<p><strong>ಬಾಗಲಕೋಟೆ: </strong> ಕೃಷಿಕರ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ತಾಲ್ಲೂಕಿನ ಮುರನಾಳದ ಮಳೇರಾಜೇಂದ್ರ ಸ್ವಾಮಿಮಠದ ಜಾತ್ರಾ ಮಹೋತ್ಸವ ನಿಮಿತ್ತ ಶುಕ್ರವಾರ ರಥೋತ್ಸವ ಅದ್ದೂರಿಯಾಗಿ ನಡೆಯಿತು. <br /> <br /> ಮಳೇರಾಜೇಂದ್ರ ಸ್ವಾಮಿ ಮಠದ ಜಾತ್ರಾ ಮಹೋತ್ಸವ ನಿಮಿತ್ತ ಮಹಾರಥೋತ್ಸವದ ನಿಮಿತ್ತ ಮಳೇರಾಜೇಂದ್ರ ಸ್ವಾಮಿ ಮಠದಲ್ಲಿ ಬೆಳೆಗ್ಗೆ ವಿಶೇಷ ಪೂಜೆ, ಅಭಿಷೇಕ ಕಾರ್ಯಕ್ರಮಗಳು ನಡೆದವು. ಅಲ್ಲದೇ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿತ್ತು.<br /> <br /> ಸಂಜೆ ಸುಮಂಗಲೆಯರ ಆರುತಿ , ಸಕಲ ವಾಧ್ಯವೈಭವ ಹಾಗೂ ಸಹಸ್ರಾರು ಜನರ ಮಧ್ಯೆದಲ್ಲಿ ಮಳೇರಾಜೇಂದ್ರ ಸ್ವಾಮಿಮಠದ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಚುರುಮುರಿ, ಬಾಳೆಹಣ್ಣುಗಳನ್ನು ತೇರಿನ ಮೇಲೆ ಹಾರಿಸುವ ಮೂಲಕ ಭಕ್ತಿಯನ್ನು ಸಮರ್ಪಿಸಿದರು.<br /> <br /> ತೇರವನ್ನು ಬಣ್ಣದ ಹೊಸ ಬಟ್ಟೆ, ಹೂಮಾಲೆ ಹಾಗೂ ಪರಪರಿಯಿಂದ ಅಲಂಕರಿಸಲಾಗಿತ್ತು. ಬಾಗಲಕೋಟೆ ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. <br /> <br /> <strong>ಇಂದು ಕಡುಬಿನ ಕಾಳಗ </strong><br /> ಶನಿವಾರ ಸಂಜೆ ಕಡುಬಿನ ಕಾಳಗ ಕಾರ್ಯಕ್ರಮ ನಡೆಯಲಿದೆ. ಮುಂದಿನ ವರ್ಷದ ಮಳೆ ಬೆಳೆ ಸೂಚನೆ ನೀಡುವ ಕಡುಬಿನ ಕಾಳಗ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ನೂರಾರು ಜನರು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong> ಕೃಷಿಕರ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ತಾಲ್ಲೂಕಿನ ಮುರನಾಳದ ಮಳೇರಾಜೇಂದ್ರ ಸ್ವಾಮಿಮಠದ ಜಾತ್ರಾ ಮಹೋತ್ಸವ ನಿಮಿತ್ತ ಶುಕ್ರವಾರ ರಥೋತ್ಸವ ಅದ್ದೂರಿಯಾಗಿ ನಡೆಯಿತು. <br /> <br /> ಮಳೇರಾಜೇಂದ್ರ ಸ್ವಾಮಿ ಮಠದ ಜಾತ್ರಾ ಮಹೋತ್ಸವ ನಿಮಿತ್ತ ಮಹಾರಥೋತ್ಸವದ ನಿಮಿತ್ತ ಮಳೇರಾಜೇಂದ್ರ ಸ್ವಾಮಿ ಮಠದಲ್ಲಿ ಬೆಳೆಗ್ಗೆ ವಿಶೇಷ ಪೂಜೆ, ಅಭಿಷೇಕ ಕಾರ್ಯಕ್ರಮಗಳು ನಡೆದವು. ಅಲ್ಲದೇ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿತ್ತು.<br /> <br /> ಸಂಜೆ ಸುಮಂಗಲೆಯರ ಆರುತಿ , ಸಕಲ ವಾಧ್ಯವೈಭವ ಹಾಗೂ ಸಹಸ್ರಾರು ಜನರ ಮಧ್ಯೆದಲ್ಲಿ ಮಳೇರಾಜೇಂದ್ರ ಸ್ವಾಮಿಮಠದ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಚುರುಮುರಿ, ಬಾಳೆಹಣ್ಣುಗಳನ್ನು ತೇರಿನ ಮೇಲೆ ಹಾರಿಸುವ ಮೂಲಕ ಭಕ್ತಿಯನ್ನು ಸಮರ್ಪಿಸಿದರು.<br /> <br /> ತೇರವನ್ನು ಬಣ್ಣದ ಹೊಸ ಬಟ್ಟೆ, ಹೂಮಾಲೆ ಹಾಗೂ ಪರಪರಿಯಿಂದ ಅಲಂಕರಿಸಲಾಗಿತ್ತು. ಬಾಗಲಕೋಟೆ ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. <br /> <br /> <strong>ಇಂದು ಕಡುಬಿನ ಕಾಳಗ </strong><br /> ಶನಿವಾರ ಸಂಜೆ ಕಡುಬಿನ ಕಾಳಗ ಕಾರ್ಯಕ್ರಮ ನಡೆಯಲಿದೆ. ಮುಂದಿನ ವರ್ಷದ ಮಳೆ ಬೆಳೆ ಸೂಚನೆ ನೀಡುವ ಕಡುಬಿನ ಕಾಳಗ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ನೂರಾರು ಜನರು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>