<p><strong>ಹೂವಿನಹಡಗಲಿ:</strong> ತಮ್ಮ ವರ್ಗಾವಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜಿ. ಸಂತೋಷಕುಮಾರ್ ಅವರು ಪಟ್ಟಣದ ಕಾಯಕನಗರದ ಅಲೆಮಾರಿ ಕುಟುಂಬದ ಮಕ್ಕಳಿಗೆ ಜನನ ಪ್ರಮಾಣಪತ್ರವನ್ನು ಶನಿವಾರ ವಿತರಿಸಿದರು.</p>.<p>ಅಲೆಮಾರಿ ಸಿಂಧೋಳಿ ಜನಾಂಗದ 14 ಮಕ್ಕಳಿಗೆ ಜನನ ಪ್ರಮಾಣ ಪತ್ರ ಸಿಗದ ಕಾರಣ ಶಾಲಾ ಪ್ರವೇಶಾತಿಗೆ ತೊಂದರೆ ಉಂಟಾಗಿತ್ತು. ಸಂತೋಷಕುಮಾರ್ ಅವರು ಇದನ್ನು ಗಮನಿಸಿ, ನ್ಯಾಯಾಲಯದಿಂದ ಆದೇಶ ಪಡೆದು ಗ್ರಾಮ ಆಡಳಿತಾಧಿಕಾರಿ ಮೂಲಕ ಜನನ ನೋಂದಣಿ ಮಾಡಿಸಿದ್ದಾರೆ.</p>.<p>ನ್ಯಾಯಾಲಯ ಹಾಗೂ ತಾಲ್ಲೂಕು ಕಚೇರಿಯಲ್ಲಿ ಶುಲ್ಕ ಪಡೆಯದೆ ಜನನ ಪ್ರಮಾಣ ಪತ್ರ ಮಂಜೂರು ಮಾಡಿಸಿ, ಅಲೆಮಾರಿ ಕುಟುಂಬಗಳಿಗೆ ವಿತರಿಸಿದರು.</p>.<p><strong>ಬೀಳ್ಕೊಡುಗೆ</strong>: ವರ್ಗಾವಣೆಗೊಂಡ ತಹಶೀಲ್ದಾರ್ ಜಿ. ಸಂತೋಷಕುಮಾರ್ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.</p>.<p>ಸಂಘದ ಅಧ್ಯಕ್ಷ ಎ. ಕೊಟ್ರಗೌಡ, ಗೌರವಾಧ್ಯಕ್ಷ ಎಂ.ಪಿ.ಎಂ. ಅಶೋಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪರಮೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರ್, ಸಮಾಜ ಕಲ್ಯಾಣಾಧಿಕಾರಿ ಆನಂದ ಡೊಳ್ಳಿನ, ಸಿಡಿಪಿಒ ಬಿ. ರಾಮನಗೌಡ ಇದ್ದರು.</p>
<p><strong>ಹೂವಿನಹಡಗಲಿ:</strong> ತಮ್ಮ ವರ್ಗಾವಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜಿ. ಸಂತೋಷಕುಮಾರ್ ಅವರು ಪಟ್ಟಣದ ಕಾಯಕನಗರದ ಅಲೆಮಾರಿ ಕುಟುಂಬದ ಮಕ್ಕಳಿಗೆ ಜನನ ಪ್ರಮಾಣಪತ್ರವನ್ನು ಶನಿವಾರ ವಿತರಿಸಿದರು.</p>.<p>ಅಲೆಮಾರಿ ಸಿಂಧೋಳಿ ಜನಾಂಗದ 14 ಮಕ್ಕಳಿಗೆ ಜನನ ಪ್ರಮಾಣ ಪತ್ರ ಸಿಗದ ಕಾರಣ ಶಾಲಾ ಪ್ರವೇಶಾತಿಗೆ ತೊಂದರೆ ಉಂಟಾಗಿತ್ತು. ಸಂತೋಷಕುಮಾರ್ ಅವರು ಇದನ್ನು ಗಮನಿಸಿ, ನ್ಯಾಯಾಲಯದಿಂದ ಆದೇಶ ಪಡೆದು ಗ್ರಾಮ ಆಡಳಿತಾಧಿಕಾರಿ ಮೂಲಕ ಜನನ ನೋಂದಣಿ ಮಾಡಿಸಿದ್ದಾರೆ.</p>.<p>ನ್ಯಾಯಾಲಯ ಹಾಗೂ ತಾಲ್ಲೂಕು ಕಚೇರಿಯಲ್ಲಿ ಶುಲ್ಕ ಪಡೆಯದೆ ಜನನ ಪ್ರಮಾಣ ಪತ್ರ ಮಂಜೂರು ಮಾಡಿಸಿ, ಅಲೆಮಾರಿ ಕುಟುಂಬಗಳಿಗೆ ವಿತರಿಸಿದರು.</p>.<p><strong>ಬೀಳ್ಕೊಡುಗೆ</strong>: ವರ್ಗಾವಣೆಗೊಂಡ ತಹಶೀಲ್ದಾರ್ ಜಿ. ಸಂತೋಷಕುಮಾರ್ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.</p>.<p>ಸಂಘದ ಅಧ್ಯಕ್ಷ ಎ. ಕೊಟ್ರಗೌಡ, ಗೌರವಾಧ್ಯಕ್ಷ ಎಂ.ಪಿ.ಎಂ. ಅಶೋಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪರಮೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರ್, ಸಮಾಜ ಕಲ್ಯಾಣಾಧಿಕಾರಿ ಆನಂದ ಡೊಳ್ಳಿನ, ಸಿಡಿಪಿಒ ಬಿ. ರಾಮನಗೌಡ ಇದ್ದರು.</p>