‘ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವಾಗ ನನ್ನ ಗಮನಕ್ಕೆ ತಂದು ಕ್ರಮ ಕೈಗೊಳ್ಳುವಂತೆ ಹಂಗಾಮಿ ಕುಲಪತಿಗೆ ಸೂಚಿಸಿದ್ದೇನೆ. ಹಾಗಿದ್ದರೂ ಕೂಡ ಏಕ ಪಕ್ಷೀಯವಾಗಿ ವರ್ಗಾವಣೆ, ಪರಸ್ಪರ ವರ್ಗಾವಣೆ, ಕೆಲಸದಲ್ಲಿ ಹೊಂದಾಣಿಕೆಯ ಖಾಯಂಗೊಳಿಸುವಿಕೆ ಆದೇಶಗಳನ್ನು ಹೊರಡಿಸಿದ್ದಾರೆ. ಅದು ವಿಷಾದದ ಸಂಗತಿ. ಸದರಿ ಆದೇಶಗಳನ್ನು ಕೂಡಲೇ ಜಾರಿಗೆ ಬರುವಂತೆ ತಡೆಹಿಡಿಯಲು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಿ ತಮಗೆ ವರದಿ ಸಲ್ಲಿಸುವಂತೆ ಇಲಾಖೆಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಮನಗೂಳಿ ಉಲ್ಲೇಖಿಸಿದ್ದಾರೆ.