<p><strong>ಕಂಪ್ಲಿ:</strong> ತಾಲ್ಲೂಕಿನ ನೆಲ್ಲೂಡಿ ಕೊಟ್ಟಾಲು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಮತ್ತು ಆರು ಭತ್ತದ ಹುಲ್ಲಿನ ಬಣವೆಗಳು ಸುಟ್ಟ ಭಸ್ಮವಾದ ಘಟನೆ ಭಾನುವಾರ ನಡೆದಿದೆ.</p>.<p>ಗುರಮ್ಮ ಅವರ ಗುಡಿಸಲು ಮತ್ತು ದಿನಸಿ ಸಾಮಗ್ರಿಗಳು, ರೈತರಾದ ಮಹೇಶ, ರಂಗ, ಚೌಡಪ್ಪ ಅವರಿಗೆ ಸೇರಿದ ತಲಾ ಎರಡು ಬಣವೆಗಳು ಸುಟ್ಟಿವೆ. ಕುಡುತಿನಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.</p>.<p>ಶಾಸಕ ಜೆ.ಎನ್. ಗಣೇಶ್ ಅವರು ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬಳಿಕ ದೂರವಾಣಿ ಮೂಲಕ ಅಧಿಕಾರಿಗಳೊಂದಿಗೆ ಮಾತನಾಡಿ ತ್ವರಿತವಾಗಿ ಪರಿಹಾರದ ವ್ಯವಸ್ಥೆ ಮಾಡುವಂತೆ ಸೂಚಿಸಿದರು.</p>.<p>ಗ್ರಾಮ ಆಡಳಿತ ಅಧಿಕಾರಿ ಚನ್ನಕೇಶವ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ತಾಲ್ಲೂಕಿನ ನೆಲ್ಲೂಡಿ ಕೊಟ್ಟಾಲು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಮತ್ತು ಆರು ಭತ್ತದ ಹುಲ್ಲಿನ ಬಣವೆಗಳು ಸುಟ್ಟ ಭಸ್ಮವಾದ ಘಟನೆ ಭಾನುವಾರ ನಡೆದಿದೆ.</p>.<p>ಗುರಮ್ಮ ಅವರ ಗುಡಿಸಲು ಮತ್ತು ದಿನಸಿ ಸಾಮಗ್ರಿಗಳು, ರೈತರಾದ ಮಹೇಶ, ರಂಗ, ಚೌಡಪ್ಪ ಅವರಿಗೆ ಸೇರಿದ ತಲಾ ಎರಡು ಬಣವೆಗಳು ಸುಟ್ಟಿವೆ. ಕುಡುತಿನಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.</p>.<p>ಶಾಸಕ ಜೆ.ಎನ್. ಗಣೇಶ್ ಅವರು ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬಳಿಕ ದೂರವಾಣಿ ಮೂಲಕ ಅಧಿಕಾರಿಗಳೊಂದಿಗೆ ಮಾತನಾಡಿ ತ್ವರಿತವಾಗಿ ಪರಿಹಾರದ ವ್ಯವಸ್ಥೆ ಮಾಡುವಂತೆ ಸೂಚಿಸಿದರು.</p>.<p>ಗ್ರಾಮ ಆಡಳಿತ ಅಧಿಕಾರಿ ಚನ್ನಕೇಶವ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>