ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು–ಬಸ್‌ ಮುಖಾಮುಖಿ ಡಿಕ್ಕಿ; ಚಾಲಕನ ಸಾವು

Last Updated 16 ನವೆಂಬರ್ 2022, 16:05 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕಾರು–ಬಸ್‌ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಕೊಂಡನಾಯಕನಹಳ್ಳಿ ಬಳಿ ಸಂಭವಿಸಿದೆ.

ಅಬ್ದುಲ್‌ ಮದೀನ್‌ ಮೃತ ವ್ಯಕ್ತಿ. ಹರಪನಹಳ್ಳಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್‌ ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನೊಳಗೆ ಜೀವ ಬಿಟ್ಟಿದ್ದ ಚಾಲಕನ ಮೃತದೇಹವನ್ನು ಸ್ಥಳೀಯರ ನೆರವಿನೊಂದಿಗೆ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ನಡು ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಸಾರ್ವಜನಿಕ ಸಂಚಾರ ವ್ಯತ್ಯಯ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT