ರಾಂಪುರ: ಬಾಗಲಕೋಟೆ ತಾಲ್ಲೂಕಿನ ಆಚನೂರ ಕ್ರಾಸ್ ಬಳಿ ಸೋಮವಾರ ಮಧ್ಯಾಹ್ನ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಕಾಕನೂರ ಗ್ರಾಮದ ರಘು ಸಂಜು ಆಶೇದಾರ(24) ಮೃತ ಯುವಕ.
ಬೈಕ್ ನ ಹಿಂಬದಿ ಸವಾರ ರಾಂಪುರದ ಮಲ್ಲೇಶ್ ಬಡಿಗೇರ ಗಾಯಗೊಂಡಿದ್ದು, ಕಾರು ಚಾಲಕನಿಗೂ ಪೆಟ್ಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.