ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣಿವಿಹಳ್ಳಿ: ಮತ್ತೆ 6 ಮಂದಿಗೆ ವಾಂತಿ, ಬೇಧಿ

Published 22 ಜುಲೈ 2023, 16:19 IST
Last Updated 22 ಜುಲೈ 2023, 16:19 IST
ಅಕ್ಷರ ಗಾತ್ರ

ಹರಪನಹಳ್ಳಿ: ‘ತಾಲ್ಲೂಕಿನ ಕಣಿವಿಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿದ ಆರು ಜನರು ವಾಂತಿ, ಬೇಧಿಯಿಂದ ಬಳಲುತ್ತಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಹಾಲಸ್ವಾಮಿ ತಿಳಿಸಿದರು.

‘ಶುಕ್ರವಾರ ಸಂಜೆವರೆಗೂ 14 ಜನ ಅಸ್ವಸ್ಥರಾಗಿದ್ದರು. ರಾತ್ರಿ ಮತ್ತೊಬ್ಬರಿಗೆ ಹಾಗೂ ಶನಿವಾರ ಐವರು ಸೇರಿ ಒಟ್ಟು 20 ಜನರು ವಾಂತಿ, ಬೇಧಿಯಿಂದ ಬಳಲಿದ್ದಾರೆ. ಎಂಟು ಜನರು ಸಾರ್ವಜನಿಕ ಆಸ್ಪತ್ರೆ, ಮೂವರು ಸ್ಥಳೀಯ ಖಾಸಗಿ ಆಸ್ಪತ್ರೆ, ಒಬ್ಬರು ದಾವಣಗೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ’ ಎಂದರು.

‘ಗ್ರಾಮದ ತಾತ್ಕಾಲಿಕ ಚಿಕಿತ್ಸಾ ಕೇಂದ್ರದಲ್ಲಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಮೂರು ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಒಂದು ಆಂಬುಲೆನ್ಸ್ ಇದೆ’ ಎಂದು ಹೇಳಿದರು.

‘ಕೊಳವೆಬಾವಿ ನೀರು ಪೂರೈಕೆ ಸ್ಥಗಿತಗೊಳಿಸಿದ್ದು, ಟ್ಯಾಂಕರ್ ಮೂಲಕ ಶುದ್ದ ನೀರು ಪೂರೈಸಲಾಗುತ್ತಿದೆ’ ಎಂದು ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಇಇ ಪ್ರಸನ್ನ ತಿಳಿಸಿದರು.

ಹರಪನಹಳ್ಳಿ ತಾಲ್ಲೂಕು ಕಣಿವಿಹಳ್ಳಿಯಲ್ಲಿ  ಮುಂಜಾಗ್ರತವಾಗಿ ಅಂಬುಲೆನ್ಸ್ ನಿಲ್ಲಿಸಲಾಗಿದೆ.
ಹರಪನಹಳ್ಳಿ ತಾಲ್ಲೂಕು ಕಣಿವಿಹಳ್ಳಿಯಲ್ಲಿ  ಮುಂಜಾಗ್ರತವಾಗಿ ಅಂಬುಲೆನ್ಸ್ ನಿಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT