<p><strong>ಕಂಪ್ಲಿ</strong>: ಇಲ್ಲಿಯ ಐತಿಹಾಸಿಕ ಸೋಮಪ್ಪ ಕೆರೆಯಲ್ಲಿ ಕಾಣಿಸಿಕೊಂಡಿದ್ದ ಮೊಸಳೆ ಶುಕ್ರವಾರ ಮೀನುಗಾರರ ಬಲೆಗೆ ಬಿದ್ದಿದೆ.</p>.<p>ಅರಣ್ಯ ಇಲಾಖೆ ಮತ್ತು ಸ್ಥಳೀಯ ಕೋಟೆ ಪ್ರದೇಶದ ತುಂಗಭದ್ರಾ ಸಹಕಾರ ಸಂಘದ ಮೀನುಗಾರರು ಮೂರು ದಿನಗಳಿಂದ ಈ ಕಾರ್ಯಾಚರಣೆ ನಡೆಸುತ್ತಿದ್ದರು. ಮೊಸಳೆ ಸೆರೆಗಾಗಿ 25 ತೆಪ್ಪಗಳನ್ನು ಬಳಸಿದ್ದ ಮೀನುಗಾರರು ಮೀನು ಬಲೆಯೊಂದಿಗೆ ಕೆರೆ ಪೂರ್ಣ ಜಾಲಾಡಿದರು. ಅಂತಿಮವಾಗಿ ಶುಕ್ರವಾರ ಬೆಳಿಗ್ಗೆ 8.45ಕ್ಕೆ ಮೊಸಳೆ ಸೆರೆಯಾಯಿತು.</p>.<p>ಹೊಸಪೇಟೆ ಪ್ರಾದೇಶಿಕ ಅರಣ್ಯ ವಲಯದ ಗಸ್ತು ಅರಣ್ಯ ಪಾಲಕ ಬಿ. ರಾಘವೇಂದ್ರ ಮಾತನಾಡಿ, ‘ಸೆರೆ ಹಿಡಿದ ಮೊಸಳೆ ಆರೋಗ್ಯವಾಗಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ತುಂಗಭದ್ರಾ ನದಿ ಬಳಿಯ ತಳವಾರಘಟ್ಟ ಪ್ರದೇಶದ ನೀರಿನಲ್ಲಿ ಬಿಡಲಾಯಿತು’ ಎಂದು ಮಾಹಿತಿ ನೀಡಿದರು.</p>.<p>ಅರಣ್ಯ ವೀಕ್ಷಕ ಬಿ. ನಾಗಪ್ಪ, ಕಂಪ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್. ಚಿನ್ನರಾಜು, ಉಪಾಧ್ಯಕ್ಷ ಶಣ್ಮುಖ, ನಾಗೇಶ, ವಿರುಪಣ್ಣ, ಎಂ. ರಾಜಪ್ಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<p>‘ಕೆರೆಯಲ್ಲಿ ಮತ್ತೊಂದು ಸಣ್ಣ ಮೊಸಳೆ ಇರುವುದಾಗಿ ಜನ ತಿಳಿಸಿದ್ದಾರೆ. ಅದನ್ನೂ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದೆ. ಕೆರೆ ಏರಿಯಲ್ಲಿ ವಾಯು ವಿಹಾರ ನಡೆಸುವವರು ಮೊಸಳೆ ಸೇರಿ ವಿಷಜಂತುಗಳ ಬಗ್ಗೆ ಎಚ್ಚರವಹಿಸಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಕೆ. ದುರುಗಣ್ಣ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಇಲ್ಲಿಯ ಐತಿಹಾಸಿಕ ಸೋಮಪ್ಪ ಕೆರೆಯಲ್ಲಿ ಕಾಣಿಸಿಕೊಂಡಿದ್ದ ಮೊಸಳೆ ಶುಕ್ರವಾರ ಮೀನುಗಾರರ ಬಲೆಗೆ ಬಿದ್ದಿದೆ.</p>.<p>ಅರಣ್ಯ ಇಲಾಖೆ ಮತ್ತು ಸ್ಥಳೀಯ ಕೋಟೆ ಪ್ರದೇಶದ ತುಂಗಭದ್ರಾ ಸಹಕಾರ ಸಂಘದ ಮೀನುಗಾರರು ಮೂರು ದಿನಗಳಿಂದ ಈ ಕಾರ್ಯಾಚರಣೆ ನಡೆಸುತ್ತಿದ್ದರು. ಮೊಸಳೆ ಸೆರೆಗಾಗಿ 25 ತೆಪ್ಪಗಳನ್ನು ಬಳಸಿದ್ದ ಮೀನುಗಾರರು ಮೀನು ಬಲೆಯೊಂದಿಗೆ ಕೆರೆ ಪೂರ್ಣ ಜಾಲಾಡಿದರು. ಅಂತಿಮವಾಗಿ ಶುಕ್ರವಾರ ಬೆಳಿಗ್ಗೆ 8.45ಕ್ಕೆ ಮೊಸಳೆ ಸೆರೆಯಾಯಿತು.</p>.<p>ಹೊಸಪೇಟೆ ಪ್ರಾದೇಶಿಕ ಅರಣ್ಯ ವಲಯದ ಗಸ್ತು ಅರಣ್ಯ ಪಾಲಕ ಬಿ. ರಾಘವೇಂದ್ರ ಮಾತನಾಡಿ, ‘ಸೆರೆ ಹಿಡಿದ ಮೊಸಳೆ ಆರೋಗ್ಯವಾಗಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ತುಂಗಭದ್ರಾ ನದಿ ಬಳಿಯ ತಳವಾರಘಟ್ಟ ಪ್ರದೇಶದ ನೀರಿನಲ್ಲಿ ಬಿಡಲಾಯಿತು’ ಎಂದು ಮಾಹಿತಿ ನೀಡಿದರು.</p>.<p>ಅರಣ್ಯ ವೀಕ್ಷಕ ಬಿ. ನಾಗಪ್ಪ, ಕಂಪ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್. ಚಿನ್ನರಾಜು, ಉಪಾಧ್ಯಕ್ಷ ಶಣ್ಮುಖ, ನಾಗೇಶ, ವಿರುಪಣ್ಣ, ಎಂ. ರಾಜಪ್ಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<p>‘ಕೆರೆಯಲ್ಲಿ ಮತ್ತೊಂದು ಸಣ್ಣ ಮೊಸಳೆ ಇರುವುದಾಗಿ ಜನ ತಿಳಿಸಿದ್ದಾರೆ. ಅದನ್ನೂ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದೆ. ಕೆರೆ ಏರಿಯಲ್ಲಿ ವಾಯು ವಿಹಾರ ನಡೆಸುವವರು ಮೊಸಳೆ ಸೇರಿ ವಿಷಜಂತುಗಳ ಬಗ್ಗೆ ಎಚ್ಚರವಹಿಸಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಕೆ. ದುರುಗಣ್ಣ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>