<p><strong>ಹೂವಿನಹಡಗಲಿ:</strong> ತಮ್ಮ ವರ್ಗಾವಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜಿ. ಸಂತೋಷಕುಮಾರ್ ಅವರು ಪಟ್ಟಣದ ಕಾಯಕನಗರದ ಅಲೆಮಾರಿ ಕುಟುಂಬದ ಮಕ್ಕಳಿಗೆ ಜನನ ಪ್ರಮಾಣಪತ್ರವನ್ನು ಶನಿವಾರ ವಿತರಿಸಿದರು.</p>.<p>ಅಲೆಮಾರಿ ಸಿಂಧೋಳಿ ಜನಾಂಗದ 14 ಮಕ್ಕಳಿಗೆ ಜನನ ಪ್ರಮಾಣ ಪತ್ರ ಸಿಗದ ಕಾರಣ ಶಾಲಾ ಪ್ರವೇಶಾತಿಗೆ ತೊಂದರೆ ಉಂಟಾಗಿತ್ತು. ಸಂತೋಷಕುಮಾರ್ ಅವರು ಇದನ್ನು ಗಮನಿಸಿ, ನ್ಯಾಯಾಲಯದಿಂದ ಆದೇಶ ಪಡೆದು ಗ್ರಾಮ ಆಡಳಿತಾಧಿಕಾರಿ ಮೂಲಕ ಜನನ ನೋಂದಣಿ ಮಾಡಿಸಿದ್ದಾರೆ.</p>.<p>ನ್ಯಾಯಾಲಯ ಹಾಗೂ ತಾಲ್ಲೂಕು ಕಚೇರಿಯಲ್ಲಿ ಶುಲ್ಕ ಪಡೆಯದೆ ಜನನ ಪ್ರಮಾಣ ಪತ್ರ ಮಂಜೂರು ಮಾಡಿಸಿ, ಅಲೆಮಾರಿ ಕುಟುಂಬಗಳಿಗೆ ವಿತರಿಸಿದರು.</p>.<p><strong>ಬೀಳ್ಕೊಡುಗೆ</strong>: ವರ್ಗಾವಣೆಗೊಂಡ ತಹಶೀಲ್ದಾರ್ ಜಿ. ಸಂತೋಷಕುಮಾರ್ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.</p>.<p>ಸಂಘದ ಅಧ್ಯಕ್ಷ ಎ. ಕೊಟ್ರಗೌಡ, ಗೌರವಾಧ್ಯಕ್ಷ ಎಂ.ಪಿ.ಎಂ. ಅಶೋಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪರಮೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರ್, ಸಮಾಜ ಕಲ್ಯಾಣಾಧಿಕಾರಿ ಆನಂದ ಡೊಳ್ಳಿನ, ಸಿಡಿಪಿಒ ಬಿ. ರಾಮನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ತಮ್ಮ ವರ್ಗಾವಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜಿ. ಸಂತೋಷಕುಮಾರ್ ಅವರು ಪಟ್ಟಣದ ಕಾಯಕನಗರದ ಅಲೆಮಾರಿ ಕುಟುಂಬದ ಮಕ್ಕಳಿಗೆ ಜನನ ಪ್ರಮಾಣಪತ್ರವನ್ನು ಶನಿವಾರ ವಿತರಿಸಿದರು.</p>.<p>ಅಲೆಮಾರಿ ಸಿಂಧೋಳಿ ಜನಾಂಗದ 14 ಮಕ್ಕಳಿಗೆ ಜನನ ಪ್ರಮಾಣ ಪತ್ರ ಸಿಗದ ಕಾರಣ ಶಾಲಾ ಪ್ರವೇಶಾತಿಗೆ ತೊಂದರೆ ಉಂಟಾಗಿತ್ತು. ಸಂತೋಷಕುಮಾರ್ ಅವರು ಇದನ್ನು ಗಮನಿಸಿ, ನ್ಯಾಯಾಲಯದಿಂದ ಆದೇಶ ಪಡೆದು ಗ್ರಾಮ ಆಡಳಿತಾಧಿಕಾರಿ ಮೂಲಕ ಜನನ ನೋಂದಣಿ ಮಾಡಿಸಿದ್ದಾರೆ.</p>.<p>ನ್ಯಾಯಾಲಯ ಹಾಗೂ ತಾಲ್ಲೂಕು ಕಚೇರಿಯಲ್ಲಿ ಶುಲ್ಕ ಪಡೆಯದೆ ಜನನ ಪ್ರಮಾಣ ಪತ್ರ ಮಂಜೂರು ಮಾಡಿಸಿ, ಅಲೆಮಾರಿ ಕುಟುಂಬಗಳಿಗೆ ವಿತರಿಸಿದರು.</p>.<p><strong>ಬೀಳ್ಕೊಡುಗೆ</strong>: ವರ್ಗಾವಣೆಗೊಂಡ ತಹಶೀಲ್ದಾರ್ ಜಿ. ಸಂತೋಷಕುಮಾರ್ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.</p>.<p>ಸಂಘದ ಅಧ್ಯಕ್ಷ ಎ. ಕೊಟ್ರಗೌಡ, ಗೌರವಾಧ್ಯಕ್ಷ ಎಂ.ಪಿ.ಎಂ. ಅಶೋಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪರಮೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರ್, ಸಮಾಜ ಕಲ್ಯಾಣಾಧಿಕಾರಿ ಆನಂದ ಡೊಳ್ಳಿನ, ಸಿಡಿಪಿಒ ಬಿ. ರಾಮನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>