‘ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ವಿವಾದಿತ ಭೂಮಿಯಾದ ಅರ್ಚಕರ ಹಳ್ಳಿಗೆ ಸ್ಥಳಾಂತರ ಮಾಡ ಹೊರಟಿರುವುದರ ಹಿಂದೆ ಭಾರಿ ಭ್ರಷ್ಟಾಚಾರ ಕಂಡು ಬರುತ್ತಿದೆ. ಯಾವುದೇ ಚರ್ಚೆ ಹಾಗೂ ಸಾರ್ವಜನಿಕರ ಅಭಿಪ್ರಾಯ ಪಡೆಯದೇ ಏಕಾಏಕೀ ನಿರ್ಧಾರ ಕೈಗೊಂಡಿರುವುದು’ ಖಂಡನೀಯ ಎಂದರು. ‘ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನು ಕೇವಲ ಸಂಶೋಧನೆಗಳಿಗೆ ಸಂಬಂಧಿಸಿದ ಕೆಲಸಗಳಿಗೆ ಮಾತ್ರ ಬಳಸ ಬೇಕಿದೆ. ಆದರೆ ವಿಶ್ವವಿದ್ಯಾಲಯದಲ್ಲಿನ ₨1000 ಕೋಟಿಗೂ ಹೆಚ್ಚಿನ ಹಣವನ್ನು ಕಟ್ಟಡ ಕಟ್ಟಲು ಸರ್ಕಾರ ಬಳಸಿಕೊಳ್ಳಲು ಮುಂದಾಗಿದೆ’ ಆರೋಪಿಸಿದರು.