<p><strong>ಸಿರುಗುಪ್ಪ:</strong> ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗೆ ಬರುವ ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮೂರನೇ ಮಹಡಿಯು ಜೂಜಾಟ, ಇಸ್ಪೀಟ್, ಮದ್ಯಪಾನದಂತಹ ಚಟುವಟಿಕೆಗಳ ತಾಣವಾಗಿದೆ.</p>.<p>ಆಸ್ಪತ್ರೆಯ ಮೂರನೇ ಮಹಡಿಯ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಕಟ್ಟಡ ಕಾರ್ಮಿಕರು ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿ ಗಲೀಜು ಮಾಡುತ್ತಿದ್ದು, ಇಲ್ಲಿನ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೋಗಿಗಳ ಆರೋಪ.</p>.<p>ಕಟ್ಟಡ ಕಾರ್ಮಿಕರೊಂದಿಗೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ಸಿಬ್ಬಂದಿಯೂ ಇಸ್ಪೀಟ್ ಜೂಜಾಟದಲ್ಲಿ ತೊಡಗಿರುವ ಕುರಿತು ಸಾರ್ವಜನಿಕರು ಆಡಳಿತ ವೈದ್ಯಾಧಿಕಾರಿಗಳ ಗಮನಕ್ಕೆ ತಂದರೂ ಕ್ರಮಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>‘ಮೂರನೇ ಮಹಡಿಯನ್ನು ಗುತ್ತಿಗೆದಾರರು ನಮಗೆ ಹಸ್ತಾಂತರ ಮಾಡಿಲ್ಲ. ಇದರಿಂದಾಗಿ ಅಲ್ಲಿ ನಮ್ಮ ಸಿಬ್ಬಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ ಬಗ್ಗೆ ಮಾಹಿತಿ ನಮಗಿಲ್ಲ. ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವುದು’ ಎಂದು ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿ ಗುರುನಾಥ ತಿಳಿಸಿದ್ದಾರೆ.</p>.<p> <strong>ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜೂಜಾಟ ನಡೆಯುತ್ತಿರುವ ಕುರಿತು ತನಿಖೆ ನಡೆಸಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು </strong></p><p><strong>ಡಾ.ಈರಣ್ಣ ಟಿ.ಎಚ್.ಒ. ಸಿರುಗುಪ್ಪ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗೆ ಬರುವ ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮೂರನೇ ಮಹಡಿಯು ಜೂಜಾಟ, ಇಸ್ಪೀಟ್, ಮದ್ಯಪಾನದಂತಹ ಚಟುವಟಿಕೆಗಳ ತಾಣವಾಗಿದೆ.</p>.<p>ಆಸ್ಪತ್ರೆಯ ಮೂರನೇ ಮಹಡಿಯ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಕಟ್ಟಡ ಕಾರ್ಮಿಕರು ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿ ಗಲೀಜು ಮಾಡುತ್ತಿದ್ದು, ಇಲ್ಲಿನ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೋಗಿಗಳ ಆರೋಪ.</p>.<p>ಕಟ್ಟಡ ಕಾರ್ಮಿಕರೊಂದಿಗೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ಸಿಬ್ಬಂದಿಯೂ ಇಸ್ಪೀಟ್ ಜೂಜಾಟದಲ್ಲಿ ತೊಡಗಿರುವ ಕುರಿತು ಸಾರ್ವಜನಿಕರು ಆಡಳಿತ ವೈದ್ಯಾಧಿಕಾರಿಗಳ ಗಮನಕ್ಕೆ ತಂದರೂ ಕ್ರಮಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>‘ಮೂರನೇ ಮಹಡಿಯನ್ನು ಗುತ್ತಿಗೆದಾರರು ನಮಗೆ ಹಸ್ತಾಂತರ ಮಾಡಿಲ್ಲ. ಇದರಿಂದಾಗಿ ಅಲ್ಲಿ ನಮ್ಮ ಸಿಬ್ಬಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ ಬಗ್ಗೆ ಮಾಹಿತಿ ನಮಗಿಲ್ಲ. ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವುದು’ ಎಂದು ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿ ಗುರುನಾಥ ತಿಳಿಸಿದ್ದಾರೆ.</p>.<p> <strong>ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜೂಜಾಟ ನಡೆಯುತ್ತಿರುವ ಕುರಿತು ತನಿಖೆ ನಡೆಸಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು </strong></p><p><strong>ಡಾ.ಈರಣ್ಣ ಟಿ.ಎಚ್.ಒ. ಸಿರುಗುಪ್ಪ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>