ಬಾಗಲಕೋಟೆ: ಕರ್ತವ್ಯಲೋಪದ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಶೋಕ ಕೆಲವಡಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಅಂಗನವಾಡಿ ಕೇಂದ್ರಗಳಿಗೆ ಪೂರೈಸುವ ಆಹಾರ ಪದಾರ್ಥಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಅದರ ವಿಶ್ಲೇಷಣಾ ವರದಿ ಸಲ್ಲಿಸದ ಅಶೋಕ ಕೆಲವಡಿ ಅವರನ್ನು ಸೇವೆಯಿಂದ ಅಮಾತುಗೊಳಿಸಿ ಇಲಾಖೆಯ ಅಧೀನ ಕಾರ್ಯದರ್ಶಿ ಜಯಲಕ್ಷ್ಮೀ ಗುರುವಾರ ಆದೇಶ ಹೊರಡಿಸಿದ್ದಾರೆ.