ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಬಿಜ್ಜಳ ಮಾತನಾಡಿ, ‘ಕೇಂದ್ರ ಸರ್ಕಾರ ರೂಪಿಸಲು ಹೊರಟಿರುವ ಹೊಸ ಔಷಧಿ ಮಾರಾಟ ನೀತಿಯಿಂದ ಅಮಲಿನ ಮಾತ್ರೆಗಳು, ಗರ್ಭಾಶಯದ ಮೇಲೆ ದುಷ್ಪರಿಣಾಮ ಬೀರುವ ಔಷಧಿಗಳನ್ನು ಖರೀದಿಸಲು ಅನುಕೂಲವಾಗಲಿದೆ. ಇವುಗಳಿಂದ ಯುವಕ ಯುವತಿಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.