ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಹಳ್ಳಿ: ಘಟಪ್ರಭಾ ನದಿಯಲ್ಲಿ ಮುಳುಗಿ ಯುವಕ ಸಾವು

Last Updated 26 ಡಿಸೆಂಬರ್ 2020, 13:47 IST
ಅಕ್ಷರ ಗಾತ್ರ

ಬಾಗಲಕೋಟೆ: ತಾಲ್ಲೂಕಿನ ಯಡಹಳ್ಳಿ ಬಳಿ ಶನಿವಾರ ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ಮುಳುಗಿ ಸಾವನ್ನಪ್ಪಿದ್ದಾರೆ.

ಯಡಹಳ್ಳಿಯ ಡೋಂಗ್ರಿಸಾಬ್ ನದಾಫ್ (21) ಸಾವಿಗೀಡಾದ ಯುವಕ.

ಮೂವರು ಸ್ನೇಹಿತರ ಜೊತೆ ಈಜಲು ಹೋಗಿದ್ದ ಡೋಂಗ್ರಿಸಾಬ್, ಈಜುವಾಗ ಏಕಾಏಕಿ ಕಣ್ಮರೆಯಾಗಿದ್ದರು. ಹುಡುಕಾಟ ನಡೆಸಿದಾಗ ಪತ್ತೆಯಾಗಿರಲಿಲ್ಲ. ಡೋಂಗ್ರಿಸಾಬ್ ಅವರನ್ನು ಮೊಸಳೆ ಸೆಳೆದೊಯ್ದಿರಬಹುದು ಎಂದು ಕುಟುಂಬದ ಸದಸ್ಯರು ಭಾವಿಸಿದ್ದರು.

ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಮೂರು ತಾಸು ನದಿಯಲ್ಲಿ ಹುಡುಕಾಟ ನಡೆಸಿ ಶವ ಹೊರಕ್ಕೆ ತೆಗೆದಿದ್ದಾರೆ. ಯುವಕ ಈಜುವಾಗ ಮುಳುಗಿ ಸತ್ತಿದ್ದಾನೆ ಎಂದು ತಿಳಿದುಬಂದಿದೆ.

ಮೃತದೇಹ ಕಂಡು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಕಲಾದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT