<p>ಬಾಗಲಕೋಟೆ: ರಾಜ್ಯದಲ್ಲಿ ಕೋಳಿ ಉದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ರೈತರು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಮಂಜುನಾಥ ಪಾಳೇಗಾರ್ ಸಲಹೆ ನೀಡಿದರು. <br /> <br /> ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ನಗರದಲ್ಲಿ ಏರ್ಪಡಿಸಿದ್ದ ಕೋಳಿ ಸಾಕಾಣಿಕೆ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಕೋಳಿ ಸಾಕಾಣಿಕೆಗೆ ಇಲಾಖೆಯಿಂದ ದೊರಕುವ ಸಹಾಯಧನ ಮತ್ತು ಇತರ ಯೋಜನೆಗಳ ಕುರಿತು ವಿವರ ನೀಡಿದರು.<br /> <br /> 500 ಮಾಂಸದ ಕೋಳಿ ಫಾರ್ಮ್ ಪ್ರಾರಂಭಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ರೂ.16,600 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದ ಫಲಾನುಭವಿಗಳಿಗೆ ರೂ.25,600ಗಳ ವರೆಗೆ ಸಹಾಯಧನ ಇಲಾಖೆಯಿಂದ ಆದ್ಯತೆಯ ಮೇರೆಗೆ ನೀಡಲಾಗುವುದು ಎಂದರು. <br /> <br /> ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಂದ ರೈತರು ಶಿಬಿರದಲ್ಲಿ ಭಾಗವಹಿಸಿದ್ದರು. <br /> ಫ್ಯೂಚರ್ ಗ್ರೀನ್ ಸಂಸ್ಥೆಯ ಮುಖ್ಯಸ್ಥ ಡಾ.ಬಿ.ಆರ್. ಅಥಣಿ, ಬಿ.ಆರ್. ಹಿರೇಮಠ, ಎಸ್.ಪಿ. ಜಗಲಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ರಾಜ್ಯದಲ್ಲಿ ಕೋಳಿ ಉದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ರೈತರು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಮಂಜುನಾಥ ಪಾಳೇಗಾರ್ ಸಲಹೆ ನೀಡಿದರು. <br /> <br /> ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ನಗರದಲ್ಲಿ ಏರ್ಪಡಿಸಿದ್ದ ಕೋಳಿ ಸಾಕಾಣಿಕೆ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಕೋಳಿ ಸಾಕಾಣಿಕೆಗೆ ಇಲಾಖೆಯಿಂದ ದೊರಕುವ ಸಹಾಯಧನ ಮತ್ತು ಇತರ ಯೋಜನೆಗಳ ಕುರಿತು ವಿವರ ನೀಡಿದರು.<br /> <br /> 500 ಮಾಂಸದ ಕೋಳಿ ಫಾರ್ಮ್ ಪ್ರಾರಂಭಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ರೂ.16,600 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದ ಫಲಾನುಭವಿಗಳಿಗೆ ರೂ.25,600ಗಳ ವರೆಗೆ ಸಹಾಯಧನ ಇಲಾಖೆಯಿಂದ ಆದ್ಯತೆಯ ಮೇರೆಗೆ ನೀಡಲಾಗುವುದು ಎಂದರು. <br /> <br /> ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಂದ ರೈತರು ಶಿಬಿರದಲ್ಲಿ ಭಾಗವಹಿಸಿದ್ದರು. <br /> ಫ್ಯೂಚರ್ ಗ್ರೀನ್ ಸಂಸ್ಥೆಯ ಮುಖ್ಯಸ್ಥ ಡಾ.ಬಿ.ಆರ್. ಅಥಣಿ, ಬಿ.ಆರ್. ಹಿರೇಮಠ, ಎಸ್.ಪಿ. ಜಗಲಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>