<p><strong>ಬಾಗಲಕೋಟೆ:</strong> `ಮೇಲೆಲ್ಲ ಹೊಳಪು, ಒಳಗೆಲ್ಲ ಹುಳುಕು~ ಎಂಬ ಗಾದೆ ಮಾತಿನಂತೆ ಹೊರಗಿನಿಂದ ನೋಡಲು ಚಂದವಾಗಿ ತೋರುವ ನವನಗರದ ಸೆಕ್ಟರ್ ನಂ. 37ರಲ್ಲಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಭವನ ಒಳಾಂಗಣ ಮೂಲಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ.<br /> <br /> ಭವನಕ್ಕೆ ಅಗತ್ಯವಿರುವ ವಿದ್ಯುತ್ ವ್ಯವಸ್ಥೆ ಇಲ್ಲದೇ ಕತ್ತಲೆಯಲ್ಲಿ ಕಾರ್ಯಕ್ರಮಗಳನ್ನು ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕ ನೀರಿನ ವ್ಯವಸ್ಥೆ ಇಲ್ಲದೇ ಶೌಚಾಲಯ ದುರ್ವಾಸನೆ ಬೀರುತ್ತಿದೆ. ಇಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮೂಗು ಹಿಡಿದುಕೊಂಡು ಭವನದಲ್ಲಿ ಕೂರುವಂತಾಗಿದೆ.<br /> <br /> ಸರಿಯಾದ ಗಾಳಿ-ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ಕಾರ್ಯಕ್ರಮಗಳು ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚು ಹೊತ್ತು ಕೂರಲು ಆಗದೇ ಉಸಿರುಕಟ್ಟುವ ವಾತಾವರಣ ನಿರ್ಮಾಣವಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ, ಸ್ವಚ್ಛತೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.<br /> <br /> ಈ ಕುರಿತು `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಶಬರೀಶ ಅಂಗವಿಕಲರ ಸಂಸ್ಥೆಯ ಅಧ್ಯಕ್ಷ ಘನಶಾಂ ಭಾಂಡಗೆ, ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿಗೆ ಕಳಂಕ ತರುವಂತೆ ಭವನದ ಸ್ಥಿತಿಯಾಗಿದೆ. ಭವನಕ್ಕೆ ಅಗತ್ಯವಿರುವ ವಿದ್ಯುತ್, ನೀರು ಪೂರೈಕೆ ಮಾಡದೇ ಬಿಟಿಡಿಎ ಮತ್ತು ಜಿಲ್ಲಾಡಳಿತ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.<br /> <br /> ಸೂಕ್ತ ರಕ್ಷಣೆ ಇಲ್ಲದ ಭವನಕ್ಕೆ ಸಂಜೆಯಾಗುತ್ತಲೇ ಕಿಡಿಗೇಡಿಗಳು ಪ್ರವೇಶಿಸಿ, ಮದ್ಯ -ಮಾಂಸ ಸೇವಿಸಿ, ಜೂಜಾಡುತ್ತಾರೆ. ರಾತ್ರಿ ವೇಳೆ ಕೂಗಾಡುವುದು, ರಸ್ತೆ ಮೇಲೆ ಹೋಗುವವರಿಗೆ ಕೀಟಲೆ ಮಾಡುವ ಮೂಲಕ ಪರಿಸರವನ್ನು ಹಾಳುಮಾಡಿದ್ದಾರೆ. ಆದರೆ ಅವರಿಗೆ ಹೇಳುವವರಾಗಲಿ, ಕೇಳುವವರಾಗಲಿ ಇಲ್ಲ, ಒಟ್ಟಾರೆ ಸುಂದರ ಭವನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳಾಗುತ್ತಿದೆ ಎಂದು ದೂರಿದರು.<br /> <br /> ಭಾನುವಾರ ಇದೇ ಭವನದಲ್ಲಿ ನಡೆದ `ಪೆರಿಯಾರ್ ತತ್ವ ಚಿಂತನೆಯ ಪ್ರಸ್ತುತತೆ~ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡ ಮೈಸೂರಿನ ವಿಚಾರವಾದಿ ಕೆ.