ರಬಕವಿ ಬನಹಟ್ಟಿ ಸಮೀಪದ ಕೃಷ್ಣಾ ನದಿಯ ತಗ್ಗು ಪ್ರದೇಶದಲ್ಲಿ ನಿಂತ ನೀರನ್ನು ಹೊಲ ತೋಟಗಳಿಗೆ ಹಾಯಿಸಲು ರೈತರು ಪೈಪ್ಗಳನ್ನು ಜೋಡಿಸುತ್ತ, ನದಿಯ ತೀರದಲ್ಲಿ ಕುಳಿತು ಪರದಾಡುತ್ತಿದ್ದಾರೆ. ಬಾವಿಗಳು ಖಾಲಿಯಾಗಿದ್ದು, ಬೋರ್ವೆಲ್ಗಳಲ್ಲಿಯ ಅಂತರ್ಜಲ ಮಟ್ಟ ಬಹಳಷ್ಟು ಕಡಿಮೆಯಾಗಿದ್ದರಿಂದ ರೈತರ ಬೆಳೆಗಳಿಗೆ ನೀರು ಸಾಕಾಗುತ್ತಿಲ್ಲ. ಆದ್ದರಿಂದ ಕೃಷಿಕರು ಹಗಲು ರಾತ್ರಿ ಎನ್ನದೆ, ಬಿಸಿಲನ್ನು ಲೆಕ್ಕಿಸದೆ ನದಿಯಲ್ಲಿ ಅಳಿದುಳಿದ ನೀರನ್ನು ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.