<p><strong>ಹೊಸಪೇಟೆ (ವಿಜಯನಗರ):</strong> ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳ ಸರ್ಕಾರಿ ಆಸ್ಪತ್ರೆಯಲ್ಲಿನ ಆಮ್ಲಜನಕ ಘಟಕಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಎಂತಹ ಪರಿಸ್ಥಿತಿಯಲ್ಲೂ ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.</p>.<p>ಚಾಮರಾಜನಗರ ಜಿಲ್ಲೆಯಲ್ಲಿ ಆಮ್ಲಜನಕ ಕೊರತೆಯಿಂದ ಸಾಕಷ್ಟು ಸಾವು ನೋವು ಉಂಟಾಗಿತ್ತು. ಶನಿವಾರ ನಗರದ ಸರ್ಕಾರಿ ಆಸ್ಪತ್ರೆಯ ಘಟಕದಲ್ಲಿ ಆಮ್ಲಜನಕ ಮುಗಿಯುವ ಹಂತಕ್ಕೆ ಬಂದಿತ್ತು. ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರ ಸಮಯಪ್ರಜ್ಞೆಯಿಂದ ಸಕಾಲಕ್ಕೆ ಆಮ್ಲಜನಕ ಪೂರೈಸಿ ಆಗಬಹುದಾಗಿದ್ದ ದೊಡ್ಡ ದುರಂತ ತಪ್ಪಿ ಹೋಗಿದೆ.</p>.<p>ಈ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಎಲ್ಲ ತಾಲ್ಲೂಕುಗಳಲ್ಲಿ ಸಮರ್ಪಕ ಆಮ್ಲಜನಕ ಪೂರೈಕೆಗೆ ಕ್ರಮ ಕೈಗೊಂಡಿದೆ. ಆಮ್ಲಜನಕ ಲಭ್ಯತೆ ಮೇಲೆ ದಿನದ 24 ಗಂಟೆ ಕಣ್ಣಿಡಲು ಎಲ್ಲ ಘಟಕಗಳ ಬಳಿ ಸಿಬ್ಬಂದಿಯನ್ನು ನಿಯೋಜಿಸಿದೆ.</p>.<p>ನಗರದ ಸರ್ಕಾರಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕದಲ್ಲಿ ಜಂಬೋ ಸಿಲಿಂಡರ್ಗಳ ಜತೆಗೆ ಹೆಚ್ಚುವರಿ ಸಿಲಿಂಡರ್ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ತುರ್ತು ಸೇವೆ, ಶಸ್ತ್ರ ಚಿಕಿತ್ಸೆ ವಿಭಾಗ, ಕೋವಿಡ್ ವಾರ್ಡ್, ಸಾಮಾನ್ಯ ವಾರ್ಡ್ಗಳಿಗೆ ಆ ಘಟಕಗಳ ಮೂಲಕವೇ ಆಮ್ಲಜನಕ ಪೂರೈಕೆಯಾಗುತ್ತಿದೆ. ಉಪವಿಭಾಗಾಧಿಕಾರಿ, ತಹಶೀಲ್ದಾರ್, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮೇಲಿಂದ ಮೇಲೆ ಆಮ್ಲಜನಕ ಲಭ್ಯತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.</p>.<p>‘ಎಲ್ಲ ತಾಲ್ಲೂಕುಗಳಲ್ಲಿ ಅಗತ್ಯ ಆಮ್ಲಜನಕಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೆಚ್ಚುವರಿ ಜಂಬೋ ಸಿಲಿಂಡರ್ ಕೂಡ ಇಟ್ಟುಕೊಳ್ಳಲಾಗಿದೆ. ಘಟಕಗಳ ಮೇಲೆ ನಿಗಾ ಇಡುವುದಕ್ಕಾಗಿಯೇ ಪ್ರತ್ಯೇಕವಾಗಿ ಸಿಬ್ಬಂದಿ ನಿಯೋಜಿಸಲಾಗಿದೆ’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳ ಸರ್ಕಾರಿ ಆಸ್ಪತ್ರೆಯಲ್ಲಿನ ಆಮ್ಲಜನಕ ಘಟಕಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಎಂತಹ ಪರಿಸ್ಥಿತಿಯಲ್ಲೂ ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.