<p><strong>ಹೂವಿನಹಡಗಲಿ</strong>: ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ವಿಲೀನಗೊಳಿಸುವ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ತೀರ್ಮಾನವನ್ನು ಸರ್ಕಾರ ಕೈ ಬಿಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್ಎಫ್) ಕಾರ್ಯಕರ್ತರು ಆಗ್ರಹಿಸಿದರು.</p>.<p>ಫೆಡರೇಷನ್ ಪದಾಧಿಕಾರಿಗಳು ಶನಿವಾರ ತಾಲ್ಲೂಕು ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>ಎಐಎಸ್ಎಫ್ ಸಂಚಾಲಕ ಪಿ.ಎಂ.ತೋಂಟದಾರ್ಯ ಮಾತನಾಡಿ, ಸರ್ಕಾರ ವಿಲೀನ ಪ್ರಕ್ರಿಯೆ ಕೈಗೊಂಡರೆ ರಾಜ್ಯದಲ್ಲಿ 27,000 ಕನ್ನಡ ಶಾಲೆಗಳು ಮುಚ್ಚಲ್ಪಡುತ್ತವೆ. ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧದ ಈ ತೀರ್ಮಾನದಿಂದ ಗ್ರಾಮೀಣ ಭಾಗದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ದುಡಿಯುವ ವರ್ಗದ ಮಕ್ಕಳನ್ನು ಅಕ್ಷರದಿಂದ ವಂಚಿತರನ್ನಾಗಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.</p>.<p>ಶಾಲೆಗಳು ದೂರವಾಗುವುದರಿಂದ ಹೆಣ್ಣು ಮಕ್ಕಳು ಶಿಕ್ಷಣ ಮೊಟಕುಗೊಳಿಸುತ್ತಾರೆ. ಅಂಗವಿಕಲ ಮಕ್ಕಳಿಗೂ ತೊಂದರೆಯಾಗುತ್ತದೆ. ಹಳ್ಳಿಗಳಲ್ಲಿ ಶಾಲೆ ಇರದಿದ್ದರೆ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗಲಿದೆ. ಹೀಗಾಗಿ ಇಂತಹ ಪ್ರಸ್ತಾವವನ್ನು ಮುಖ್ಯಮಂತ್ರಿಗಳು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.</p>.<p>ಎಐಎಸ್ಎಫ್ ಶಾಂತರಾಜ ಜೈನ್, ಜಂಗ್ಲಿಸಾಬ್, ಮಾಲತೇಶ, ಹನುಮಂತ, ಅಭಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ವಿಲೀನಗೊಳಿಸುವ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ತೀರ್ಮಾನವನ್ನು ಸರ್ಕಾರ ಕೈ ಬಿಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್ಎಫ್) ಕಾರ್ಯಕರ್ತರು ಆಗ್ರಹಿಸಿದರು.</p>.<p>ಫೆಡರೇಷನ್ ಪದಾಧಿಕಾರಿಗಳು ಶನಿವಾರ ತಾಲ್ಲೂಕು ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>ಎಐಎಸ್ಎಫ್ ಸಂಚಾಲಕ ಪಿ.ಎಂ.ತೋಂಟದಾರ್ಯ ಮಾತನಾಡಿ, ಸರ್ಕಾರ ವಿಲೀನ ಪ್ರಕ್ರಿಯೆ ಕೈಗೊಂಡರೆ ರಾಜ್ಯದಲ್ಲಿ 27,000 ಕನ್ನಡ ಶಾಲೆಗಳು ಮುಚ್ಚಲ್ಪಡುತ್ತವೆ. ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧದ ಈ ತೀರ್ಮಾನದಿಂದ ಗ್ರಾಮೀಣ ಭಾಗದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ದುಡಿಯುವ ವರ್ಗದ ಮಕ್ಕಳನ್ನು ಅಕ್ಷರದಿಂದ ವಂಚಿತರನ್ನಾಗಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.</p>.<p>ಶಾಲೆಗಳು ದೂರವಾಗುವುದರಿಂದ ಹೆಣ್ಣು ಮಕ್ಕಳು ಶಿಕ್ಷಣ ಮೊಟಕುಗೊಳಿಸುತ್ತಾರೆ. ಅಂಗವಿಕಲ ಮಕ್ಕಳಿಗೂ ತೊಂದರೆಯಾಗುತ್ತದೆ. ಹಳ್ಳಿಗಳಲ್ಲಿ ಶಾಲೆ ಇರದಿದ್ದರೆ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗಲಿದೆ. ಹೀಗಾಗಿ ಇಂತಹ ಪ್ರಸ್ತಾವವನ್ನು ಮುಖ್ಯಮಂತ್ರಿಗಳು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.</p>.<p>ಎಐಎಸ್ಎಫ್ ಶಾಂತರಾಜ ಜೈನ್, ಜಂಗ್ಲಿಸಾಬ್, ಮಾಲತೇಶ, ಹನುಮಂತ, ಅಭಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>