ಎಸ್. ಭಗವಾನ್ ಸಹ ಅಂಬೇಡ್ಕರ್ ಭವನದ ದುಃಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದರು.<br /> <br /> ತಕ್ಷಣ ಭವನಕ್ಕೆ ಸೂಕ್ತ ನೀರು, ವಿದ್ಯುತ್ ವ್ಯವಸ್ಥೆ ಕಲ್ಪಿಸಿ, ಭವನವನ್ನು ಸುಂದರವಾಗಿ ಇಡುವ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗಬೇಕು ಎಂದರು.<br /> <br /> ಭವನದ ಸುತ್ತ ಮುಳ್ಳಿನ ಗಿಡಗಂಟಿಗಳು ಬೆಳೆದು ಭಯಾನಕ ವಾತಾವರಣ ನಿರ್ಮಾಣವಾಗಿದೆ. ಸಂಜೆ ವೇಳೆ ಭವನದ ಸುತ್ತ ಸಾರ್ವಜನಿಕರು ಅಡ್ಡಾಡಲು ಆತಂಕ ಪಡುವಂತ ಸ್ಥಿತಿ ನಿರ್ಮಾಣವಾಗಿದೆ.<br /> ಭವನದ ದುರವಸ್ಥೆ ಮತ್ತು ಮೂಲಸೌಕರ್ಯಗಳ ಕೊರತೆ ಇರುವ ಕಾರಣ ಸಂಘ-ಸಂಸ್ಥೆಗಳು ಇಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಹಿಂದೇಟು ಹಾಕುತ್ತಿದ್ದಾರೆ. <br /> <br /> ಅಂಬೇಡ್ಕರ್ ಭವನದ ಮುಂಭಾಗದ ರಸ್ತೆ ಮತ್ತು ಪಕ್ಕದ ರಸ್ತೆಗಳ ಗಟಾರ ಕೊಳಚೆ ನೀರು ಮತ್ತು ತ್ಯಾಜ್ಯದಿಂದ ತುಂಬಿಕೊಂಡು ಅಸಹ್ಯ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣ ಭವನ ಸೇರಿದಂತೆ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> `ಮೇಲೆಲ್ಲ ಹೊಳಪು, ಒಳಗೆಲ್ಲ ಹುಳುಕು~ ಎಂಬ ಗಾದೆ ಮಾತಿನಂತೆ ಹೊರಗಿನಿಂದ ನೋಡಲು ಚಂದವಾಗಿ ತೋರುವ ನವನಗರದ ಸೆಕ್ಟರ್ ನಂ. 37ರಲ್ಲಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಭವನ ಒಳಾಂಗಣ ಮೂಲಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ.<br /> <br /> ಭವನಕ್ಕೆ ಅಗತ್ಯವಿರುವ ವಿದ್ಯುತ್ ವ್ಯವಸ್ಥೆ ಇಲ್ಲದೇ ಕತ್ತಲೆಯಲ್ಲಿ ಕಾರ್ಯಕ್ರಮಗಳನ್ನು ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕ ನೀರಿನ ವ್ಯವಸ್ಥೆ ಇಲ್ಲದೇ ಶೌಚಾಲಯ ದುರ್ವಾಸನೆ ಬೀರುತ್ತಿದೆ. ಇಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮೂಗು ಹಿಡಿದುಕೊಂಡು ಭವನದಲ್ಲಿ ಕೂರುವಂತಾಗಿದೆ.<br /> <br /> ಸರಿಯಾದ ಗಾಳಿ-ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ಕಾರ್ಯಕ್ರಮಗಳು ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚು ಹೊತ್ತು ಕೂರಲು ಆಗದೇ ಉಸಿರುಕಟ್ಟುವ ವಾತಾವರಣ ನಿರ್ಮಾಣವಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ, ಸ್ವಚ್ಛತೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.