<p><strong>ಬಳ್ಳಾರಿ</strong>: ‘ನಿಯಮಿತವಾಗಿ ದೇಹ ದಂಡನೆ, ಪೌಷ್ಠಿಕ ಆಹಾರ ಸೇವನೆ ಮೂಲಕ ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು’ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಹೇಳಿದರು.</p>.<p>ವಿಶ್ವ ಮಧುಮೇಹ ದಿನ ಅಂಗವಾಗಿ ಮಧುಮೇಹ ಮತ್ತು ಯೋಗಕ್ಷೇಮ ಎಂಬ ಘೋಷವಾಕ್ಯದಡಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನಜಾಗೃತಿ ವಾಕಥಾನ್ಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಧುಮೇಹ ಎನ್ನುವ ಅನಿಯಂತ್ರಿತ ಖಾಯಿಲೆ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರಿಗೂ ಬರುತ್ತದೆ. ಮಧುಮೇಹ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ, ಕಾಯಿಲೆ ಬರುವುದಕ್ಕೆ ಮೊದಲೇ ನಿಯಂತ್ರಣ ಮಾಡುವುದು ಉತ್ತಮ’ ಎಂದು ಅವರು ಹೇಳಿದರು. </p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮಾತನಾಡಿ, ‘ರಾಜ್ಯ ಸರ್ಕಾರವು ಗೃಹ-ಆರೋಗ್ಯ ಯೋಜನೆ ರೂಪಿಸಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ತೆರಳಿ ಜನರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿ, ಸೂಕ್ತ ಚಿಕಿತ್ಸೆ ನೀಡಿ, ಉಚಿತವಾಗಿ ಔಷದೋಪಚಾರ ಮಾಡಲಾಗುತ್ತದೆ. ದಿನನಿತ್ಯ ಪೌಷ್ಠಿಕ ಆಹಾರ ಸೇವನೆಯ ಬಗ್ಗೆ ಕಾಳಜಿ ವಹಿಸಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ‘ಪ್ರಪಂಚದಾದ್ಯಂತ ಮಧುಮೇಹ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ಐದು ಜನರಲ್ಲಿ ಒಬ್ಬರಿಗೆ ಮಧುಮೇಹ ಕಂಡುಬರುತ್ತದೆ. ದಿನನಿತ್ಯ ನಾವು ಬದುಕುವ ಜೀವನದಲ್ಲಿ ಮಧುಮೇಹದ ಬಗ್ಗೆ ಜಾಗೃತಿ ಹೊಂದುವುದು ಅತೀ ಅವಶ್ಯಕವಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಬಳ್ಳಾರಿ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಶಾಂತಮ್ಮ ಸೇರಿದಂತೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ನಿಯಮಿತವಾಗಿ ದೇಹ ದಂಡನೆ, ಪೌಷ್ಠಿಕ ಆಹಾರ ಸೇವನೆ ಮೂಲಕ ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು’ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಹೇಳಿದರು.</p>.<p>ವಿಶ್ವ ಮಧುಮೇಹ ದಿನ ಅಂಗವಾಗಿ ಮಧುಮೇಹ ಮತ್ತು ಯೋಗಕ್ಷೇಮ ಎಂಬ ಘೋಷವಾಕ್ಯದಡಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನಜಾಗೃತಿ ವಾಕಥಾನ್ಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಧುಮೇಹ ಎನ್ನುವ ಅನಿಯಂತ್ರಿತ ಖಾಯಿಲೆ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರಿಗೂ ಬರುತ್ತದೆ. ಮಧುಮೇಹ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ, ಕಾಯಿಲೆ ಬರುವುದಕ್ಕೆ ಮೊದಲೇ ನಿಯಂತ್ರಣ ಮಾಡುವುದು ಉತ್ತಮ’ ಎಂದು ಅವರು ಹೇಳಿದರು. </p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮಾತನಾಡಿ, ‘ರಾಜ್ಯ ಸರ್ಕಾರವು ಗೃಹ-ಆರೋಗ್ಯ ಯೋಜನೆ ರೂಪಿಸಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ತೆರಳಿ ಜನರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿ, ಸೂಕ್ತ ಚಿಕಿತ್ಸೆ ನೀಡಿ, ಉಚಿತವಾಗಿ ಔಷದೋಪಚಾರ ಮಾಡಲಾಗುತ್ತದೆ. ದಿನನಿತ್ಯ ಪೌಷ್ಠಿಕ ಆಹಾರ ಸೇವನೆಯ ಬಗ್ಗೆ ಕಾಳಜಿ ವಹಿಸಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ‘ಪ್ರಪಂಚದಾದ್ಯಂತ ಮಧುಮೇಹ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ಐದು ಜನರಲ್ಲಿ ಒಬ್ಬರಿಗೆ ಮಧುಮೇಹ ಕಂಡುಬರುತ್ತದೆ. ದಿನನಿತ್ಯ ನಾವು ಬದುಕುವ ಜೀವನದಲ್ಲಿ ಮಧುಮೇಹದ ಬಗ್ಗೆ ಜಾಗೃತಿ ಹೊಂದುವುದು ಅತೀ ಅವಶ್ಯಕವಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಬಳ್ಳಾರಿ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಶಾಂತಮ್ಮ ಸೇರಿದಂತೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>