳಕವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 1 ಲಕ್ಷ, ಕುಳಗೇರಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ₹ 3 ಲಕ್ಷ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.

ಕಳೆದ ಆಗಸ್ಟ್‌ನಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಜಮೀನಿನಲ್ಲಿದ್ದ ಬೆಳೆ ಹಾನಿಗೀಡಾಗಿತ್ತು. ಆಗಿನಿಂದ ಶಂಕರಪ್ಪ ಖಿನ್ನತೆಗೆ ಒಳಗಾಗಿದ್ದರು. ಸಾಲ ತೀರಿಸುವುದು ಹೇಗೆಂದು ನೊಂದಿದ್ದರು ಎಂದು ತಿಳಿದುಬಂದಿದೆ.

ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT