<p><strong>ಬಾಗಲಕೋಟೆ: </strong>ಜೆಡಿಎಸ್ ಯುವ ಚೇತನ ಸಮಾವೇಶ ಇದೇ 1ರಂದು ನವನಗರದ ಕಲಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಬಸವಪ್ರಭು ಸರನಾಡಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.<br /> <br /> ಪಕ್ಷಕ್ಕೆ ಯುವ ಸಮುದಾಯವನ್ನು ಆಕರ್ಷಿಸುವ ಉದ್ದೇಶದಿಂದ ಜೆಡಿಎಸ್ ಯುವ ಘಟಕದ ರಾಜಾಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ `ಯುವ ಚೇತನ~ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.<br /> <br /> ಸಿನಿಮಾ ನಟಿ ಪೂಜಾ ಗಾಂಧಿ, ಮಾಜಿ ಸಚಿವರಾದ ಬಸನಗೌಡ ಪಾಟೀಲ ಯತ್ನಾಳ, ಬಸವರಾಜ ಹೊರಟ್ಟಿ ಸೇರಿದಂತೆ ಪ್ರಮುಖ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.<br /> <br /> ಸಮಾವೇಶದ ಅಂಗವಾಗಿ ಜೆಡಿಎಸ್ ಕಚೇರಿ ಆವರಣದಿಂದ ಪಕ್ಷದ ಯುವ ಕಾರ್ಯಕರ್ತರ ಬೈಕ್ ರ್ಯಾಲಿ ನಡೆಯಲಿದೆ. ಮೂರರಿಂದ ನಾಲ್ಕು ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ಹಲವು ಮಂದಿ ಯುವಕರು ಜೆಡಿಎಸ್ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದರು.<br /> <br /> <strong>ಜೆಡಿಎಸ್ನಲ್ಲೇ ಇರುತ್ತೇನೆ:</strong>ಜಿಲ್ಲೆಯ ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲ ಮುಖಂಡರು ಬಸವಪ್ರಭು ಸರನಾಡಗೌಡ ಜೆಡಿಎಸ್ ಬಿಡುತ್ತಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ತಿಳಿದುಬಂದಿದೆ, ಪಕ್ಷದ ಕಾರ್ಯಕರ್ತರಲ್ಲಿ ಅನಗತ್ಯ ಗೊಂದಲ ಸೃಷ್ಠಿಸಲಾಗುತ್ತಿದೆ, ಕಾರ್ಯಕರ್ತರು ಇದಕ್ಕೆ ಕಿವಿಗೊಡಬಾರದು ಎಂದರು.<br /> <br /> ಜೆಡಿಎಸ್ನಿಂದಲೇ ರಾಜಕೀಯ ಆರಂಭಿಸಿದ್ದೇನೆ, ಇದೇ ಪಕ್ಷದಲ್ಲಿ ಕೊನೆವರೆಗೂ ಇರುತ್ತೇನೆ ಎಂದು ಹೇಳಿದರು.<br /> ಬೀಳಗಿಯಿಂದಲೇ ಸ್ಪರ್ಧೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೀಳಗಿ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಹೇಳಿದ ಅವರು, ಬೀಳಗಿಯಲ್ಲಿ ಸಚಿವ ಮುರುಗೇಶ ನಿರಾಣಿ ಬೆಂಬಲಿಗರು ದಬ್ಬಾಳಿಕೆ ರಾಜಕೀಯ ಮಾಡುತ್ತಿದ್ದಾರೆ, ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಖಂಡನೆ: ಅಪ್ಪ, ಮಕ್ಕಳನ್ನು ವಿಧಾನಸೌಧದ ಮೆಟ್ಟಿಲು ಹತ್ತದಂತೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಯನ್ನು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಶಂಭುಲಿಂಗಪ್ಪ ಅಕ್ಕಿಮರಡಿ ತೀವ್ರವಾಗಿ ಖಂಡಿಸಿದರು. <br /> <br /> ಉಪ ಮುಖ್ಯಮಂತ್ರಿಯಾಗುವಾಗ ಇದೇ ಅಪ್ಪ- ಮಕ್ಕಳು ಯಡಿಯೂರಪ್ಪಗೆ ಬೇಕಾಗಿದ್ದರು ಎಂಬುದನ್ನು ಮರೆಯಬಾರದು ಎಂದು ಹೇಳಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಯುವ ಘಟಕದ ಅಧ್ಯಕ್ಷ ಶಿವಪ್ರಸಾದ ಗದ್ದಿ, ಅಶೋಕ ಲಾಗಲೂಟಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದಾಕ್ಷಾಯಿಣಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಜೆಡಿಎಸ್ ಯುವ ಚೇತನ ಸಮಾವೇಶ ಇದೇ 1ರಂದು ನವನಗರದ ಕಲಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಬಸವಪ್ರಭು ಸರನಾಡಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.<br /> <br /> ಪಕ್ಷಕ್ಕೆ ಯುವ ಸಮುದಾಯವನ್ನು ಆಕರ್ಷಿಸುವ ಉದ್ದೇಶದಿಂದ ಜೆಡಿಎಸ್ ಯುವ ಘಟಕದ ರಾಜಾಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ `ಯುವ ಚೇತನ~ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.<br /> <br /> ಸಿನಿಮಾ ನಟಿ ಪೂಜಾ ಗಾಂಧಿ, ಮಾಜಿ ಸಚಿವರಾದ ಬಸನಗೌಡ ಪಾಟೀಲ ಯತ್ನಾಳ, ಬಸವರಾಜ ಹೊರಟ್ಟಿ ಸೇರಿದಂತೆ ಪ್ರಮುಖ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.<br /> <br /> ಸಮಾವೇಶದ ಅಂಗವಾಗಿ ಜೆಡಿಎಸ್ ಕಚೇರಿ ಆವರಣದಿಂದ ಪಕ್ಷದ ಯುವ ಕಾರ್ಯಕರ್ತರ ಬೈಕ್ ರ್ಯಾಲಿ ನಡೆಯಲಿದೆ. ಮೂರರಿಂದ ನಾಲ್ಕು ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ಹಲವು ಮಂದಿ ಯುವಕರು ಜೆಡಿಎಸ್ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದರು.<br /> <br /> <strong>ಜೆಡಿಎಸ್ನಲ್ಲೇ ಇರುತ್ತೇನೆ:</strong>ಜಿಲ್ಲೆಯ ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲ ಮುಖಂಡರು ಬಸವಪ್ರಭು ಸರನಾಡಗೌಡ ಜೆಡಿಎಸ್ ಬಿಡುತ್ತಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ತಿಳಿದುಬಂದಿದೆ, ಪಕ್ಷದ ಕಾರ್ಯಕರ್ತರಲ್ಲಿ ಅನಗತ್ಯ ಗೊಂದಲ ಸೃಷ್ಠಿಸಲಾಗುತ್ತಿದೆ, ಕಾರ್ಯಕರ್ತರು ಇದಕ್ಕೆ ಕಿವಿಗೊಡಬಾರದು ಎಂದರು.<br /> <br /> ಜೆಡಿಎಸ್ನಿಂದಲೇ ರಾಜಕೀಯ ಆರಂಭಿಸಿದ್ದೇನೆ, ಇದೇ ಪಕ್ಷದಲ್ಲಿ ಕೊನೆವರೆಗೂ ಇರುತ್ತೇನೆ ಎಂದು ಹೇಳಿದರು.<br /> ಬೀಳಗಿಯಿಂದಲೇ ಸ್ಪರ್ಧೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೀಳಗಿ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಹೇಳಿದ ಅವರು, ಬೀಳಗಿಯಲ್ಲಿ ಸಚಿವ ಮುರುಗೇಶ ನಿರಾಣಿ ಬೆಂಬಲಿಗರು ದಬ್ಬಾಳಿಕೆ ರಾಜಕೀಯ ಮಾಡುತ್ತಿದ್ದಾರೆ, ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಖಂಡನೆ: ಅಪ್ಪ, ಮಕ್ಕಳನ್ನು ವಿಧಾನಸೌಧದ ಮೆಟ್ಟಿಲು ಹತ್ತದಂತೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಯನ್ನು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಶಂಭುಲಿಂಗಪ್ಪ ಅಕ್ಕಿಮರಡಿ ತೀವ್ರವಾಗಿ ಖಂಡಿಸಿದರು. <br /> <br /> ಉಪ ಮುಖ್ಯಮಂತ್ರಿಯಾಗುವಾಗ ಇದೇ ಅಪ್ಪ- ಮಕ್ಕಳು ಯಡಿಯೂರಪ್ಪಗೆ ಬೇಕಾಗಿದ್ದರು ಎಂಬುದನ್ನು ಮರೆಯಬಾರದು ಎಂದು ಹೇಳಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಯುವ ಘಟಕದ ಅಧ್ಯಕ್ಷ ಶಿವಪ್ರಸಾದ ಗದ್ದಿ, ಅಶೋಕ ಲಾಗಲೂಟಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದಾಕ್ಷಾಯಿಣಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>