</p>.<p>ಚಾಮರಾಜನಗರ ಜಿಲ್ಲೆಯಲ್ಲಿ ಆಮ್ಲಜನಕ ಕೊರತೆಯಿಂದ ಸಾಕಷ್ಟು ಸಾವು ನೋವು ಉಂಟಾಗಿತ್ತು. ಶನಿವಾರ ನಗರದ ಸರ್ಕಾರಿ ಆಸ್ಪತ್ರೆಯ ಘಟಕದಲ್ಲಿ ಆಮ್ಲಜನಕ ಮುಗಿಯುವ ಹಂತಕ್ಕೆ ಬಂದಿತ್ತು. ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರ ಸಮಯಪ್ರಜ್ಞೆಯಿಂದ ಸಕಾಲಕ್ಕೆ ಆಮ್ಲಜನಕ ಪೂರೈಸಿ ಆಗಬಹುದಾಗಿದ್ದ ದೊಡ್ಡ ದುರಂತ ತಪ್ಪಿ ಹೋಗಿದೆ.</p>.<p>ಈ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಎಲ್ಲ ತಾಲ್ಲೂಕುಗಳಲ್ಲಿ ಸಮರ್ಪಕ ಆಮ್ಲಜನಕ ಪೂರೈಕೆಗೆ ಕ್ರಮ ಕೈಗೊಂಡಿದೆ. ಆಮ್ಲಜನಕ ಲಭ್ಯತೆ ಮೇಲೆ ದಿನದ 24 ಗಂಟೆ ಕಣ್ಣಿಡಲು ಎಲ್ಲ ಘಟಕಗಳ ಬಳಿ ಸಿಬ್ಬಂದಿಯನ್ನು ನಿಯೋಜಿಸಿದೆ.</p>.<p>ನಗರದ ಸರ್ಕಾರಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕದಲ್ಲಿ ಜಂಬೋ ಸಿಲಿಂಡರ್ಗಳ ಜತೆಗೆ ಹೆಚ್ಚುವರಿ ಸಿಲಿಂಡರ್ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ತುರ್ತು ಸೇವೆ, ಶಸ್ತ್ರ ಚಿಕಿತ್ಸೆ ವಿಭಾಗ, ಕೋವಿಡ್ ವಾರ್ಡ್, ಸಾಮಾನ್ಯ ವಾರ್ಡ್ಗಳಿಗೆ ಆ ಘಟಕಗಳ ಮೂಲಕವೇ ಆಮ್ಲಜನಕ ಪೂರೈಕೆಯಾಗುತ್ತಿದೆ. ಉಪವಿಭಾಗಾಧಿಕಾರಿ, ತಹಶೀಲ್ದಾರ್, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮೇಲಿಂದ ಮೇಲೆ ಆಮ್ಲಜನಕ ಲಭ್ಯತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.</p>.<p>‘ಎಲ್ಲ ತಾಲ್ಲೂಕುಗಳಲ್ಲಿ ಅಗತ್ಯ ಆಮ್ಲಜನಕಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೆಚ್ಚುವರಿ ಜಂಬೋ ಸಿಲಿಂಡರ್ ಕೂಡ ಇಟ್ಟುಕೊಳ್ಳಲಾಗಿದೆ. ಘಟಕಗಳ ಮೇಲೆ ನಿಗಾ ಇಡುವುದಕ್ಕಾಗಿಯೇ ಪ್ರತ್ಯೇಕವಾಗಿ ಸಿಬ್ಬಂದಿ ನಿಯೋಜಿಸಲಾಗಿದೆ’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>