<br /> <br /> ಈ ಕುರಿತು `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಶಬರೀಶ ಅಂಗವಿಕಲರ ಸಂಸ್ಥೆಯ ಅಧ್ಯಕ್ಷ ಘನಶಾಂ ಭಾಂಡಗೆ, ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿಗೆ ಕಳಂಕ ತರುವಂತೆ ಭವನದ ಸ್ಥಿತಿಯಾಗಿದೆ. ಭವನಕ್ಕೆ ಅಗತ್ಯವಿರುವ ವಿದ್ಯುತ್, ನೀರು ಪೂರೈಕೆ ಮಾಡದೇ ಬಿಟಿಡಿಎ ಮತ್ತು ಜಿಲ್ಲಾಡಳಿತ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.<br /> <br /> ಸೂಕ್ತ ರಕ್ಷಣೆ ಇಲ್ಲದ ಭವನಕ್ಕೆ ಸಂಜೆಯಾಗುತ್ತಲೇ ಕಿಡಿಗೇಡಿಗಳು ಪ್ರವೇಶಿಸಿ, ಮದ್ಯ -ಮಾಂಸ ಸೇವಿಸಿ, ಜೂಜಾಡುತ್ತಾರೆ. ರಾತ್ರಿ ವೇಳೆ ಕೂಗಾಡುವುದು, ರಸ್ತೆ ಮೇಲೆ ಹೋಗುವವರಿಗೆ ಕೀಟಲೆ ಮಾಡುವ ಮೂಲಕ ಪರಿಸರವನ್ನು ಹಾಳುಮಾಡಿದ್ದಾರೆ. ಆದರೆ ಅವರಿಗೆ ಹೇಳುವವರಾಗಲಿ, ಕೇಳುವವರಾಗಲಿ ಇಲ್ಲ, ಒಟ್ಟಾರೆ ಸುಂದರ ಭವನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳಾಗುತ್ತಿದೆ ಎಂದು ದೂರಿದರು.<br /> <br /> ಭಾನುವಾರ ಇದೇ ಭವನದಲ್ಲಿ ನಡೆದ `ಪೆರಿಯಾರ್ ತತ್ವ ಚಿಂತನೆಯ ಪ್ರಸ್ತುತತೆ~ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡ ಮೈಸೂರಿನ ವಿಚಾರವಾದಿ ಕೆ.ಎಸ್. ಭಗವಾನ್ ಸಹ ಅಂಬೇಡ್ಕರ್ ಭವನದ ದುಃಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದರು.<br /> <br /> ತಕ್ಷಣ ಭವನಕ್ಕೆ ಸೂಕ್ತ ನೀರು, ವಿದ್ಯುತ್ ವ್ಯವಸ್ಥೆ ಕಲ್ಪಿಸಿ, ಭವನವನ್ನು ಸುಂದರವಾಗಿ ಇಡುವ ನಿಟ್ಟಿನಲ್ಲಿ ಜಿಲ್ಲೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗಬೇಕು ಎಂದರು.<br /> <br /> ಭವನದ ಸುತ್ತ ಮುಳ್ಳಿನ ಗಿಡಗಂಟಿಗಳು ಬೆಳೆದು ಭಯಾನಕ ವಾತಾವರಣ ನಿರ್ಮಾಣವಾಗಿದೆ. ಸಂಜೆ ವೇಳೆ ಭವನದ ಸುತ್ತ ಸಾರ್ವಜನಿಕರು ಅಡ್ಡಾಡಲು ಆತಂಕ ಪಡುವಂತ ಸ್ಥಿತಿ ನಿರ್ಮಾಣವಾಗಿದೆ.<br /> ಭವನದ ದುರವಸ್ಥೆ ಮತ್ತು ಮೂಲಸೌಕರ್ಯಗಳ ಕೊರತೆ ಇರುವ ಕಾರಣ ಸಂಘ-ಸಂಸ್ಥೆಗಳು ಇಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಹಿಂದೇಟು ಹಾಕುತ್ತಿದ್ದಾರೆ. <br /> <br /> ಅಂಬೇಡ್ಕರ್ ಭವನದ ಮುಂಭಾಗದ ರಸ್ತೆ ಮತ್ತು ಪಕ್ಕದ ರಸ್ತೆಗಳ ಗಟಾರ ಕೊಳಚೆ ನೀರು ಮತ್ತು ತ್ಯಾಜ್ಯದಿಂದ ತುಂಬಿಕೊಂಡು ಅಸಹ್ಯ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣ ಭವನ ಸೇರಿದಂತೆ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>